AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯತ್ತ ಮುಖ ಮಾಡಿದ ಅಖಂಡ ಶ್ರೀನಿವಾಸ್ ಮೂರ್ತಿ, ಇತ್ತ ಡಿಕೆ ಶಿವಕುಮಾರ್​ ಭೇಟಿಯಾದ ಬಿಜೆಪಿ ಹಿರಿಯ ನಾಯಕ

ಕಾಂಗ್ರೆಸ್​ ಶುರು ಮಾಡಿದ ಆಪರೇಷನ್ ಹಸ್ತ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಲೋಕಸಭಾ ಚುನಾವಣೆಗಾಗಿ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಶುರುವಾಗುವ ಎಲ್ಲಾ ಲಕ್ಷಣಗಳು ಗೋಚರಿಸಿವೆ. ಇದರ ಮಧ್ಯೆ ಮಾಜಿ ಶಾಸಕರೊಬ್ಬರು ಬಿಜೆಪಿಯತ್ತ ಮುಖ ಮಾಡಿದ್ದರೆ, ಬಿಜೆಪಿ ಹಿರಿಯ ನಾಯಕರೊಬ್ಬರು ಡಿಕೆ ಶಿವಕುಮಾರ್ ಭೇಟಿಯಾಗಿದ್ದು, ಬಾರೀ ಕುತೂಹಲ ಮೂಡಿಸಿದೆ.

ಬಿಜೆಪಿಯತ್ತ ಮುಖ ಮಾಡಿದ ಅಖಂಡ ಶ್ರೀನಿವಾಸ್ ಮೂರ್ತಿ,  ಇತ್ತ ಡಿಕೆ ಶಿವಕುಮಾರ್​ ಭೇಟಿಯಾದ ಬಿಜೆಪಿ ಹಿರಿಯ ನಾಯಕ
ಡಿಕೆ ಶಿವಕುಮಾರ್ ಭೇಟಿಯಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು
ಕಿರಣ್​ ಹನಿಯಡ್ಕ
| Edited By: |

Updated on: Aug 21, 2023 | 12:42 PM

Share

ಬೆಂಗಳೂರು, (ಆಗಸ್ಟ್ 21): ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆದಯೇ ರಾಜ್ಯ ರಾಜಕಾರಣದಲ್ಲಿ (Karnataka Politics) ಹೊಸ ಬೆಳವಣಿಗೆಗಳು ನಡೆಯುತ್ತಿವೆ. ಅದರಲ್ಲೂ ಕಾಂಗ್ರೆಸ್(Congress)​ ತೊರೆದಿರುವ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ (Akhanda Srinivas murthy) ಇದೀಗ ಬಿಜೆಪಿ ಸೇರ್ಪಡೆಗೆ ಕಸರತ್ತು ನಡೆಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಶ್ರೀನಿವಾಸ್ ಮೂರ್ತಿ ಇದೀಗ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿಅವರು ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ. ಕೋಲಾರ ಹಾಲಿ ಸಂಸದ ಎಸ್. ಮುನಿಸ್ವಾಮಿಗೆ 2024ರ ಲೋಕಸಭಾ ಚುನಾವಣೆಯ ಟಿಕೆಟ್​ ಕಟ್ ಆಗಲಿದೆ ಎನ್ನುವ ಸುದ್ದಿ ಇದೆ. ಹೀಗಾಗಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುಲು ಕಸರತ್ತು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಕಳೆದ ನಾಲ್ಕೈದು ದಿನಗಳ ಹಿಂದೆ ಬಸವರಾಜ ಬೊಮ್ಮಾಯಿ‌ ಭೇಟಿಗೆ ಪ್ರಯತ್ನಿಸಿದ್ದರು. ಆದ್ರೆ, ಇನ್ನೂ ಭೇಟಿ ಬೊಮ್ಮಾಯಿ ಭೇಟಿಗೆ ಅವಕಾಶ ಸಿಕ್ಕಿಲ್ಲ.

ಈ ಹಿಂದೆ ಕಿಡಿಗೇಡಿಗಳು ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಹಚ್ಚಿದ ಬಳಿಕ ಬಿಜೆಪಿ ನಾಯಕರು ಬೆಂಬಲವಾಗಿ ನಿಂತಿದ್ದರು. ಈ ಹಿನ್ನೆಲೆಯಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಇದೀಗ ಕಮಲ ಮುಡಿಯಲು ಮುಂದಾಗಿದ್ದಾರೆ.

ಡಿಕೆ ಶಿವಕುಮಾರ್ ಭೇಟಿಯಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು

ಮತ್ತೊಂದೆಡೆ ಕಾಂಗ್ರೆಸ್ ಆರಂಭಿಸಿರುವ ಆಪರೇಷನ್ ಹಸ್ತ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಮಧ್ಯೆಯೇ ಮಾಜಿ ಸಚಿವ, ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು(ಆಗಸ್ಟ್ 21) ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಗೌಪ್ಯ ಚರ್ಚೆ ನಡೆಸಿದ್ದು,ಭಾರೀ ಕುತೂಹಲಕ್ಕೆ ಮೂಡಿಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​