ಕರ್ನಾಟಕ ಕಾಂಗ್ರೆಸ್​ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ರಾತ್ರೋ ರಾತ್ರಿ ಬೆಂಗಳೂರಿಗೆ ಬಂದ ಹೈಕಮಾಂಡ್ ನಾಯಕರು

ಎರಡುವರೆ ವರ್ಷದ ಬಳಿಕ ಸಿಎಂ ಹಾಗೂ ಸಚಿವ ಸಂಪುಟ ಬದಲಾವದಣೆ ಬಗ್ಗೆ ಸಿದ್ದರಾಮಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣದ ನಡುವೆ ಕಿತ್ತಾಟ ಶುರುವಾಗಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿ ಹೈಕಮಾಂಡ್​, ರಾತ್ರೋ ರಾತ್ರಿ ಬೆಂಗಳೂರಿಗೆ ಬಂದಿಳಿದಿದೆ. ಇದರಿಂದ ಕರ್ನಾಟಕ ಕಾಂಗ್ರೆಸ್​​ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ. ಹೈಕಮಾಂಡ್​ ನಾಯಕರ ಸಭೆಯಲ್ಲಿ ಯಾವೆಲ್ಲಾ ಅಂಶಗಳು ಚರ್ಚೆಯಾಗಲಿವೆ ಎನ್ಜುವ ವಿವರ ಈ ಕೆಳಗಿನಂತಿದೆ.

ಕರ್ನಾಟಕ ಕಾಂಗ್ರೆಸ್​ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ರಾತ್ರೋ ರಾತ್ರಿ ಬೆಂಗಳೂರಿಗೆ ಬಂದ ಹೈಕಮಾಂಡ್ ನಾಯಕರು
ಕಾಂಗ್ರೆಸ್ ನಾಯಕರು
Edited By:

Updated on: Apr 03, 2026 | 11:00 AM

ಬೆಂಗಳೂರು, (ನವೆಂಬರ್ 01): ರಾಜ್ಯ ರಾಜಕೀಯದಲ್ಲಿ (Karnataka Politics) ಈಗ ಆಪರೇಷನ್​ನದ್ದೇ ಮಾತು. ನಿನ್ನೆಯಷ್ಟೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸರ್ಕಾರ ಮಹಾರಾಷ್ಟ್ರ ಮಾದರಿಯಲ್ಲಿ ಪತನವಾಗುತ್ತೆ ಎಂದು ಬಾಂಬ್ ಸಿಡಿಸಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರೇ ಆಪರೇಷನ್ ಕಮಲ(Operation Kamala)  ನಡೆಯುತ್ತಿದೆ ಎಂದು ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಇದರ ಮಧ್ಯೆ ಎರಡುವರೆ ವರ್ಷದ ಬಳಿಕ ಸಿಎಂ ಹಾಗೂ ಸಚಿವ ಸಂಪುಟ ಬದಲಾವದಣೆ ಬಗ್ಗೆ ಸಿದ್ದರಾಮಮಯ್ಯ(Siddaramaiah)  ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣದ ನಡುವೆ ಕಿತ್ತಾಟ ಶುರುವಾಗಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿ ಹೈಕಮಾಂಡ್​, ರಾತ್ರೋ ರಾತ್ರಿ ಬೆಂಗಳೂರಿಗೆ ಬಂದಿಳಿದಿದೆ.

ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ನಿನ್ನೆ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕದ ಕುರಿತು ರಾಜ್ಯ ನಾಯಕರ ಚರ್ಚೆ ಹಾಗೂ ಅಲ್ಲದೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣಗಳ ನಡುವಿನ ಆಂತರಿಕ ಕಿತ್ತಾಟಗಳಿಗೆ ಬ್ರೇಕ್ ಹಾಕಲು ಹೈಕಮಾಂಡ್ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್​ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಸಿಎಂ ಹಾಗೂ ಡಿಸಿಎಂ ಬಣದ ಶಾಸಕರು ಪದೇ ಪದೇ ಹೇಳಿಕೆ ನೀಡುತ್ತಿರುವುದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ. ಈ ಬೆಳವಣಿಗೆಗೆ ಬ್ರೇಕ್ ಹಾಕಲು ವೇಣುಗೋಪಾಲ್ ಹಾಗೂ ಸುರ್ಜೆವಾಲ ಅವರು ಪಂಚ ರಾಜ್ಯ ಚುನಾವಣೆ ಕೆಲಸಗಳನ್ನೂ ಬದಿಗೊತ್ತಿ ಕರ್ನಾಟಕಕ್ಕೆ ದೌಡಾಯಿಸಿದ್ದಾರೆ.

ಎಐಸಿಸಿ ತನಕ ತಲುಪಿದ್ದ ಬೆಳಗಾವಿ ಪಾಲಿಟಿಕ್ಸ್

ಮತ್ತೊಂದೆಡೆ ಸತೀಶ್ ಜಾರಕಿಹೊಳಿ ನಡೆ ಕಾಂಗ್ರೆಸ್​ನಲ್ಲಿ ಕಂಪನ ಸೃಷ್ಟಿಸಿದೆ. ಹಲವು ಶಾಸಕರ ಜೊತೆಗೆ ಪ್ರವಾಸದ ಪ್ಲ್ಯಾನ್ ಅನ್ನು ಸ್ವತಃ ವೇಣುಗೋಪಾಲ್ ತಡೆದಿದ್ದರು. ಆದರೂ ಸಹ ಇದೀಗ ಸತೀಶ್ ಜಾರಕಿಹೊಳಿ ಪ್ರವಾಸ ಪ್ಲ್ಯಾನ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲೂ ವೇಣುಗೋಪಾಲ್ ಹಾಗೂ ಸುರ್ಜೆವಾಲ ರಾಜ್ಯಕ್ಕೆ ಬಂದಿದ್ದು, ಈ ಬಗ್ಗೆ ಚರ್ಚೆ ನಡೆಸಿ ಸತೀಶ್ ಜಾರಕಿಹೊಳಿ ಸಮಸ್ಯೆ ಬಗೆಹರಿಸಲಿದ್ದಾರೆ. ಇನ್ನೊಂದೆಡೆ ಸತೀಶ್ ಜಾರಕಿಹೊಳಿ ತಮ್ಮ ಸಮಸ್ಯೆ ಹಾಗೂ ಬೇಡಿಕೆಗಳನ್ನು ಎಐಸಿಸಿ ನಾಯಕರ ಮುಂದಿಡಲಿದ್ದಾರೆ.

ಸಿಎಂ ಹಾಗೂ ಡಿಸಿಎಂ ಜತೆ ಮಾತುಕತೆ

ಬಣ ರಾಜಕೀಯ ಶುರುವಾಗಿರುವುದನ್ನು ಗಮನಿಸಿ ಬೆಂಗಳೂರಿಗೆ ಬಂದಿರುವ ವೇಣುಗೋಪಾಲ್ ಹಾಗೂ ಸುರ್ಜೆವಾಲ ಇಂದು(ನವೆಂಬರ್ 01) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಸಿಎಂ ನಿವಾಸದಲ್ಲಿ ಹೈಕಮಾಂಡ್ ನಾಯಕರು ಮಹತ್ವದ ಸಭೆ ನಡೆಸಲಿದ್ದು, ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಶಾಸಕರ ಹೇಳಿಕೆಗಳ ಬಗ್ಗೆ ಚರ್ಚೆ ನಡೆಸಿ ಬಣ ರಾಜಕೀಯಕ್ಕೆ ಬ್ರೇಕ್ ಹಾಕುವಂತೆ ಇಬ್ಬರೂ ನಾಯಕರಿಗೆ ಖಡಕ್ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ. ಜೊತೆ ಲೋಕಸಭಾ ಚುನಾವಣೆ ಸಂಬಂಧ ಚರ್ಚೆ ನಡೆಸಲಿದ್ದಾರೆ ಎಂದು  ತಿಳಿದುಬಂದಿದೆ.

ನಿಗಮ ಮಂಡಳಿ ನೇಮಕಾತಿ ಇಂದು ಫೈನಲ್ ?

ತಡ ರಾತ್ರಿ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಹೈಕಮಾಂಡ್ ನಾಯಕರು, ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಜತೆ ಮಹತ್ವದ ಸಭೆ ನಡೆಸಿ ಕಗ್ಗಂಟಾಗಿ ಉಳಿದಿರುವ ನಿಗಮ ಮಂಡಳಿ ನೇಮಕ ಬಗ್ಗೆ ಮಾತುಕತೆ ನಡೆಸಿ ಅಂತಿಮ ಪಟ್ಟಿ ಫೈನಲ್ ಮಾಡಲಿದ್ದಾರೆ ಎನ್ನಲಾಗಿದೆ.

ಶಾಸಕರಿಗೆ ಮಾತ್ರ ಮೊದಲಿಗೆ ನಿಗಮ ಮಂಡಳಿ ಸ್ಥಾನಮಾನ ನೀಡೋಣ ಸಿದ್ದರಾಮಯ್ಯ ಹೇಳುತ್ತಿದ್ದರೆ, ಶಾಸಕರ ಜತೆ ಪ್ರಮುಖ ಕಾರ್ಯಕರ್ತರಿಗೂ ನಿಗಮಮಂಡಳಿ ನೀಡೋಣ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. ಹೀಗಾಗಿ ಎಐಸಿಸಿ ನಾಯಕರು ಇಂದು ಇದೇ ವಿಚಾರವಾಗಿ ಚರ್ಚೆ ನಡೆಸಿ ಫೈನಲ್​ ಮಾಡಲಿದ್ದು, ವಾರಾಂತ್ಯದೊಳಗೆ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:48 am, Wed, 1 November 23

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us