AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪ್ ಆದ್ಮಿ ರಾಜಕೀಯ ಅನಾಥಾಶ್ರಮ ಅಲ್ಲ: ಯುವಕರೇ ರಾಜಕೀಯಕ್ಕೆ ಬನ್ನಿ ಎಂದ ಭಾಸ್ಕರ್ ರಾವ್

ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಬಗ್ಗೆ ಭಾಸ್ಕರ್ ರಾವ್ ಮಾತನಾಡಿದ್ದು, ಇದು ದುಃಖಕರ ಘಟನೆ. ದುರಾಚಾರ ಹಾಗೂ ಭ್ರಷ್ಟಾಚಾರದ ಕಾರಣ ಇಂಥ ಘಟನೆ ನಡೆದಿದೆ.

ಆಪ್ ಆದ್ಮಿ ರಾಜಕೀಯ ಅನಾಥಾಶ್ರಮ ಅಲ್ಲ: ಯುವಕರೇ ರಾಜಕೀಯಕ್ಕೆ ಬನ್ನಿ ಎಂದ ಭಾಸ್ಕರ್ ರಾವ್
ಆಪ್‌‌ ಮುಖಂಡ ಭಾಸ್ಕರ್ ರಾವ್
TV9 Web
| Edited By: |

Updated on:Apr 15, 2022 | 3:00 PM

Share

ವಿಜಯಪುರ: ಆಪ್ ಆದ್ಮಿ (Aap Admi) ರಾಜಕೀಯ ಅನಾಥಾಶ್ರಮ ಅಲ್ಲ. ಟಿಕೆಟ್ ನೀಡಬೇಕಾದರೆ ಮೂರು ಟೆಸ್ಟ್ ಆಗುತ್ತದೆ ಎಂದು ಪಕ್ಷಕ್ಕೆ ವಿವಿಧ ಮುಖಂಡರ ಹಾಗೂ ಯುವಕರ ಸೇರ್ಪಡೆ ಕಾರ್ಯಕ್ರಮ ಬಳಿಕ ವಿಜಯಪುರದಲ್ಲಿ ಆಪ್‌‌ ಮುಖಂಡ ಭಾಸ್ಕರ್ ರಾವ್ ಹೇಳಿಕೆ ನೀಡಿದ್ದಾರೆ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ದೆ ಮಾಡಲಾಗುತ್ತದೆ. ಜನ ಸಾಮಾನ್ಯರು ಜನಪ್ರತಿನಿಧಿಗಳಾಗಬೇಕು. ಒಳ್ಳೆ ವಿಚಾರವಿಟ್ಟುಕೊಂಡು ಯುವಕರು ರಾಜಕೀಯಕ್ಕೆ ಬನ್ನಿ ಎಂದು ಭಾಸ್ಕರ್ ರಾವ್ ಹೇಳಿದರು. ಸಾಮಾನ್ಯರೇ ನಮ್ಮ ಅಭ್ಯರ್ಥಿಗಳು. ಜಾತಿ ಹೆಸರು ನಮ್ಮ ಪಕ್ಷದಲ್ಲಿಲ್ಲಾ. ನೀವ್ ಮಾಡಿಲ್ವಾ ಎಂದು ಒಂದು ಪಕ್ಷವನ್ನು ಮತ್ತೊಂದು ಪಕ್ಷದವರು ಪ್ರಶ್ನೆ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಭ್ರಷ್ಟಾಚಾರ ನಡೆದಿದೆ. ಅಭಿವೃದ್ಧಿ ಕೆಲಸ ಮಾಡಬೇಕಿದೆ. ಧರ್ಮ‌-ಜಾತಿ ಇಲ್ಲಿ ಇಲ್ಲಾ. ಆಮ್ ಆದ್ಮಿ‌ಜನ ಸಾಮನ್ಯ ಪಕ್ಷ. ರಾಜ್ಯ ಸುಮಾರು 7.5 ಲಕ್ಷ‌ ಕೋಟಿ‌ ಸಾಲ ಹೊಂದಿದೆ. ಜನರಿಗೆ ಬಜೆಟ್ ತಲಪುತ್ತಿಲ್ಲ.

ರಾಜ್ಯದ ಬಜೆಟ್ ಗಾತ್ರ ದೊಡ್ಡದಾಗುತ್ತಿದೆ. ಎಲ್ಲಾ ಪಕ್ಷಗಳ ನಾಯಕರು ವೈಯುಕ್ತಿಕವಾಗಿ ಲಾಭ ಮಾಡಿಕೊಳ್ಳುತ್ತಿದ್ದಾರೆ. ದುರಾಸೆ ಭ್ರಷ್ಟಾಚಾರದಿಂದ ರೋಸಿ ಹೋಗಿದ್ದಾರೆ. ಜನರು ರಾಷ್ಟ್ರೀಯ ಪಕ್ಷಗಳ ಬಗ್ಗೆ ನಿರಾಸೆ ಹೊಂದಿದ್ದಾರೆ. ಪಕ್ಷ ಸಂಘಟನೆ ಜಿಲ್ಲಾ ತಾಲೂಕು ಮಟ್ಟದಲ್ಲಿ ಆಗಬೇಕಿದೆ. ಪಂಜಾಬ್ ಫಲಿತಾಂಶ ಪ್ರೇರಣೆಯೇ ಕಾರಣ. ಇದಕ್ಕೆ ದೆಹಲಿ ಪಂಜಾಬ್​ನಲ್ಲಿ ಅಧಿಕಾರ ಹಾಗೂ ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ ಆಮ್ ಆದ್ಮಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ದೆ ಮಾಡಲಿದೆ ಎಂದು ಹೇಳದರು.

ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಬಗ್ಗೆ ಭಾಸ್ಕರ್ ರಾವ್ ಮಾತನಾಡಿದ್ದು, ಇದು ದುಃಖಕರ ಘಟನೆ. ದುರಾಚಾರ ಹಾಗೂ ಭ್ರಷ್ಟಾಚಾರದ ಕಾರಣ ಇಂಥ ಘಟನೆ ನಡೆದಿದೆ. ಆರ್ಡಿಪಿಆರ್ ಸಚಿವರು ಮೌಖಿಕವಾಗಿ ಹೇಳಿದ ಕಾರಣ ಗುತ್ತಿಗೆದಾರ ಕಾಮಗಾರಿ ಮಾಡಿದ್ದಾರೆ. ಸಚಿವರು ಹೇಳಿದ ಕಾರಣ ಅಧಿಕಾರಿಗಳು ಸಹ ಸುಮ್ಮನಾಗಿದ್ದಾರೆ. ಕಾಮಗಾರಿ ಬಳಿಕ ಹಣ ನೀಡಬೇಕಿತ್ತು. ಅದಕ್ಕಾಗಿ ಕಮೀಷನ್ ಹಣ ಕೇಳಬಾರದಿತ್ತು. ಘಟನೆ ಕಾರಣ ಸಚಿವ ಈಶ್ವರಪ್ಪ ಅರೆಸ್ಟ್ ಆಗಿಲ್ಲಾ. ಜನ ಸಾಮಾನ್ಯರಾಗಿದ್ದರೆ ಪೊಲೀಸರು ಆಗಲೇ ಬಂಧಿಸುತ್ತಿದ್ದರು. ಸರ್ಕಾರದ ಒತ್ತಡದಿಂದ ಸಚಿವ ಈಶ್ವರಪ್ಪ ಬಂಧನವಾಗಿಲ್ಲಾ. 108 ಕಾಮಗಾರಿಗಳು ಅಲ್ಲಿ ನಡೆದಿದ್ದರೂ ವರ್ಕ್ ಆರ್ಡರ್ ನೀಡಿಲ್ಲಾ. ಭ್ರಷ್ಟಾಚಾರ ಪೆಡಂಭೂತವಾಗಿ ಬೆಳೆಯಲು‌ ಕಾಂಗ್ರೆಸ್‌ ಕಾರಣವೆಂದು ಭಾಸ್ಕರ್‌ರಾವ್ ಆರೋಪ ಮಾಡಿದ್ದಾರೆ.

ಇದನ್ನೂ ಓದಿ:

ಬಾಲಿವುಡ್ ಒಂದರಲ್ಲೇ 300 ಕೋಟಿ ರೂಪಾಯಿ ಬಾಚಲಿದೆ ‘ಕೆಜಿಎಫ್​ 2’? ಹೌದೆನ್ನುತ್ತಿದ್ದಾರೆ ಪಂಡಿತರು

Omicron XE Variant: ಹೊಸ ಒಮಿಕ್ರಾನ್ ಎಕ್ಸ್​ಇ ರೂಪಾಂತರದ ಲಕ್ಷಣ, ಪರಿಣಾಮಗಳೇನು?

Published On - 2:59 pm, Fri, 15 April 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ