AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿವೀರರಿಗೆ ಪಕ್ಷದ ಕಚೇರಿಯಲ್ಲಿ ಸೆಕ್ಯುರಿಟಿ ಗಾರ್ಡ್​​​ ಕೆಲಸದ ಆಫರ್​​ ನೀಡಿದ ಬಿಜೆಪಿ ನಾಯಕ

ಯಾರಾದರೂ 21 ನೇ ವರ್ಷದಲ್ಲಿ ಸೇನೆ ಸೇರಿದರೆ ಕರ್ತವ್ಯ ಮುಗಿಯುವಾಗ ವ್ಯಕ್ತಿಗೆ 25 ವರ್ಷ ಆಗುತ್ತದೆ. ಆಗ ಅವರ ಕೈಯಲ್ಲಿ ₹ 11 ಲಕ್ಷ ಮತ್ತು ಅಗ್ನಿವೀರ್ ಬ್ಯಾಡ್ಜ್ ಇರುತ್ತದೆ. ಬಿಜೆಪಿ ಕಚೇರಿಗೆ ಸೆಕ್ಯೂರಿಟಿ ಗಾರ್ಡ್ ನೇಮಿಸಬೇಕಾದರೆ ನಾನು ಅಗ್ನಿವೀರನನ್ನು ಆಯ್ಕೆ ಮಾಡುತ್ತೇನೆ...

ಅಗ್ನಿವೀರರಿಗೆ ಪಕ್ಷದ ಕಚೇರಿಯಲ್ಲಿ ಸೆಕ್ಯುರಿಟಿ ಗಾರ್ಡ್​​​ ಕೆಲಸದ ಆಫರ್​​ ನೀಡಿದ ಬಿಜೆಪಿ ನಾಯಕ
ಕೈಲಾಶ್ ವಿಜಯವರ್ಗಿಯ
TV9 Web
| Edited By: |

Updated on:Jun 19, 2022 | 9:20 PM

Share

ದೆಹಲಿ: ಹೊಸ ಸೇನಾ ನೇಮಕಾತಿ ಯೋಜನೆ ‘ಅಗ್ನಿಪಥ್’ (Agnipath) ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರನ್ನು ಸಮಾಧಾನಪಡಿಸುವ ನಿಟ್ಟಿನಲ್ಲಿ ಪಕ್ಷದ ಕಚೇರಿಯಲ್ಲಿ ‘ಅಗ್ನಿವೀರ’ರಿಗೆ (Agniveers) ಸೆಕ್ಯುರಿಟಿ ಗಾರ್ಡ್ ಕೆಲಸ ನೀಡುತ್ತೇವೆ ಎಂದು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ (Kailash Vijayvargiya) ಹೇಳಿದ್ದಾರೆ. ವಿಜಯವರ್ಗಿಯ ಹೇಳಿಕೆ ವಿರುದ್ಧ ವಿಪಕ್ಷಗಳು ಕಿಡಿಕಾರಿದ್ದು, ಬಿಜೆಪಿ ಕೂಡಾ ತಮ್ಮ ನಾಯಕನ ಹೇಳಿಕೆಯನ್ನು ಖಂಡಿಸಿದೆ. ಹೊಸ ಯೋಜನೆಯಡಿ ನಾಲ್ಕು ವರ್ಷಗಳ ಕರ್ತವ್ಯದ ಪೂರ್ಣಗೊಳಿಸಿದ ಯುವಕರಿಗೆ ಬಿಜೆಪಿ ಕಚೇರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಉದ್ಯೋಗಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಸಶಸ್ತ್ರ ಪಡೆಗಳಿಗೆ ಸೇರಲು ತರಬೇತಿ ಪಡೆಯುವ ಯುವಕರು ಭದ್ರತಾ ಸಿಬ್ಬಂದಿಯ ಕೆಲಸವನ್ನು ಬಯಸುತ್ತಾರೆ ಎಂಬ ಬಿಜೆಪಿ ನಾಯಕರ ಊಹೆಯನ್ನು ಟೀಕಿಸಿದ್ದಾರೆ. ದೇಶದ ಯುವಕರು ಮತ್ತು ಸೇನಾ ಸಿಬ್ಬಂದಿಯನ್ನು ತುಂಬಾ ಅಗೌರವಗೊಳಿಸಬೇಡಿ. ನಮ್ಮ ದೇಶದ ಯುವಕರು ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಹಗಲಿರುಳು ಶ್ರಮಿಸುತ್ತಾರೆ, ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಾರೆ ಏಕೆಂದರೆ ಅವರು ಸೈನ್ಯಕ್ಕೆ ಸೇರಿ ಜೀವನಪೂರ್ತಿ ದೇಶಕ್ಕಾಗಿ ಸೇವೆ ಸಲ್ಲಿಸಲು ಬಯಸುತ್ತಾರೆಯೇ ಹೊರತು ಬಿಜೆಪಿ ಕಚೇರಿಯ ಹೊರಗೆ ಕಾವಲುಗಾರರಾಗಿರಲು ಬಯಸುವುದಿಲ್ಲ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

‘ಅಗ್ನಿಪಥ’ ಯೋಜನೆ ವಿರೋಧಿಸಿ ಮಿಲಿಟರಿ ಆಕಾಂಕ್ಷಿಗಳ ಪ್ರತಿಭಟನೆಯ ನಡುವೆಯೇ ವಿಜಯವರ್ಗಿಯ, ಮಿಲಿಟರಿ ತರಬೇತಿಯ ನಂತರ ‘ಅಗ್ನಿವೀರರು’ ದಕ್ಷ ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿರುತ್ತಾರೆ ಎಂದು ಹೇಳಿದರು.

ಮಿಲಿಟರಿ ತರಬೇತಿಯಲ್ಲಿ ಶಿಸ್ತು ಮತ್ತು ಆದೇಶಗಳ ಪಾಲನೆ ಇರುತ್ತದೆ. ಅವರು ಹದಿನೇಳೂವರೆ ಮತ್ತು 23 ವರ್ಷಗಳ ನಡುವಿನ ಯುವಕರು ನಾಲ್ಕು ವರ್ಷಗಳ ತರಬೇತಿಯಿಂದ ಹಿಂತಿರುಗಿದ ನಂತರ ಅಂದರೆ , ಯಾರಾದರೂ 21 ನೇ ವರ್ಷದಲ್ಲಿ ಸೇನೆ ಸೇರಿದರೆ ಕರ್ತವ್ಯ ಮುಗಿಯುವಾಗ ವ್ಯಕ್ತಿಗೆ 25 ವರ್ಷ ಆಗುತ್ತದೆ. ಆಗ ಅವರ ಕೈಯಲ್ಲಿ ₹ 11 ಲಕ್ಷ ಮತ್ತು ಅಗ್ನಿವೀರ್ ಬ್ಯಾಡ್ಜ್ ಇರುತ್ತದೆ. ಬಿಜೆಪಿ ಕಚೇರಿಗೆ ಸೆಕ್ಯೂರಿಟಿ ಗಾರ್ಡ್ ನೇಮಿಸಬೇಕಾದರೆ ನಾನು ಅಗ್ನಿವೀರನನ್ನು ಆಯ್ಕೆ ಮಾಡುತ್ತೇನೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯವರ್ಗಿಯ ಹೇಳಿದ್ದಾರೆ.

ಬಿಜೆಪಿ ಸಂಸದ ವರುಣ್ ಗಾಂಧಿ ಕೂಡ “ಸೆಕ್ಯುರಿಟಿ ಗಾರ್ಡ್ ಕಾಮೆಂಟ್” ಕುರಿತು ತಮ್ಮ ಪಕ್ಷದ ಸಹೋದ್ಯೋಗಿಯನ್ನು ಟೀಕಿಸಿ ಟ್ವೀಟ್ ಮಾಡಿದ್ದಾರೆ.

ಮಹಾನ್ ಸೇನೆ..ಇಡೀ ಪ್ರಪಂಚದಾದ್ಯಂತ ಅವರ ಶೌರ್ಯವನ್ನು ಪ್ರತಿಧ್ವನಿಸುತ್ತದೆ. ಆದರೆ ಅದು ರಾಜಕೀಯ ಕಚೇರಿಯ ಚೌಕೀದಾರರಾಗಲು ಆಹ್ವಾನವನ್ನು ಪಡೆಯುತ್ತದೆ. ಆ ಆಫರ್ ನೀಡಿದವರಿಗೆ ಅಭಿನಂದನೆಗಳು. ಭಾರತೀಯ ಸೇನೆಯು ಭಾರತಮಾತೆಯ ಸೇವೆಯ ಮಾಧ್ಯಮವಾಗಿದೆ. ಇದು ಕೇವಲ ಕೆಲಸವಲ್ಲ ಎಂದು ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕೂಡ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಏತನ್ಮಧ್ಯೆ, ಕೆಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ಮುಂದುವರಿದಿವೆ, ಉತ್ತರ ಪ್ರದೇಶ, ತೆಲಂಗಾಣ ಮತ್ತು ಬಿಹಾರದಲ್ಲಿ ಪ್ರತಿಭಟನೆ ಮತ್ತಷ್ಟು ತೀವ್ರವಾಗಿದೆ. ಪ್ರತಿಭಟನೆಯ ನಡುವೆಯೇ ಕೇಂದ್ರ ಹಲವು ರಿಯಾಯಿತಿಗಳನ್ನು ಘೋಷಿಸಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 9:18 pm, Sun, 19 June 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ