AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿವೀರರಿಗೆ ಪಕ್ಷದ ಕಚೇರಿಯಲ್ಲಿ ಸೆಕ್ಯುರಿಟಿ ಗಾರ್ಡ್​​​ ಕೆಲಸದ ಆಫರ್​​ ನೀಡಿದ ಬಿಜೆಪಿ ನಾಯಕ

ಯಾರಾದರೂ 21 ನೇ ವರ್ಷದಲ್ಲಿ ಸೇನೆ ಸೇರಿದರೆ ಕರ್ತವ್ಯ ಮುಗಿಯುವಾಗ ವ್ಯಕ್ತಿಗೆ 25 ವರ್ಷ ಆಗುತ್ತದೆ. ಆಗ ಅವರ ಕೈಯಲ್ಲಿ ₹ 11 ಲಕ್ಷ ಮತ್ತು ಅಗ್ನಿವೀರ್ ಬ್ಯಾಡ್ಜ್ ಇರುತ್ತದೆ. ಬಿಜೆಪಿ ಕಚೇರಿಗೆ ಸೆಕ್ಯೂರಿಟಿ ಗಾರ್ಡ್ ನೇಮಿಸಬೇಕಾದರೆ ನಾನು ಅಗ್ನಿವೀರನನ್ನು ಆಯ್ಕೆ ಮಾಡುತ್ತೇನೆ...

ಅಗ್ನಿವೀರರಿಗೆ ಪಕ್ಷದ ಕಚೇರಿಯಲ್ಲಿ ಸೆಕ್ಯುರಿಟಿ ಗಾರ್ಡ್​​​ ಕೆಲಸದ ಆಫರ್​​ ನೀಡಿದ ಬಿಜೆಪಿ ನಾಯಕ
ಕೈಲಾಶ್ ವಿಜಯವರ್ಗಿಯ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 19, 2022 | 9:20 PM

Share

ದೆಹಲಿ: ಹೊಸ ಸೇನಾ ನೇಮಕಾತಿ ಯೋಜನೆ ‘ಅಗ್ನಿಪಥ್’ (Agnipath) ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರನ್ನು ಸಮಾಧಾನಪಡಿಸುವ ನಿಟ್ಟಿನಲ್ಲಿ ಪಕ್ಷದ ಕಚೇರಿಯಲ್ಲಿ ‘ಅಗ್ನಿವೀರ’ರಿಗೆ (Agniveers) ಸೆಕ್ಯುರಿಟಿ ಗಾರ್ಡ್ ಕೆಲಸ ನೀಡುತ್ತೇವೆ ಎಂದು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ (Kailash Vijayvargiya) ಹೇಳಿದ್ದಾರೆ. ವಿಜಯವರ್ಗಿಯ ಹೇಳಿಕೆ ವಿರುದ್ಧ ವಿಪಕ್ಷಗಳು ಕಿಡಿಕಾರಿದ್ದು, ಬಿಜೆಪಿ ಕೂಡಾ ತಮ್ಮ ನಾಯಕನ ಹೇಳಿಕೆಯನ್ನು ಖಂಡಿಸಿದೆ. ಹೊಸ ಯೋಜನೆಯಡಿ ನಾಲ್ಕು ವರ್ಷಗಳ ಕರ್ತವ್ಯದ ಪೂರ್ಣಗೊಳಿಸಿದ ಯುವಕರಿಗೆ ಬಿಜೆಪಿ ಕಚೇರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಉದ್ಯೋಗಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಸಶಸ್ತ್ರ ಪಡೆಗಳಿಗೆ ಸೇರಲು ತರಬೇತಿ ಪಡೆಯುವ ಯುವಕರು ಭದ್ರತಾ ಸಿಬ್ಬಂದಿಯ ಕೆಲಸವನ್ನು ಬಯಸುತ್ತಾರೆ ಎಂಬ ಬಿಜೆಪಿ ನಾಯಕರ ಊಹೆಯನ್ನು ಟೀಕಿಸಿದ್ದಾರೆ. ದೇಶದ ಯುವಕರು ಮತ್ತು ಸೇನಾ ಸಿಬ್ಬಂದಿಯನ್ನು ತುಂಬಾ ಅಗೌರವಗೊಳಿಸಬೇಡಿ. ನಮ್ಮ ದೇಶದ ಯುವಕರು ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಹಗಲಿರುಳು ಶ್ರಮಿಸುತ್ತಾರೆ, ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಾರೆ ಏಕೆಂದರೆ ಅವರು ಸೈನ್ಯಕ್ಕೆ ಸೇರಿ ಜೀವನಪೂರ್ತಿ ದೇಶಕ್ಕಾಗಿ ಸೇವೆ ಸಲ್ಲಿಸಲು ಬಯಸುತ್ತಾರೆಯೇ ಹೊರತು ಬಿಜೆಪಿ ಕಚೇರಿಯ ಹೊರಗೆ ಕಾವಲುಗಾರರಾಗಿರಲು ಬಯಸುವುದಿಲ್ಲ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

‘ಅಗ್ನಿಪಥ’ ಯೋಜನೆ ವಿರೋಧಿಸಿ ಮಿಲಿಟರಿ ಆಕಾಂಕ್ಷಿಗಳ ಪ್ರತಿಭಟನೆಯ ನಡುವೆಯೇ ವಿಜಯವರ್ಗಿಯ, ಮಿಲಿಟರಿ ತರಬೇತಿಯ ನಂತರ ‘ಅಗ್ನಿವೀರರು’ ದಕ್ಷ ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿರುತ್ತಾರೆ ಎಂದು ಹೇಳಿದರು.

ಮಿಲಿಟರಿ ತರಬೇತಿಯಲ್ಲಿ ಶಿಸ್ತು ಮತ್ತು ಆದೇಶಗಳ ಪಾಲನೆ ಇರುತ್ತದೆ. ಅವರು ಹದಿನೇಳೂವರೆ ಮತ್ತು 23 ವರ್ಷಗಳ ನಡುವಿನ ಯುವಕರು ನಾಲ್ಕು ವರ್ಷಗಳ ತರಬೇತಿಯಿಂದ ಹಿಂತಿರುಗಿದ ನಂತರ ಅಂದರೆ , ಯಾರಾದರೂ 21 ನೇ ವರ್ಷದಲ್ಲಿ ಸೇನೆ ಸೇರಿದರೆ ಕರ್ತವ್ಯ ಮುಗಿಯುವಾಗ ವ್ಯಕ್ತಿಗೆ 25 ವರ್ಷ ಆಗುತ್ತದೆ. ಆಗ ಅವರ ಕೈಯಲ್ಲಿ ₹ 11 ಲಕ್ಷ ಮತ್ತು ಅಗ್ನಿವೀರ್ ಬ್ಯಾಡ್ಜ್ ಇರುತ್ತದೆ. ಬಿಜೆಪಿ ಕಚೇರಿಗೆ ಸೆಕ್ಯೂರಿಟಿ ಗಾರ್ಡ್ ನೇಮಿಸಬೇಕಾದರೆ ನಾನು ಅಗ್ನಿವೀರನನ್ನು ಆಯ್ಕೆ ಮಾಡುತ್ತೇನೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯವರ್ಗಿಯ ಹೇಳಿದ್ದಾರೆ.

ಬಿಜೆಪಿ ಸಂಸದ ವರುಣ್ ಗಾಂಧಿ ಕೂಡ “ಸೆಕ್ಯುರಿಟಿ ಗಾರ್ಡ್ ಕಾಮೆಂಟ್” ಕುರಿತು ತಮ್ಮ ಪಕ್ಷದ ಸಹೋದ್ಯೋಗಿಯನ್ನು ಟೀಕಿಸಿ ಟ್ವೀಟ್ ಮಾಡಿದ್ದಾರೆ.

ಮಹಾನ್ ಸೇನೆ..ಇಡೀ ಪ್ರಪಂಚದಾದ್ಯಂತ ಅವರ ಶೌರ್ಯವನ್ನು ಪ್ರತಿಧ್ವನಿಸುತ್ತದೆ. ಆದರೆ ಅದು ರಾಜಕೀಯ ಕಚೇರಿಯ ಚೌಕೀದಾರರಾಗಲು ಆಹ್ವಾನವನ್ನು ಪಡೆಯುತ್ತದೆ. ಆ ಆಫರ್ ನೀಡಿದವರಿಗೆ ಅಭಿನಂದನೆಗಳು. ಭಾರತೀಯ ಸೇನೆಯು ಭಾರತಮಾತೆಯ ಸೇವೆಯ ಮಾಧ್ಯಮವಾಗಿದೆ. ಇದು ಕೇವಲ ಕೆಲಸವಲ್ಲ ಎಂದು ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕೂಡ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಏತನ್ಮಧ್ಯೆ, ಕೆಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ಮುಂದುವರಿದಿವೆ, ಉತ್ತರ ಪ್ರದೇಶ, ತೆಲಂಗಾಣ ಮತ್ತು ಬಿಹಾರದಲ್ಲಿ ಪ್ರತಿಭಟನೆ ಮತ್ತಷ್ಟು ತೀವ್ರವಾಗಿದೆ. ಪ್ರತಿಭಟನೆಯ ನಡುವೆಯೇ ಕೇಂದ್ರ ಹಲವು ರಿಯಾಯಿತಿಗಳನ್ನು ಘೋಷಿಸಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 9:18 pm, Sun, 19 June 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ