AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ, ಶೀಘ್ರದಲ್ಲಿ ವಿಡಿಯೋ ಬಿಡುಗಡೆ ಮಾಡುವೆ: ಕೈ ಶಾಸಕ

ಬಿಎಸ್​ ಯಡಿಯೂರಪ್ಪ ಪಿಎ ಆಗಿದ್ದ ಸಂತೋಷ್ ಗೋಲ್ಡ್ ಫಿಂಚ್ ಹೋಟೆಲ್​ನಲ್ಲಿ ನಮ್ಮ ಶಾಸಕನನ್ನು ಭೇಟಿಯಾಗಿದ್ದಾನೆ. ಯಾರು ಓಡಾಡುತ್ತಿದ್ದಾರೋ ಅವರ ವಿಡಿಯೋ ನಮ್ಮ ಬಳಿ ಇದೆ. ಕೆಲವೇ ದಿನಗಳಲ್ಲಿ ಆ ವಿಡಿಯೋ ಬಿಡುಗಡೆ ಮಾಡುತ್ತೇವೆ ಎಂದು ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಶಾಸಕ ರವಿ ಗಣಿಗ ಹೇಳಿದರು.

ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ, ಶೀಘ್ರದಲ್ಲಿ ವಿಡಿಯೋ ಬಿಡುಗಡೆ ಮಾಡುವೆ: ಕೈ ಶಾಸಕ
ಶಾಸಕ ರವಿ ಗಣಿಗ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ವಿವೇಕ ಬಿರಾದಾರ|

Updated on: Oct 27, 2023 | 10:17 AM

Share

ದಾವಣಗೆರೆ ಅ.27: ಕಾಂಗ್ರೆಸ್ (Congress), ಜೆಡಿಎಸ್ (JDS)​ ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ. ಬೆಳಗ್ಗೆ ರೆಡಿಯಾಗಿ ಕಾಂಗ್ರೆಸ್ ಶಾಸಕರ‌‌ ಮನೆಗೆ ಹೋಗುತ್ತಾರೆ. ಸ್ಪೆಷಲ್ ಫೈಟ್ ಮಾಡುತ್ತೇವೆ, ಅಮಿತ್ ಶಾ ಅವರನ್ನು ಮೀಟ್ ಮಾಡಿಸುತ್ತೇವೆ. 50 ಕೋಟಿ ರೂಪಾಯಿ ಕೊಡುತ್ತೇವೆ ಅಂತಾ ಹೇಳಿ ಅಮಿಷ ಒಡ್ಡುತ್ತಾರೆ. ಈ ಗ್ಯಾಂಗ್​ನಲ್ಲಿ ಬಿಎಸ್​ ಯಡಿಯೂರಪ್ಪ (BS Yediyurappa) ಪಿಎ ಆಗಿದ್ದ ಸಂತೋಷ್ ಸಹ ಇದ್ದಾರೆ ಎಂದು ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಶಾಸಕ ರವಿ ಗಣಿಗ (Ravi Ganig) ಆರೋಪ ಮಾಡಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಗೋಲ್ಡ್ ಫಿಂಚ್ ಹೋಟೆಲ್​ನಲ್ಲಿ ನಮ್ಮ ಶಾಸಕನನ್ನು ಭೇಟಿಯಾಗಿದ್ದಾನೆ. ಯಾರು ಓಡಾಡುತ್ತಿದ್ದಾರೋ ಅವರ ವಿಡಿಯೋ ನಮ್ಮ ಬಳಿ ಇದೆ. ಕೆಲವೇ ದಿನಗಳಲ್ಲಿ ಆ ವಿಡಿಯೋ ಬಿಡುಗಡೆ ಮಾಡುತ್ತೇವೆ. ಆದರೆ ನಮ್ಮ ಶಾಸಕರು ಅವರ ಆಮಿಷಗಳಿಗೆ ಬಲಿಯಾಗುವುದಿಲ್ಲ ಎಂದರು.

ಇದನ್ನೂ ಓದಿ: ’ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಸಾಧ್ಯವಾದ ಅಂಶಗಳು’: ಕಾಂಗ್ರೆಸ್​ ವಿರುದ್ಧ ಬಿಜೆಪಿ ಕಿಡಿ

ಹುಲಿ ಉಗುರು ಧರಿಸಿದ ಹಿನ್ನೆಲೆಯಲ್ಲಿ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ್​ ಬಂಧಿಸಿದ ವಿಚಾರವಾಗಿ ಮಾತನಾಡಿದ ಅವರು ಹುಲಿ ಉಗುರು ಹಾಕಿಕೊಂಡಿದ್ದಾನೆ ಎಂದು ಅಮಾಯಕ ರೈತನನ್ನು ಬಂಧನ ಮಾಡಿದ್ದೀರಿ. ಅದೇ ರೀತಿ ಯಾರು ಯಾರು ಹಾಕಿಕೊಂಡಿದ್ದಾರೋ ಅವರನ್ನು ಕೂಡ ಬಂಧನ ಮಾಡಿ. ಒಬ್ಬರಿಗೆ ಒಂದು ಕಾನೂನು ಇನ್ನೊಬ್ಬರಿಗೆ ಒಂದು ಕಾನೂನಾ? ಎಂದು ಪ್ರಶ್ನಿಸಿದ್ದಾರೆ.

ಅಮಾಯಕ ಪೂಜಾರಿಗಳನ್ನು, ಸಂತೋಷ್​ನನ್ನು ಅರೆಸ್ಟ್‌ ಮಾಡಿದ್ರಿ. ಸಂತೋಷ್ ಶೋಕಿಗಾಗಿ ಹಾಕಿಕೊಳ್ಳುತ್ತಿದ್ದನು. ಆತನನ್ನು ಬಿಗ್ ಬಾಸ್ ಮನೆಯಿಂದಲೇ ಅರೆಸ್ಟ್ ಮಾಡಿದ್ರಿ. ಅದೇ ರೀತಿ ಎಲ್ಲಾರನ್ನು ಅರೆಸ್ಟ್ ಮಾಡಿ ನೋಡೋಣಾ. ನಮ್ಮದೇ ಸರ್ಕಾರ ಇದೆ ಅದಕ್ಕೆ ಹೇಳುತ್ತಿರುವುದು. ಸೆಲೆಬ್ರಿಟಿಗೆ ಒಂದು ಕಾನೂನು ಸಾಮಾನ್ಯನಿಗೆ ಒಂದು ಕಾನೂನಾ. ಎಲ್ಲಾರಿಗೂ ನೋಟೀಸ್ ಕೊಡುವ ಬದಲು ಅರೆಸ್ಟ್ ಮಾಡಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ