AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಬಾಲಿವುಡ್ ನಟಿ ಪೂಜಾ ಭಟ್

ಭಾರತ್ ಜೋಡೊ ಯಾತ್ರೆ ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಕಳೆದ ವಾರ ಯಾತ್ರೆ ತೆಲಂಗಾಣ ತಲುಪಿದ್ದು ಅದಕ್ಕಿಂತ ಮೊದಲು ರಾಹುಲ್ ಗಾಂಧಿ ಅವರು ತಮಿಳುನಾಡು...

ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಬಾಲಿವುಡ್ ನಟಿ ಪೂಜಾ ಭಟ್
ಪೂಜಾ ಭಟ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Nov 02, 2022 | 5:16 PM

Share

ಹೈದರಾಬಾದ್:  ನಟಿ, ಸಿನಿಮಾ ನಿರ್ಮಾಪಕಿ ಪೂಜಾ ಭಟ್(Pooja Bhatt)  ಬುಧವಾರ ರಾಹುಲ್ ಗಾಂಧಿ (Rahul Gandhi)ನೇತೃತ್ವದ ಭಾರತ್ ಜೋಡೊ ಯಾತ್ರೆಯಲ್ಲಿ(Bharat Jodo Yatra) ಜತೆಗೆ ಹೆಜ್ಜೆ ಹಾಕಿದ್ದಾರೆ. ಭಾರತ್ ಜೋಡೊ  ಯಾತ್ರೆಗೆ ಸೇರಿದ ಮೊದಲ ಬಾಲಿವುಡ್ ಸೆಲೆಬ್ರಿಟಿಯಾಗಿದ್ದಾರೆ ಪೂಜಾ ಭಟ್. ರಾಹುಲ್ ಗಾಂಧಿ ಅವರೊಂದಿಗೆ ಮಾತನಾಡುತ್ತಾ ಪೂಜಾ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದು ಅವರನ್ನು ಕಂಡ ಕೂಡಲೇ ಜನರು ಹರ್ಷೋದ್ಗಾರ ಮಾಡಿದರು. ನಟ-ನಿರ್ದೇಶಕ-ನಿರ್ಮಾಪಕರಾಗಿರುವ ಪೂಜಾ, ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ವಿಷಯಗಳ ಬಗ್ಗೆ ಧ್ವನಿಯೆತ್ತಿದ್ದಾರೆ. ಅವರು 1989 ರ ಚಲನಚಿತ್ರ “ಡ್ಯಾಡಿ” ಮೂಲಕ ನಟಿಯಾಗಿ ಪಾದಾರ್ಪಣೆ ಮಾಡಿದರು. ಹಿರಿಯ ಚಿತ್ರನಿರ್ಮಾಪಕ ಮಹೇಶ್ ಭಟ್ ಅವರ ಪುತ್ರಿ ಆಗಿರುವ ಪೂಜಾ”ದಿಲ್ ಹೈ ಕಿ ಮಾನ್ತಾ ನಹೀ”, “ಸಡಕ್”, “ಫಿರ್ ತೇರಿ ಕಹಾನಿ ಯಾದ್ ಆಯೀ”, ಸರ್ ಮತ್ತು “ಝಕ್ಮ್” ಮೊದಲಾದ ಸಿನಿಮಾಗಳಲ್ಲಿ ಮಿಂಚಿದ್ದರು. ತಮನ್ನಾ, ಸುರ್, ಪಾಪ್ ಮತ್ತು ಹಾಲೀಡೇ ಇವರು ನಿರ್ದೇಶಿಸಿದ ಚಿತ್ರಗಳು. ಹೈದರಾಬಾದ್ ಸಿಟಿಯ ಬಾಲನಗರ ಮುಖ್ಯ ರಸ್ತೆಯ ಎಂಜಿಬಿ ಬಜಾಜ್ ಶೋರೂಮ್‌ನಿಂದ ಯಾತ್ರೆ ಪುನರಾರಂಭವಾಯಿತು. ರಾಹುಲ್ ಗಾಂಧಿ ಜೊತೆಗೆ ಇತರ ಭಾರತ್ ಯಾತ್ರಿಗಳು ಯಾತ್ರೆಯ 56 ನೇ ದಿನದಂದು ತಮ್ಮ ನಡಿಗೆಯನ್ನು ಮುಂದುವರೆಸಿದರು.

ಭಾರತ್ ಜೋಡೊ ಯಾತ್ರೆ ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಕಳೆದ ವಾರ ಯಾತ್ರೆ ತೆಲಂಗಾಣ ತಲುಪಿದ್ದು ಅದಕ್ಕಿಂತ ಮೊದಲು ರಾಹುಲ್ ಗಾಂಧಿ ಅವರು ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಭಾರತ್ ಜೋಡೊ ಯಾತ್ರೆ ಪೂರ್ಣಗೊಳಿಸಿದ್ದಾರೆ. ತೆಲಂಗಾಣ ರಾಜ್ಯ ಕಾಂಗ್ರೆಸ್ ಯಾತ್ರೆಯನ್ನು ಸಂಘಟಿಸಲು 10 ವಿಶೇಷ ಸಮಿತಿಗಳನ್ನು ರಚಿಸಿದೆ.

Published On - 5:08 pm, Wed, 2 November 22

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ