AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿಗಲ್ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಶಾಸಕರ ವಿರುದ್ಧ ಹೈಕೋರ್ಟ್​ಗೆ ಹೋಗಲು ತೀರ್ಮಾನಿಸಿದ ಪರಿಷತ್ ಸದಸ್ಯ

ರಾಜ್ಯದಲ್ಲಿ 2023 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು, ಈಗಾಗಲೇ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದೆ. ಅದರಂತೆ ಇದೀಗ ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮವಾಗಿದೆಯೆಂದು ವಿಧಾನಪರಿಷತ್ ಸದಸ್ಯ ನವೀನ್ ಆರೋಪಿಸಿದ್ದಾರೆ.

ಕುಣಿಗಲ್ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಶಾಸಕರ ವಿರುದ್ಧ ಹೈಕೋರ್ಟ್​ಗೆ ಹೋಗಲು ತೀರ್ಮಾನಿಸಿದ ಪರಿಷತ್ ಸದಸ್ಯ
ಕುಣಿಗಲ್​ ವಿಧಾನಪರಿಷತ್​ ಸದಸ್ಯ ನವೀನ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 01, 2023 | 12:58 PM

ತುಮಕೂರು: ರಾಜ್ಯದಲ್ಲಿ 2023 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ(Congress Party) ಸ್ಪಷ್ಟ ಬಹುಮತ ಪಡೆದು, ಈಗಾಗಲೇ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದೆ. ಅದರಂತೆ ಇದೀಗ ಕುಣಿಗಲ್(Kunigal) ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮವಾಗಿದೆಯೆಂದು ವಿಧಾನಪರಿಷತ್ ಸದಸ್ಯ ನವೀನ್(Naveen) ಆರೋಪಿಸಿದ್ದಾರೆ. ಹೌದು ಕುಣಿಗಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಹಾಗೂ ಬೆಂಗಳೂರು ಗ್ರಾಮಾಂತರ ಎಂ.ಪಿ ಡಿಕೆ ಸುರೇಶ್ ಸೇರಿ ಅಕ್ರಮ‌ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಮತದಾನದ ಮುನ್ನ ಕ್ಷೇತ್ರದಲ್ಲಿ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿದ್ದಾರೆ. ಅದರಲ್ಲಿ ಅಭ್ಯರ್ಥಿ ಕ್ರಮ ಸಂಖ್ಯೆ, ಸಿಂಬಲ್ ಹಾಗೂ ಬಾರ್ ಕೋಡ್ ಇದೆ ಎಂದಿದ್ದಾರೆ.

60 ಸಾವಿರ ಕಾರ್ಡ್​ಗಳನ್ನ ಮನೆ ಮನೆಗೆ ಹೋಗಿ ವಿತರಣೆ

ಹೌದು ಕಾಂಗ್ರೆಸ್​ ಪಕ್ಷ 60 ಸಾವಿರ ಕಾರ್ಡ್​ಗಳನ್ನ ಮನೆ ಮನೆಗೆ ಹೋಗಿ ವಿತರಣೆ ಮಾಡಿದೆ. ಕಾರ್ಡ್​ನ್ನ ಎಟಿಎಮ್ ರೀತಿ ಬಳಸಬಹುದು. ಅದರಲ್ಲಿ ಗಿಫ್ಟ್​​ನ್ನ ಖರೀದಿ ಮಾಡಬಹುದು ಎಂದು ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಮತದಾನ ಬಳಿಕ ಕಾರ್ಡ್ ಬಳಸಬಹುದೆಂದು ಸುಳ್ಳು ಭರವಸೆ ನೀಡಿದ್ದಾರೆ. ಇದರಿಂದ ಚುನಾವಣೆಯಲ್ಲಿ ವ್ಯತ್ಯಾಸ ಆಗಿದೆ. ಮತಕ್ಕೆ ಪ್ರಚಾರ ಆಗಿದ್ದರೇ, ಬಾರ್ ಕೋಡ್ ಯಾಕೆ ಪ್ರಿಂಟ್ ಮಾಡಿದ್ರು. ಮತದಾರರಿಗೆ ದಾರಿ ತಪ್ಪಿಸುವ ಕೆಲಸ ಆಗಿದೆ. ಅಕ್ರಮ ಮಾಡಿ ಕುಣಿಗಲ್ ಶಾಸಕ ಡಾ.ರಂಗನಾಥ್ ಗೆದ್ದಿದ್ದಾರೆ. ನಾವು ಹೈ ಕೋರ್ಟ್​ನಲ್ಲಿ ಈ ಬಗ್ಗೆ ಕೇಸ್ ದಾಖಲು ಮಾಡುವ ಮೂಲಕ ಕಾನೂನು ಹೋರಾಟ ಮಾಡ್ತಿವಿ ಎಂದಿದ್ದಾರೆ.

ಇದನ್ನೂ ಓದಿ:ಜಯನಗರ ಕ್ಷೇತ್ರದಲ್ಲಿ ಅಕ್ರಮವಾಗಿ ಮತದಾರರ ಸೇರ್ಪಡೆ ಆರೋಪ; ಮುಖ್ಯ ಚುನಾವಣಾಧಿಕಾರಿಗೆ N.R.ರಮೇಶ್ ದೂರು

ಇನ್ನು ಕಾಂಗ್ರೆಸ್​ಗೆ ಜನರು ಆಶಿರ್ವಾದ ಮಾಡಿದ್ದಾರೆಂಬ ಹೇಳುವ ನೈತಿಕತೆ ಇಲ್ಲ, ಅಕ್ರಮವಾಗಿ ಮತ ಪಡೆದಿದ್ದಾರೆ. ಕಾನೂನಿನ, ಪ್ರಜಾಪ್ರಭುತ್ವ ವಿರುದ್ಧ ಚುನಾವಣೆ ಮಾಡಿ ಕಾಂಗ್ರೆಸ್ ಗೆದ್ದಿದ್ದೆ. ಡಾ. ರಂಗನಾಥ್ ಅಕ್ರಮ ಮಾಡುವುದರಲ್ಲಿ ಎತ್ತಿದ ಕೈ. ಕುಕ್ಕರ್​ಗಳನ್ನ ನಾಲ್ಕೈದು ತಿಂಗಳುಗಳಿಂದ ಮನೆ ಮನೆಗೂ ಹಂಚಿದ್ದಾರೆ. ಈ ಬಗ್ಗೆ ಕೇಸ್ ದಾಖಲಿಸಿದರೂ ಕೂಡ ಚುನಾವಣೆಯಲ್ಲಿ ಅಕ್ರಮ ಮಾಡಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೇಗೆ ಹೋರಾಟ ಮಾಡಿದ್ವೋ, ಹಾಗೇ ಕುಣಿಗಲ್ ಕ್ಷೇತ್ರದ್ದು ಮಾಡ್ತಿವಿ.

ಜೊತೆಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚು ಅಕ್ರಮ‌ ನಡೆದಿರುವುದು ಬೆಳಕಿಗೆ ಬಂದಿದ್ದು, ಕಾಂಗ್ರೆಸ್ ಮುಂಚೆಯಿಂದಲೂ ಇದೆ ಮಾಡಿದೆ. ಕಾನೂನು ಹೋರಾಟ ಮಾಡಲು ಕುಣಿಗಲ್ ಬಿಜೆಪಿ ಮುಖಂಡರು ನಿರ್ಧಾರ ಮಾಡಿದ್ದಾರೆ. ಈ ವೇಳೆ ಕುಣಿಗಲ್ ಶಾಸಕ ಡಾ.ರಂಗನಾಥ್ ಭಾವಚಿತ್ರ, ಬಾರ್ ಕೋಡ್ ಇರುವ ಕಾರ್ಡ್ ತೋರಿಸಿ ಕಿಡಿಕಾರಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!