AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ನಿಲ್ತಾರೆ: ಬಿಜೆಪಿ ಹಿರಿಯ ನಾಯಕ ಭವಿಷ್ಯ

ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಭವಿಷ್ಯ ನುಡಿದಿದ್ದಾರೆ.

ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ನಿಲ್ತಾರೆ: ಬಿಜೆಪಿ ಹಿರಿಯ ನಾಯಕ ಭವಿಷ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 27, 2022 | 2:31 PM

ಹುಬ್ಬಳ್ಳಿ: ಒಂದೆಡೆ ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಮತ್ತೊಂದೆಡೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವ ಚರ್ಚೆ ಜೋರಾಗಿದೆ. ಅಲ್ಲದೇ ಇದು ಭಾರೀ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವ ಕೇವಲ ಸುಳಿವು ಮಾತ್ರ ಕೊಟ್ಟಿದ್ದಾರೆ. ಆದ್ರೆ, ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು)ನ.27) ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಬಸವರಾಜ್ ಹೊರಟ್ಟಿ, ನನಗೆ ಬಹಳ ಚೆನ್ನಾಗಿ ರಾಜಕಾರಣ ಗೊತ್ತಿದೆ. ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ನಿಲ್ಲುತ್ತಾರೆ. ಬಹಳ ಪಾಪ್ಯುಲರ್ ಆದ್ರೆ ಹೀಗೆ ಆಗತ್ತೆ. ಸಿದ್ದರಾಮಯ್ಯ ಬದಾಮಿಗೆ ಜಾತಿ ಮೇಲೆ ಬಂದು ನಿಂತ್ರು ಎಂದು ಹೇಳಿದರು.

ಸೋಲು ಗೆಲವು ಮುಖ್ಯ ಅಲ್ಲ ಎಂದು ಸಿದ್ದರಾಮಯ್ಯಗೆ ನಾನು ಹೇಳಿದ್ದೆ. ಒಂದು ಕ್ಷೇತ್ರ ಆಯ್ಕೆ ಮಾಡಕೊಬೇಕು. ಹೀಗಾಗಿ ಅವರು ವರುಣಾಗೆ ನಿಲ್ಲುತ್ತಾರೆ. ಸಿದ್ದರಾಮಯ್ಯ ,ಡಿಕೆಶಿವಕುಮಾರ್ ಇಬ್ಬರು ಮುಖ್ಯಮಂತ್ರಿ ಆಗಬೇಕು ಅಂತಿದ್ದಾರೆ. ಏನಾದ್ರೂ ಮಾಡಿ ಸಿದ್ದರಾಮಯ್ಯ ಹೋಗಲಿ‌ ಅಂತಾ ಡಿಕೆಶಿವಕುಮಾರ್, ಡಿಕೆ ಶಿವಕುಮಾರ್ ಹೋಗಲಿ ಅಂತಾ ಸಿದ್ದರಾಮಯ್ಯ. ಆ ಕಾರಣಕ್ಕೆ ಹೀಗೆ ಆಗ್ತಿದೆ ಎಂದು ಹೊರಟ್ಟಿ ಲೇವಡಿ ಮಾಡಿದರು.

ಸಭಾಪತಿ ಸ್ಥಾನ ಕೊಡುವುದಾಗಿ ಬಿಜೆಪಿ ಹೇಳಿತ್ತು. ಬಿಜೆಪಿಯವರು ನನಗೆ ಕೊಟ್ಟ ಮಾತು ಉಳಸಿಕೊಂಡಿಲ್ಲ. ಮಾತು ಕೊಟ್ಟಂಗೆ nಡೆಯಬೇಕಿತ್ತು.ಇದೀಗ ನನಗೆ ಅದರ ಮೇಲೆ ಅಸೆನೇ ಹೋಗಿದೆ ಎಂದ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್