AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆ; ಕೆಎಸ್ ಈಶ್ವರಪ್ಪಗೆ ಶಿವಮೊಗ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಿಂದ ಹೆಚ್ಚಿನ ಭದ್ರತೆ

KS Eshwarappa: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಏನು ಕ್ರಮ ಕೈಗೊಳ್ತಾರೆ. ಬಿ.ಕೆ. ಹರಿಪ್ರಸಾದ್ ಪದ ಬಳಕೆ ಬಗ್ಗೆ ಏನು ಕ್ರಮಕೈಗೊಳ್ತಾರೆ? ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಪ್ರಶ್ನೆ ಮಾಡಿದ್ದಾರೆ.

ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆ; ಕೆಎಸ್ ಈಶ್ವರಪ್ಪಗೆ ಶಿವಮೊಗ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಿಂದ ಹೆಚ್ಚಿನ ಭದ್ರತೆ
ಸಚಿವ ಈಶ್ವರಪ್ಪ
TV9 Web
| Updated By: ganapathi bhat|

Updated on:Aug 13, 2021 | 4:17 PM

Share

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಭದ್ರತೆಗೆ ವಿಶೇಷ ವಾಹನದ ವ್ಯವಸ್ಥೆ ಮಾಡಲಾಗಿದೆ. ಈಶ್ವರಪ್ಪ ಬೆಂಗಾವಲು ವಾಹನದ ಜತೆ ಮತ್ತೊಂದು ವಾಹನ ನಿಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಿಂದ ಈಶ್ವರಪ್ಪಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. 7-8 ಸಿಬ್ಬಂದಿ ಹೊಂದಿರುವ ಮತ್ತೊಂದು ವಾಹನದ ವ್ಯವಸ್ಥೆ ಮಾಡಿಕೊಡಲಾಗಿದೆ. ಕೆಲವು ದಿನಗಳಿಂದ ಈಶ್ವರಪ್ಪ ಹೇಳಿಕೆ ಸಾಕಷ್ಟು ಚರ್ಚೆಯಲ್ಲಿದೆ. ಈಶ್ವರಪ್ಪ ಕೆಲವು ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಅವರಿಗೆ ಹೆಚ್ಚಿನ ಬಿಗಿ ಭದ್ರತೆ ಒದಗಿಸಲಾಗಿದೆ.

ಅಂತಹ ಕಾಂಗ್ರೆಸ್ ನಾಯಕರಿಗೆ ನನ್ನ ಸಾಷ್ಟಾಂಗ ನಮಸ್ಕಾರ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್​ ನಾಯಕರು ಈಗ ಇಲ್ಲ. ಅಂತಹ ಕಾಂಗ್ರೆಸ್ ನಾಯಕರಿಗೆ ನನ್ನ ಸಾಷ್ಟಾಂಗ ನಮಸ್ಕಾರವಿದೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು (ಆಗಸ್ಟ್ 13) ಹೇಳಿಕೆ ನೀಡಿದ್ದಾರೆ. ನನ್ನ ಪದ ಬಳಕೆ ಬಗ್ಗೆ ಕ್ಷಮೆ ಕೇಳುವೆ. ಆದರೆ, ಬಿ.ಕೆ. ಹರಿಪ್ರಸಾದ್​ಗೆ ಕಾಂಗ್ರೆಸ್​ ನಾಯಕರು ಬುದ್ಧಿ ಹೇಳಬೇಕು. ಇದರ ಬಗ್ಗೆ ಕಾಂಗ್ರೆಸ್ ನಾಯಕರ ಉತ್ತರ ಏನು ಎಂದು ಪ್ರಶ್ನೆ ಮಾಡಿದ್ದಾರೆ.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಏನು ಕ್ರಮ ಕೈಗೊಳ್ತಾರೆ. ಬಿ.ಕೆ. ಹರಿಪ್ರಸಾದ್ ಪದ ಬಳಕೆ ಬಗ್ಗೆ ಏನು ಕ್ರಮಕೈಗೊಳ್ತಾರೆ? ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಪ್ರಶ್ನೆ ಮಾಡಿದ್ದಾರೆ.

ಈಶ್ವರಪ್ಪ ಸರ್ಕಾರದ ವ್ಯವಸ್ಥೆಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಇತ್ತ ಕಾಂಗ್ರೆಸ್ ಬಗ್ಗೆ ಸಚಿವ ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ವಿಚಾರವಾಗಿ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮೈಸೂರಿನಲ್ಲಿ ಮಾತನಾಡಿದ್ದಾರೆ. ಈಶ್ವರಪ್ಪ ಬಿಜೆಪಿ ಮೇಲಿರುವ ಕೋಪವನ್ನು ಕಾಂಗ್ರೆಸ್ ಮೇಲೆ ತೋರಿಸುತ್ತಿದ್ದಾರೆ. ಇವರಿಗೇನಾದ್ರೂ ಸಂಸ್ಕೃತಿ, ಕಾಮನ್ಸೆಸ್ಸ್ ಇದೆಯಾ? ಈಶ್ವರಪ್ಪನವರಿಗೆ ಮಾನ ಮರ್ಯಾದೆ ಇದೆಯಾ ಎಂಬುದನ್ನು ಮೊದಲು ತಿಳಿಸಿ. ನಿಮ್ಮ ಮಗ ಕಾಂತೇಶ್ ಬೆಂಗಳೂರಿನ ಪೀಣ್ಯದಲ್ಲಿ ಸೈಟ್ ಖರೀದಿಸಿದ್ದಾರೆ. 4 ಇಂಡಸ್ಟ್ರಿಯಲ್ ಸೈಟು ಖರೀದಿಸಿದ್ದೀರಿ, ಅದರಲ್ಲಿ ಏನು ಮಾಡ್ತಿದ್ದೀರಿ? ಒಬ್ಬರಿಗೆ ನಾಲ್ಕು ಸೈಟ್ ಹೇಗೆ ನೀಡ್ತಾರೆ? ಇದರ ಒಟ್ಟು ಬೆಲೆ ಎಷ್ಟು? ಇಡಿ, ಐಟಿ ಯಾಕೆ ಇವರ ಬಗ್ಗೆ ಏಕೆ ತನಿಖೆ ಮಾಡುತ್ತಿಲ್ಲ. ಕೇವಲ ಕಾಂಗ್ರೆಸ್ ನಾಯಕರ ಮೇಲೆ ಮಾತ್ರಾ ರೈಡ್ ಮಾಡೋದಾ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ನನ್ನ ಬಳಿ ಸಂಪೂರ್ಣ ದಾಖಲಾತಿ ಇದೆ. ಈಶ್ವರಪ್ಪ ಸರ್ಕಾರದ ವ್ಯವಸ್ಥೆಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ನಿಮ್ಮ ಮಗ ಭ್ರಷ್ಟಾಚಾರ ಮಾಡಿದ್ದಾರೆ. ಇದರ ಬಗ್ಗೆ ಇಡಿ ಹಾಗೂ ಐಟಿಗೆ ದೂರು ನೀಡುತ್ತಿದ್ದೇವೆ. ಯಾವ ರೀತಿ ತನಿಖೆ ಮಾಡುತ್ತಾರೋ ನೋಡುತ್ತೇವೆ. ಈಶ್ವರಪ್ಪ ಮೊದಲು ಹುಚ್ಚರ ರೀತಿ ಮಾತನಾಡುವುದನ್ನು ಬಿಡಲಿ ಎಂದು ಲಕ್ಷ್ಮಣ್ ಹೇಳಿದ್ದಾರೆ.

ಇದನ್ನೂ ಓದಿ: ಕೆಎಸ್ ಈಶ್ವರಪ್ಪ ಅವಾಚ್ಯ ಪದ ಬಳಕೆ; ಸಿಡಿ, ದಿನಪತ್ರಿಕೆ ಸಹಿತ ಶಿವಮೊಗ್ಗ ಎಸ್​ಪಿಗೆ ದೂರು

ಸಚಿವ ಸಂಪುಟ ಆಗುವುದಕ್ಕೆ ಕಾಂಗ್ರೆಸ್, ಜೆಡಿಎಸ್​ನಿಂದ ಬಂದವರು ಕಾರಣ; ಅವರ ಋಣ ತೀರಿಸಬೇಕು: ಕೆಎಸ್ ಈಶ್ವರಪ್ಪ

(Additional Security provided to KS Eshwarappa by Shivamogga amid his controversial Statements)

Published On - 3:55 pm, Fri, 13 August 21

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..