AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ಗೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು; ಡಿಕೆ ಶಿವಕುಮಾರ್​ಗೆ ರಾಜೀನಾಮೆ ಸಲ್ಲಿಸಿದ ಹಿರಿಯ ನಟ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ರಾಜೀನಾಮೆ ಸಲ್ಲಿಸಿದ ಮುಖ್ಯಮಂತ್ರಿ ಚಂದ್ರು ಅವರು, ಕಾಂಗ್ರೆಸ್ ನಾಯಕರ ವಿರುದ್ಧ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ.

ಕಾಂಗ್ರೆಸ್​ಗೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು; ಡಿಕೆ ಶಿವಕುಮಾರ್​ಗೆ ರಾಜೀನಾಮೆ ಸಲ್ಲಿಸಿದ ಹಿರಿಯ ನಟ
ಹಿರಿಯ ನಟ ಮುಖ್ಯಮಂತ್ರಿ ಚಂದ್ರು
TV9 Web
| Edited By: |

Updated on:May 29, 2022 | 5:01 PM

Share

ಬೆಂಗಳೂರು: ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು (Mukyamanthri Chandru) ಪ್ರಾಥಮಿಕ ಸದಸ್ಯತ್ವಕ್ಕೆ ಇಂದು (ಮೇ 29) ರಾಜೀನಾಮೆ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ (DK Shivakumar) ರಾಜೀನಾಮೆ ಸಲ್ಲಿಸಿದ ಮುಖ್ಯಮಂತ್ರಿ ಚಂದ್ರು ಅವರು, ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ರೂ‌ ಗುರುತಿಸಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ. ಎರಡು ದಿನಗಳ ಹಿಂದಷ್ಟೇ ಕೆಪಿಸಿಸಿ ಘಟಕ ಸಾಂಸ್ಕೃತಿಕ ಸಮಿತಿ ಚೇರ್ ಮನ್ ಆಗಿ ನೇಮಕ ಮಾಡಿತ್ತು.

ವೈಯಕ್ತಿಕ ಕಾರಣಕ್ಕೆ ಸೇವೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿರುವ ಮುಖ್ಯಮಂತ್ರಿ ಚಂದ್ರು, ಜನಸೇವೆ ಮಾಡುವ ನಿಟ್ಟಿನಲ್ಲಿ ದೇಶದಲ್ಲೇ ಸುದೀರ್ಘ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಪಕ್ಷದಲ್ಲಿದ್ದು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇಲ್ಲಿವರೆಗೂ ನನಗೆ ಪಕ್ಷದಲ್ಲಿ ಬೆಂಬಲಿಸಿ, ಪ್ರೀತಿ ನೀಡಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಮುಖ್ಯಮಂತ್ರಿ ಚಂದ್ರು

ಶಿವಕುಮಾರ್ ಭೇಟಿಯಾದ ಕುಪೇಂದ್ರರೆಡ್ಡಿ: ಡಿಕೆ ಶಿವಕುಮಾರ್ ಭೇಟಿಯಾದ ಕುಪೇಂದ್ರರೆಡ್ಡಿ ರಾಜ್ಯಸಭಾ ಚುನಾವಣೆ ವಿಚಾರವಾಗಿ ಮಾತುಕತೆ ನಡೆಸಿದರು. ಜೆಡಿಎಸ್​ ಕುಪೇಂದ್ರರೆಡ್ಡಿಗೆ ರಾಜ್ಯಸಭಾ ಟಿಕೆಟ್ ನೀಡಲು ನಿರ್ಧರಿಸಿದೆ. ಜೆಡಿಎಸ್ ಅಭ್ಯರ್ಥಿ ಗೆಲ್ಲಲು ಹೆಚ್ಚುವರಿ ಮತಗಳ ಅವಶ್ಯಕತೆ ಇದೆ. ಕಾಂಗ್ರೆಸ್ ಅಥವಾ ಬಿಜೆಪಿಯ ಬೆಂಬಲದ ಅಗತ್ಯವಿದೆ. ಈ ಹಿನ್ನೆಲೆ ಡಿಕೆಶಿಯನ್ನು ಭೇಟಿ ಮಾಡಿದ್ದಾರೆ.

ಇದನ್ನೂ ಓದಿ
Image
BRO Recruitment 2022: 876 ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸುವುದು ಹೇಗೆಂದು ತಿಳಿಯಿರಿ
Image
ನಾಳೆ ಬೆಂಗಳೂರು ವಿಶ್ವವಿದ್ಯಾಲಯ ಸಂಪೂರ್ಣ ಸ್ತಬ್ಧ! ತರಗತಿ ಬಹಿಷ್ಕರಿಸಿ ಅಹೋರಾತ್ರಿ ಹೋರಾಟಕ್ಕೆ ವಿದ್ಯಾರ್ಥಿಗಳ ಒಕ್ಕೂಟ ನಿರ್ಧಾರ
Image
GT vs RR, IPL 2022 Final: ಐಪಿಎಲ್ 2022ಕ್ಕೆ ಇಂದು ತೆರೆ: ಯಾರಾಗಲಿದ್ದಾರೆ ಚಾಂಪಿಯನ್?
Image
ಕೊವಿಡ್​ನಿಂದ ಅನಾಥರಾದ ಮಕ್ಕಳಿಗೆ ವಿಶೇಷ ವಿದ್ಯಾರ್ಥಿ ವೇತನ: ಮೇ 30ರಂದು ಪ್ರಧಾನಿ ಮೋದಿ ಘೋಷಣೆ

ಜೈರಾಮ್​ ರಮೇಶ್ ಆಯ್ಕೆ- ತೀವ್ರ ಅಸಮಾಧಾನ: ರಾಜ್ಯಸಭೆಗೆ ಜೈರಾಮ್​ ರಮೇಶ್ ಆಯ್ಕೆ ಬಗ್ಗೆ ರಾಜ್ಯ ಕಾಂಗ್ರೆಸ್​ಗೆ ಬಿಸಿ ತುಪ್ಪವಾಗಿದೆ. ರಾಜ್ಯ ಕಾಂಗ್ರೆಸ್​ನ ಹಿರಿಯ ನಾಯಕರಲ್ಲೇ‌ ತೀವ್ರ ಅಸಮಾಧಾನ ಮೂಡಿದೆ. ಹೈಕಮಾಂಡ್ ಮಾತಿಗೆ ಕಟ್ಟುಬಿದ್ದು ಡಿಕೆಶಿ ಜೈರಾಮ್​​ಗೆ ಬೆಂಬಲ ನೀಡುತ್ತಿದ್ದಾರೆ. ಚುನಾವಣೆ ವರ್ಷವಾದರೂ ರಾಜ್ಯದ ನಾಯಕರಿಗೆ ಅವಕಾಶ ನೀಡ್ತಿಲ್ಲ. ರಾಜ್ಯ ನಾಯಕರ ಹೆಸರು ಪ್ರಸ್ತಾಪಿಸಲು ಹೈಕಮಾಂಡ್ ಬೆಲೆ ನೀಡಿಲ್ಲ. ಹೀಗಾಗಿ ಪ್ರಿಯಾಂಕಾ ಗಾಂಧಿ ಹೆಸರು ಪ್ರಸ್ತಾಪಕ್ಕೆ ಡಿಕೆಶಿ ಮುಂದಾಗಿದ್ದಾರೆ. ರಾಜ್ಯಸಭೆಗೆ ರಾಜ್ಯ ಕಾಂಗ್ರೆಸ್ ನಾಯಕರನ್ನೇ ಆಯ್ಕೆ ಮಾಡಿದರೆ ಸೂಕ್ತ ಎಂದು ಸಿದ್ದರಾಮಯ್ಯ, ಡಿಕೆಶಿ ಅಭಿಪ್ರಾಯ ಹೊಂದಿದ್ದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:23 am, Sun, 29 May 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ