AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಬಾಲಿವುಡ್ ನಟಿ ಪೂಜಾ ಭಟ್

ಭಾರತ್ ಜೋಡೊ ಯಾತ್ರೆ ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಕಳೆದ ವಾರ ಯಾತ್ರೆ ತೆಲಂಗಾಣ ತಲುಪಿದ್ದು ಅದಕ್ಕಿಂತ ಮೊದಲು ರಾಹುಲ್ ಗಾಂಧಿ ಅವರು ತಮಿಳುನಾಡು...

ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಬಾಲಿವುಡ್ ನಟಿ ಪೂಜಾ ಭಟ್
ಪೂಜಾ ಭಟ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Nov 02, 2022 | 5:16 PM

Share

ಹೈದರಾಬಾದ್:  ನಟಿ, ಸಿನಿಮಾ ನಿರ್ಮಾಪಕಿ ಪೂಜಾ ಭಟ್(Pooja Bhatt)  ಬುಧವಾರ ರಾಹುಲ್ ಗಾಂಧಿ (Rahul Gandhi)ನೇತೃತ್ವದ ಭಾರತ್ ಜೋಡೊ ಯಾತ್ರೆಯಲ್ಲಿ(Bharat Jodo Yatra) ಜತೆಗೆ ಹೆಜ್ಜೆ ಹಾಕಿದ್ದಾರೆ. ಭಾರತ್ ಜೋಡೊ  ಯಾತ್ರೆಗೆ ಸೇರಿದ ಮೊದಲ ಬಾಲಿವುಡ್ ಸೆಲೆಬ್ರಿಟಿಯಾಗಿದ್ದಾರೆ ಪೂಜಾ ಭಟ್. ರಾಹುಲ್ ಗಾಂಧಿ ಅವರೊಂದಿಗೆ ಮಾತನಾಡುತ್ತಾ ಪೂಜಾ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದು ಅವರನ್ನು ಕಂಡ ಕೂಡಲೇ ಜನರು ಹರ್ಷೋದ್ಗಾರ ಮಾಡಿದರು. ನಟ-ನಿರ್ದೇಶಕ-ನಿರ್ಮಾಪಕರಾಗಿರುವ ಪೂಜಾ, ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ವಿಷಯಗಳ ಬಗ್ಗೆ ಧ್ವನಿಯೆತ್ತಿದ್ದಾರೆ. ಅವರು 1989 ರ ಚಲನಚಿತ್ರ “ಡ್ಯಾಡಿ” ಮೂಲಕ ನಟಿಯಾಗಿ ಪಾದಾರ್ಪಣೆ ಮಾಡಿದರು. ಹಿರಿಯ ಚಿತ್ರನಿರ್ಮಾಪಕ ಮಹೇಶ್ ಭಟ್ ಅವರ ಪುತ್ರಿ ಆಗಿರುವ ಪೂಜಾ”ದಿಲ್ ಹೈ ಕಿ ಮಾನ್ತಾ ನಹೀ”, “ಸಡಕ್”, “ಫಿರ್ ತೇರಿ ಕಹಾನಿ ಯಾದ್ ಆಯೀ”, ಸರ್ ಮತ್ತು “ಝಕ್ಮ್” ಮೊದಲಾದ ಸಿನಿಮಾಗಳಲ್ಲಿ ಮಿಂಚಿದ್ದರು. ತಮನ್ನಾ, ಸುರ್, ಪಾಪ್ ಮತ್ತು ಹಾಲೀಡೇ ಇವರು ನಿರ್ದೇಶಿಸಿದ ಚಿತ್ರಗಳು. ಹೈದರಾಬಾದ್ ಸಿಟಿಯ ಬಾಲನಗರ ಮುಖ್ಯ ರಸ್ತೆಯ ಎಂಜಿಬಿ ಬಜಾಜ್ ಶೋರೂಮ್‌ನಿಂದ ಯಾತ್ರೆ ಪುನರಾರಂಭವಾಯಿತು. ರಾಹುಲ್ ಗಾಂಧಿ ಜೊತೆಗೆ ಇತರ ಭಾರತ್ ಯಾತ್ರಿಗಳು ಯಾತ್ರೆಯ 56 ನೇ ದಿನದಂದು ತಮ್ಮ ನಡಿಗೆಯನ್ನು ಮುಂದುವರೆಸಿದರು.

ಭಾರತ್ ಜೋಡೊ ಯಾತ್ರೆ ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಕಳೆದ ವಾರ ಯಾತ್ರೆ ತೆಲಂಗಾಣ ತಲುಪಿದ್ದು ಅದಕ್ಕಿಂತ ಮೊದಲು ರಾಹುಲ್ ಗಾಂಧಿ ಅವರು ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಭಾರತ್ ಜೋಡೊ ಯಾತ್ರೆ ಪೂರ್ಣಗೊಳಿಸಿದ್ದಾರೆ. ತೆಲಂಗಾಣ ರಾಜ್ಯ ಕಾಂಗ್ರೆಸ್ ಯಾತ್ರೆಯನ್ನು ಸಂಘಟಿಸಲು 10 ವಿಶೇಷ ಸಮಿತಿಗಳನ್ನು ರಚಿಸಿದೆ.

Published On - 5:08 pm, Wed, 2 November 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು