AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament monsoon session ರಾಜ್ಯಸಭೆ ಕಲಾಪದಿಂದ ಆಪ್ ಸದಸ್ಯ ಸಂಜಯ್ ಸಿಂಗ್ ಅಮಾನತು

ಮಂಗಳವಾರ  7 ಟಿಎಂಸಿ,  ಡಿಎಂಕೆಯ ಆರು ಮತ್ತು ಸಿಪಿಐ, ಸಿಪಿಎಂ, ಟಿಆರ್​​ಎಸ್ ಪಕ್ಷದ  ಸದಸ್ಯರನ್ನು ಕಲಾಪದಿಂದ ಅಮಾನತು ಮಾಡಲಾಗಿತ್ತು. ಇಲ್ಲಿಯವರಿಗೆ 24 ಸಂಸದರನ್ನು ಕಲಾಪದಿಂದ ಅಮಾನತು  ಮಾಡಲಾಗಿದೆ.

Parliament monsoon session ರಾಜ್ಯಸಭೆ ಕಲಾಪದಿಂದ ಆಪ್ ಸದಸ್ಯ  ಸಂಜಯ್ ಸಿಂಗ್ ಅಮಾನತು
ಸಂಜಯ್ ಸಿಂಗ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 27, 2022 | 1:10 PM

Share

ರಾಜ್ಯಸಭಾ ಕಲಾಪ ವೇಳೆ ಅಶಿಸ್ತಿನ ವರ್ತನೆಗಾಗಿ ಆಮ್ ಆದ್ಮಿ ಪಕ್ಷದ (AAP) ಸದಸ್ಯ ಸಂಜಯ್ ಸಿಂಗ್ (Sanjay Singh)  ಅವರನ್ನು ಒಂದು ವಾರಗಳ ಕಾಲ ರಾಜ್ಯಸಭೆಯ (Rajya sabha) ಕಲಾಪದಿಂದ ಅಮಾನತು ಮಾಡಲಾಗಿದೆ.  ವಿರೋಧ ಪಕ್ಷದ 19 ಸಂಸದರನ್ನು ಮಂಗಳವಾರ ಕಲಾಪದಿಂದ ಅಮಾನತು ಮಾಡಿದ ಬೆನ್ನಲ್ಲೇ ಇಂದು(ಬುಧವಾರ) ಸಂಜಯ್ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ. ನಿನ್ನೆ  7 ಟಿಎಂಸಿ,  ಡಿಎಂಕೆಯ ಆರು ಮತ್ತು ಸಿಪಿಐ, ಸಿಪಿಎಂ, ಟಿಆರ್​​ಎಸ್ ಪಕ್ಷದ  ಸದಸ್ಯರನ್ನು ಕಲಾಪದಿಂದ ಅಮಾನತು ಮಾಡಲಾಗಿತ್ತು. ಇಲ್ಲಿಯವರಿಗೆ 24 ಸಂಸದರನ್ನು ಕಲಾಪದಿಂದ ಅಮಾನತು  ಮಾಡಲಾಗಿದೆ.  12 ಗಂಟೆಗೆ ಪ್ರಶ್ನೋತ್ತರ ವೇಳೆಗಾಗಿ ಸದನ ಕಲಾಪ ಪುನಾರಂಭವಾದಾಗ ಉಪ ಸಭಾಪತಿ ಹರಿವಂಶ್ ಅವರು ಮಂಗಳವಾರ ಪೇಪರ್ ಹರಿದು ಅದನ್ನು ಸಭಾಪತಿಯವರತ್ತ ಎಸೆದಿದ್ದಕ್ಕಾಗಿ ಸಂಜಯ್ ಸಿಂಗ್ ಅವರನ್ನು ಅಮಾನತು ಮಾಡಿದ್ದಾರೆ. ಸಿಂಗ್ ಅವರ ವರ್ತನೆ ಅಶಿಸ್ತಿನಿಂದ ಕೂಡಿದ್ದು ಇದು ಸಭಾಪತಿಯವರಿಗೆ ಮಾಡಿದ ಅವಮಾನ ಎಂದು ಉಪ ಸಭಾಪತಿ ಹೇಳಿದ್ದಾರೆ. ಇದಾದ ಕೂಡಲೇ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರು ಸಿಂಗ್ ಅವರನ್ನು ಒಂದು ವಾರ ರಾಜ್ಯಸಭಾ ಕಲಾಪದಿಂದ ಅಮಾನತು ಮಾಡುವ ನಿರ್ಣಯ ಅಂಗೀಕರಿಸಿದರು.

ಮಂಗಳವಾರ ರಾಜ್ಯಸಭೆಯಲ್ಲಿ ಸಭಾಪತಿ ಪೀಠದ ಎದುರು ನಾಮಫಲಕ ಪ್ರದರ್ಶನ ಮಾಡಿದ್ದಕ್ಕೆ 19 ಸದಸ್ಯರನ್ನು  ಒಂದು ವಾರ ಕಲಾಪದಿಂದ ಅಮಾನತು ಮಾಡಲಾಗಿದೆ. ತೃಣಮೂಲ ಕಾಂಗ್ರೆಸ್ ಪಕ್ಷದ (TMC) ಸದಸ್ಯೆ ಸುಶ್ಮಿತಾ ದೇವ್, ಡಾ ಶಂತನು ಸೇನ್, ಡೋಲಾ ಸೇನ್, ಡಿಎಂಕೆ ಸದಸ್ಯೆ ಕನಿಮೋಳಿ ಸೇರಿದಂತೆ 19 ಸದಸ್ಯರನ್ನು ಅಮಾನತು ಮಾಡಲಾಗಿದೆ. ಜಿಎಸ್ಟಿ (GST), ಬೆಲೆ ಏರಿಕೆ ವಿರುದ್ಧ ಇವರು ಪ್ಲೆಕಾರ್ಡ್ ಹಿಡಿದು ಸದನದ ಬಾವಿಗಿಳಿದು ಘೋಷಣೆ ಕೂಗಿದ್ದಾರೆ. ಈ ರೀತಿ ಸದನದ ಬಾವಿಗಿಳಿದಿರುವುದು ದುರ್ನಡತೆ ಎಂದು ಹೇಳಿ ಇವರನ್ನು ಒಂದು ವಾರ ಕಲಾಪದಿಂದ ಅಮಾನತು ಮಾಡಲಾಗಿದೆ . ಸೋಮವಾರ ಇದೇ ರೀತಿ ಪ್ಲೆಕಾರ್ಡ್ ಹಿಡಿದು ಘೋಷಣೆ ಕೂಗಿದ ನಾಲ್ವರು ಸಂಸದರನ್ನು ಲೋಕಸಭೆಯ ಕಲಾಪದಿಂದ ಅಮಾನತು ಮಾಡಲಾಗಿತ್ತು.

ಜುಲೈ 21 ರಂದು ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆಯುತ್ತಿದೆ . ಕಾಂಗ್ರೆಸ್, ಟಿಎಂಸಿ, ಡಿಎಂಕೆ ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) ಮೊದಲಾದ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿವೆ. ಕಳೆದ ಹಲವು ದಿನಗಳಿಂದ ಬೆಲೆ ಏರಿಕೆ ಮತ್ತು ಜಿಎಸ್‌ಟಿ ಹೆಚ್ಚಳದಂತಹ ವಿಷಯಗಳ ಕುರಿತು ತುರ್ತು ಚರ್ಚೆಗೆ ಪ್ರತಿಪಕ್ಷಗಳ ಸಂಸದರು ಒತ್ತಾಯಿಸುತ್ತಿದ್ದು, ಸದನ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆ.

Published On - 12:50 pm, Wed, 27 July 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ