AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಕೆ ಸುಬ್ಬಯ್ಯದಿಂದ ಬಿವೈ ವಿಜಯೇಂದ್ರ ವರೆಗೆ: ಕರ್ನಾಟಕ ಬಿಜೆಪಿ ಅಧ್ಯಕ್ಷರ ಪಟ್ಟಿ ಇಲ್ಲಿದೆ

Karnataka BJP Presidents List: ಕರ್ನಾಟಕ ಬಿಜೆಪಿಯ ನೂತನ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಮೂಲಕ ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿಯ 14ನೇ ರಾಜ್ಯಾಧ್ಯಕ್ಷರಾಗಿದ್ದಾರೆ. ಎಕೆ ಸುಬ್ಬಯ್ಯದಿಂದ ಬಿವೈ ವಿಜಯೇಂದ್ರ ವರೆಗೆ ಕರ್ನಾಟಕ ಬಿಜೆಪಿ ಅಧ್ಯಕ್ಷರು. ಯಾರು ಯಾರು? ಅವರು ಎಷ್ಟು ಅವಧಿವರೆಗೆ ಬಿಜೆಪಿಯನ್ನು ಮುನ್ನಡೆಸಿದ್ದಾರೆ ಎನ್ನುವ ವಿವರ ಇಲ್ಲಿದೆ.

ಎಕೆ ಸುಬ್ಬಯ್ಯದಿಂದ ಬಿವೈ ವಿಜಯೇಂದ್ರ ವರೆಗೆ: ಕರ್ನಾಟಕ ಬಿಜೆಪಿ ಅಧ್ಯಕ್ಷರ ಪಟ್ಟಿ ಇಲ್ಲಿದೆ
ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ರಮೇಶ್ ಬಿ. ಜವಳಗೇರಾ
|

Updated on:Nov 15, 2023 | 12:02 PM

Share

ಬೆಂಗಳೂರು, (ನವೆಂಬರ್ 15): ಕರ್ನಾಟಕ ಬಿಜೆಪಿಯ ನೂತನ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ (BY Vijayendra) ಅವರು ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ಅಧಿಕೃತವಾಗಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಿದ್ದು, ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ಬಿಜೆಪಿಯಲ್ಲೀಗ ಯುವ ಹವಾ ಶುರುವಾಗಿದೆ. ಅಲ್ಲದೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲುವಿನ ಕಡೆಗೆ ಕೊಡ್ಯೊಯ್ಯಲು ಹೆಗಲು ಕೊಟ್ಟಿದ್ದಾರೆ. ಇನ್ನು ಇಲ್ಲಿಯವರೆ ಕರ್ನಾಟಕ ಬಿಜೆಪಿಯ ಹೊಣೆಯನ್ನು ಯಾರೆಲ್ಲಾ ಹೊತ್ತೊಂಡಿದ್ದಾರೆ ಎನ್ನುವ ವಿವರ ಈ ಕೆಳಗಿನಂತಿದೆ.

1980ರಲ್ಲಿ ಎ.ಕೆ ಸುಬ್ಬಯ್ಯ ಅವರು ಕರ್ನಾಟಕ ಬಿಜೆಪಿಯ ಮೊದಲ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಬಳಿಕ ಬಿ.ಬಿ ಶಿವಪ್ಪ (BB Shivappa), ಬಿ.ಎಸ್.‌ ಯಡಿಯೂರಪ್ಪ (BS Yediyurappa), ಕೆ.ಎಸ್‌. ಈಶ್ವರಪ್ಪ (KS Eshwarappa) ಸೇರಿದಂತೆ ಹಲವರು ರಾಜ್ಯಾಧ್ಯಕ್ಷರಾಗಿ ಬಿಜೆಪಿಗೆ ದುಡಿದಿದ್ದಾರೆ. ಬಿಜೆಪಿ ಕರ್ನಾಟಕದಲ್ಲಿ ಈ ಮಟ್ಟಕ್ಕೆ ಬೆಳೆದು ನಿಲ್ಲುವಲ್ಲಿ ಯಡಿಯೂರಪ್ಪನವರ ಪಾತ್ರ ಬಹಳ ದೊಡ್ಡದಿದೆ.

ಇದನ್ನೂ ಓದಿ: BY Vijayendra: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿಜಯೇಂದ್ರ, ಹಲವು ನಾಯಕರು ಗೈರು

1988ರಲ್ಲಿ ಮೊದಲ ಬಾರಿಗೆ ಬಿ.ಎಸ್. ಯಡಿಯೂರಪ್ಪ ರಾಜ್ಯಾಧ್ಯಕ್ಷರಾಗಿದ್ದರು. ಹಾಗೇ 1998 ಮತ್ತು 2016ರಲ್ಲೂ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು. ಇದರೊಂದಿಗೆ ಯಡಿಯೂರಪ್ಪ ಒಟ್ಟು ಮೂರು ಬಾರಿ ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿದ್ದರು. ಇನ್ನು ಕೆಎಸ್ ಈಶ್ವರಪ್ಪ 1993 ಹಾಗೂ 2010ರಲ್ಲಿ ಎರಡೂ ಬಾರಿ ರಾಜ್ಯಾಧ್ಯಕ್ಷರಾಗಿದ್ದರು.

ಬಿಜೆಪಿಯ ಈ ಹಿಂದಿನ ರಾಜ್ಯಾದ್ಯಕ್ಷರು ಯಾರು?

  • ಎ.ಕೆ. ಸುಬ್ಬಯ್ಯ: 1980 ರಿಂದ 1983 (3 ವರ್ಷ)
  •  ಬಿ.ಬಿ. ಶಿವಪ್ಪ: 1983-1988 (5 ವರ್ಷ)
  •  ಬಿ.ಎಸ್.‌ ಯಡಿಯೂರಪ್ಪ: 1988-1991 (3 ವರ್ಷ)
  •  ಕೆ.ಎಸ್.‌ ಈಶ್ವರಪ್ಪ: 1993-1998 (5 ವರ್ಷ)
  • ಬಿ.ಎಸ್.‌ ಯಡಿಯೂರಪ್ಪ: 1998-1999 (1 ವರ್ಷ)
  •  ಬಸವರಾಜ ಪಾಟೀಲ್‌ ಸೇಡಂಳ 2000- 2003 (3 ವರ್ಷ)
  •  ಅನಂತ್‌ ಕುಮಾರ್: 2003- 2004 (1 ವರ್ಷ)
  •  ಜಗದೀಶ್‌ ಶೆಟ್ಟರ್: 2004-2006(2 ವರ್ಷ)
  •  ಡಿ.ವಿ. ಸದಾನಂದ ಗೌಡ: 2006-2010 (4 ವರ್ಷ)
  • ಕೆ.ಎಸ್.‌ ಈಶ್ವರಪ್ಪ: 2010-2013 (3 ವರ್ಷ )
  • ಪ್ರಲ್ಹಾದ್‌ ಜೋಶಿ-2013-2016 (3 ವರ್ಷ)
  • ಬಿ.ಎಸ್.‌ ಯಡಿಯೂರಪ್ಪ: 2016-2019 (3 ವರ್ಷ)
  • ನಳಿನ್‌ ಕುಮಾರ್‌ ಕಟೀಲ್: 2019- (4 ವರ್ಷ)
  • ಬಿ.ವೈ. ವಿಜಯೇಂದ್ರ: 2023 (ನ. 15) ಹಾಲಿ

Published On - 11:41 am, Wed, 15 November 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?