AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಬಾಲಿವುಡ್ ನಟಿ ಪೂಜಾ ಭಟ್

ಭಾರತ್ ಜೋಡೊ ಯಾತ್ರೆ ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಕಳೆದ ವಾರ ಯಾತ್ರೆ ತೆಲಂಗಾಣ ತಲುಪಿದ್ದು ಅದಕ್ಕಿಂತ ಮೊದಲು ರಾಹುಲ್ ಗಾಂಧಿ ಅವರು ತಮಿಳುನಾಡು...

ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಬಾಲಿವುಡ್ ನಟಿ ಪೂಜಾ ಭಟ್
ಪೂಜಾ ಭಟ್
TV9 Web
| Edited By: |

Updated on:Nov 02, 2022 | 5:16 PM

Share

ಹೈದರಾಬಾದ್:  ನಟಿ, ಸಿನಿಮಾ ನಿರ್ಮಾಪಕಿ ಪೂಜಾ ಭಟ್(Pooja Bhatt)  ಬುಧವಾರ ರಾಹುಲ್ ಗಾಂಧಿ (Rahul Gandhi)ನೇತೃತ್ವದ ಭಾರತ್ ಜೋಡೊ ಯಾತ್ರೆಯಲ್ಲಿ(Bharat Jodo Yatra) ಜತೆಗೆ ಹೆಜ್ಜೆ ಹಾಕಿದ್ದಾರೆ. ಭಾರತ್ ಜೋಡೊ  ಯಾತ್ರೆಗೆ ಸೇರಿದ ಮೊದಲ ಬಾಲಿವುಡ್ ಸೆಲೆಬ್ರಿಟಿಯಾಗಿದ್ದಾರೆ ಪೂಜಾ ಭಟ್. ರಾಹುಲ್ ಗಾಂಧಿ ಅವರೊಂದಿಗೆ ಮಾತನಾಡುತ್ತಾ ಪೂಜಾ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದು ಅವರನ್ನು ಕಂಡ ಕೂಡಲೇ ಜನರು ಹರ್ಷೋದ್ಗಾರ ಮಾಡಿದರು. ನಟ-ನಿರ್ದೇಶಕ-ನಿರ್ಮಾಪಕರಾಗಿರುವ ಪೂಜಾ, ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ವಿಷಯಗಳ ಬಗ್ಗೆ ಧ್ವನಿಯೆತ್ತಿದ್ದಾರೆ. ಅವರು 1989 ರ ಚಲನಚಿತ್ರ “ಡ್ಯಾಡಿ” ಮೂಲಕ ನಟಿಯಾಗಿ ಪಾದಾರ್ಪಣೆ ಮಾಡಿದರು. ಹಿರಿಯ ಚಿತ್ರನಿರ್ಮಾಪಕ ಮಹೇಶ್ ಭಟ್ ಅವರ ಪುತ್ರಿ ಆಗಿರುವ ಪೂಜಾ”ದಿಲ್ ಹೈ ಕಿ ಮಾನ್ತಾ ನಹೀ”, “ಸಡಕ್”, “ಫಿರ್ ತೇರಿ ಕಹಾನಿ ಯಾದ್ ಆಯೀ”, ಸರ್ ಮತ್ತು “ಝಕ್ಮ್” ಮೊದಲಾದ ಸಿನಿಮಾಗಳಲ್ಲಿ ಮಿಂಚಿದ್ದರು. ತಮನ್ನಾ, ಸುರ್, ಪಾಪ್ ಮತ್ತು ಹಾಲೀಡೇ ಇವರು ನಿರ್ದೇಶಿಸಿದ ಚಿತ್ರಗಳು. ಹೈದರಾಬಾದ್ ಸಿಟಿಯ ಬಾಲನಗರ ಮುಖ್ಯ ರಸ್ತೆಯ ಎಂಜಿಬಿ ಬಜಾಜ್ ಶೋರೂಮ್‌ನಿಂದ ಯಾತ್ರೆ ಪುನರಾರಂಭವಾಯಿತು. ರಾಹುಲ್ ಗಾಂಧಿ ಜೊತೆಗೆ ಇತರ ಭಾರತ್ ಯಾತ್ರಿಗಳು ಯಾತ್ರೆಯ 56 ನೇ ದಿನದಂದು ತಮ್ಮ ನಡಿಗೆಯನ್ನು ಮುಂದುವರೆಸಿದರು.

ಭಾರತ್ ಜೋಡೊ ಯಾತ್ರೆ ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಕಳೆದ ವಾರ ಯಾತ್ರೆ ತೆಲಂಗಾಣ ತಲುಪಿದ್ದು ಅದಕ್ಕಿಂತ ಮೊದಲು ರಾಹುಲ್ ಗಾಂಧಿ ಅವರು ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಭಾರತ್ ಜೋಡೊ ಯಾತ್ರೆ ಪೂರ್ಣಗೊಳಿಸಿದ್ದಾರೆ. ತೆಲಂಗಾಣ ರಾಜ್ಯ ಕಾಂಗ್ರೆಸ್ ಯಾತ್ರೆಯನ್ನು ಸಂಘಟಿಸಲು 10 ವಿಶೇಷ ಸಮಿತಿಗಳನ್ನು ರಚಿಸಿದೆ.

Published On - 5:08 pm, Wed, 2 November 22

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್