AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ, ಶೀಘ್ರದಲ್ಲಿ ವಿಡಿಯೋ ಬಿಡುಗಡೆ ಮಾಡುವೆ: ಕೈ ಶಾಸಕ

ಬಿಎಸ್​ ಯಡಿಯೂರಪ್ಪ ಪಿಎ ಆಗಿದ್ದ ಸಂತೋಷ್ ಗೋಲ್ಡ್ ಫಿಂಚ್ ಹೋಟೆಲ್​ನಲ್ಲಿ ನಮ್ಮ ಶಾಸಕನನ್ನು ಭೇಟಿಯಾಗಿದ್ದಾನೆ. ಯಾರು ಓಡಾಡುತ್ತಿದ್ದಾರೋ ಅವರ ವಿಡಿಯೋ ನಮ್ಮ ಬಳಿ ಇದೆ. ಕೆಲವೇ ದಿನಗಳಲ್ಲಿ ಆ ವಿಡಿಯೋ ಬಿಡುಗಡೆ ಮಾಡುತ್ತೇವೆ ಎಂದು ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಶಾಸಕ ರವಿ ಗಣಿಗ ಹೇಳಿದರು.

ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ, ಶೀಘ್ರದಲ್ಲಿ ವಿಡಿಯೋ ಬಿಡುಗಡೆ ಮಾಡುವೆ: ಕೈ ಶಾಸಕ
ಶಾಸಕ ರವಿ ಗಣಿಗ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Oct 27, 2023 | 10:17 AM

Share

ದಾವಣಗೆರೆ ಅ.27: ಕಾಂಗ್ರೆಸ್ (Congress), ಜೆಡಿಎಸ್ (JDS)​ ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ. ಬೆಳಗ್ಗೆ ರೆಡಿಯಾಗಿ ಕಾಂಗ್ರೆಸ್ ಶಾಸಕರ‌‌ ಮನೆಗೆ ಹೋಗುತ್ತಾರೆ. ಸ್ಪೆಷಲ್ ಫೈಟ್ ಮಾಡುತ್ತೇವೆ, ಅಮಿತ್ ಶಾ ಅವರನ್ನು ಮೀಟ್ ಮಾಡಿಸುತ್ತೇವೆ. 50 ಕೋಟಿ ರೂಪಾಯಿ ಕೊಡುತ್ತೇವೆ ಅಂತಾ ಹೇಳಿ ಅಮಿಷ ಒಡ್ಡುತ್ತಾರೆ. ಈ ಗ್ಯಾಂಗ್​ನಲ್ಲಿ ಬಿಎಸ್​ ಯಡಿಯೂರಪ್ಪ (BS Yediyurappa) ಪಿಎ ಆಗಿದ್ದ ಸಂತೋಷ್ ಸಹ ಇದ್ದಾರೆ ಎಂದು ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಶಾಸಕ ರವಿ ಗಣಿಗ (Ravi Ganig) ಆರೋಪ ಮಾಡಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಗೋಲ್ಡ್ ಫಿಂಚ್ ಹೋಟೆಲ್​ನಲ್ಲಿ ನಮ್ಮ ಶಾಸಕನನ್ನು ಭೇಟಿಯಾಗಿದ್ದಾನೆ. ಯಾರು ಓಡಾಡುತ್ತಿದ್ದಾರೋ ಅವರ ವಿಡಿಯೋ ನಮ್ಮ ಬಳಿ ಇದೆ. ಕೆಲವೇ ದಿನಗಳಲ್ಲಿ ಆ ವಿಡಿಯೋ ಬಿಡುಗಡೆ ಮಾಡುತ್ತೇವೆ. ಆದರೆ ನಮ್ಮ ಶಾಸಕರು ಅವರ ಆಮಿಷಗಳಿಗೆ ಬಲಿಯಾಗುವುದಿಲ್ಲ ಎಂದರು.

ಇದನ್ನೂ ಓದಿ: ’ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಸಾಧ್ಯವಾದ ಅಂಶಗಳು’: ಕಾಂಗ್ರೆಸ್​ ವಿರುದ್ಧ ಬಿಜೆಪಿ ಕಿಡಿ

ಹುಲಿ ಉಗುರು ಧರಿಸಿದ ಹಿನ್ನೆಲೆಯಲ್ಲಿ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ್​ ಬಂಧಿಸಿದ ವಿಚಾರವಾಗಿ ಮಾತನಾಡಿದ ಅವರು ಹುಲಿ ಉಗುರು ಹಾಕಿಕೊಂಡಿದ್ದಾನೆ ಎಂದು ಅಮಾಯಕ ರೈತನನ್ನು ಬಂಧನ ಮಾಡಿದ್ದೀರಿ. ಅದೇ ರೀತಿ ಯಾರು ಯಾರು ಹಾಕಿಕೊಂಡಿದ್ದಾರೋ ಅವರನ್ನು ಕೂಡ ಬಂಧನ ಮಾಡಿ. ಒಬ್ಬರಿಗೆ ಒಂದು ಕಾನೂನು ಇನ್ನೊಬ್ಬರಿಗೆ ಒಂದು ಕಾನೂನಾ? ಎಂದು ಪ್ರಶ್ನಿಸಿದ್ದಾರೆ.

ಅಮಾಯಕ ಪೂಜಾರಿಗಳನ್ನು, ಸಂತೋಷ್​ನನ್ನು ಅರೆಸ್ಟ್‌ ಮಾಡಿದ್ರಿ. ಸಂತೋಷ್ ಶೋಕಿಗಾಗಿ ಹಾಕಿಕೊಳ್ಳುತ್ತಿದ್ದನು. ಆತನನ್ನು ಬಿಗ್ ಬಾಸ್ ಮನೆಯಿಂದಲೇ ಅರೆಸ್ಟ್ ಮಾಡಿದ್ರಿ. ಅದೇ ರೀತಿ ಎಲ್ಲಾರನ್ನು ಅರೆಸ್ಟ್ ಮಾಡಿ ನೋಡೋಣಾ. ನಮ್ಮದೇ ಸರ್ಕಾರ ಇದೆ ಅದಕ್ಕೆ ಹೇಳುತ್ತಿರುವುದು. ಸೆಲೆಬ್ರಿಟಿಗೆ ಒಂದು ಕಾನೂನು ಸಾಮಾನ್ಯನಿಗೆ ಒಂದು ಕಾನೂನಾ. ಎಲ್ಲಾರಿಗೂ ನೋಟೀಸ್ ಕೊಡುವ ಬದಲು ಅರೆಸ್ಟ್ ಮಾಡಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ