AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಹರಿಯಾಣ ಚುನಾವಣೆ ಮೇಲೆ ಎಫೆಕ್ಟ್ ಆಗಿದೆ: ಕೋಳಿವಾಡ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂಬ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಮುಖ್ಯಮಂತ್ರಿಗಳು ರಾಜೀನಾಮೆ ಕೊಡಲಿ ಎಂಬ ನನ್ನ ಹೇಳಿಕೆ ಅಳಿಸಲು ಸಾಧ್ಯವಿಲ್ಲ. ನಾನು ಕಾಂಗ್ರೆಸ್ ಪಕ್ಷದ ದೃಷ್ಟಿಯಿಂದ ಆ ಮಾತನ್ನು ಹೇಳಿದ್ದೇನೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆಬಿ ಕೋಳಿವಾಡ ಹೇಳಿದರು.​

ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಹರಿಯಾಣ ಚುನಾವಣೆ ಮೇಲೆ ಎಫೆಕ್ಟ್ ಆಗಿದೆ: ಕೋಳಿವಾಡ
ಕೆಬಿ ಕೋಳಿವಾಡ
ಪ್ರಸನ್ನ ಗಾಂವ್ಕರ್​
| Edited By: |

Updated on:Oct 08, 2024 | 12:12 PM

Share

ಬೆಂಗಳೂರು, ಅಕ್ಟೋಬರ್​ 08: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಕೇಳಿಬಂದಿರುವ ಮುಡಾ ಹಗರಣದ (Muda Scam) ಆರೋಪ ಹರಿಯಾಣ ಚುನಾವಣೆಯಲ್ಲಿ (Hariyana Election) ಕಾಂಗ್ರೆಸ್ (Congress) ಪಕ್ಷಕ್ಕೆ ಎಫೆಕ್ಟ್ ನೀಡಿದೆ. ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿಯವರು ಮುಡಾ ಹಗರಣದ ಬಗ್ಗೆ ಪದೇಪದೆ ಮಾತನಾಡಿದ್ದೂ ಕೂಡ ಸಾಕಷ್ಟು ಎಫೆಕ್ಟ್ ಆಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ (KB Koliwad) ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂಬ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದರು.

ಮುಖ್ಯಮಂತ್ರಿಗಳು ರಾಜೀನಾಮೆ ಕೊಡಲಿ ಎಂಬ ನನ್ನ ಹೇಳಿಕೆ ಅಳಿಸಲು ಸಾಧ್ಯವಿಲ್ಲ. ನಾನು ಕಾಂಗ್ರೆಸ್ ಪಕ್ಷದ ದೃಷ್ಟಿಯಿಂದ ಆ ಮಾತನ್ನು ಹೇಳಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಧಕ್ಕೆ ಆದರೆ ನೋಟಿಸ್ ಕೊಡುತ್ತಾರೆ. ನಾನು ಸಕ್ರಿಯ ರಾಜಕಾರಣದಲ್ಲಿ ಇಲ್ಲ, ಪಕ್ಷ ಉಳಿಸಲು ಕೆಲಸ ಮಾಡುತ್ತೇನೆ ಎಂದರು.

ಎಐಸಿಸಿ ನಾಯಕರು ಯಾಕೆ ನನಗೆ ಎಚ್ಚರಿಕೆ ನೀಡುತ್ತಾರೆ? ನಾನು ಕಾಂಗ್ರೆಸ್​ನ ಹಿರಿಯ ನಾಯಕ. ನಾನು (ಕೋಳಿವಾಡ) ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ನೇಹಿತರು. ನನ್ನ ಅಭಿಪ್ರಾಯವನ್ನ ನಾನು ಹೇಳಿದ್ದೇನೆ. ಮಲ್ಲಿಕಾರ್ಜುನ್​ ಖರ್ಗೆಯವರೂ ಕೂಡ ಅವರು ಇರಬಹುದು, ಇಲ್ಲದೇ ಇರಬಹುದು, ಪಕ್ಷ ಇರುತ್ತದೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕಾಂಗ್ರೆಸ್ ನಾಯಕರ ಕೆರಳಿಸಿದ ಕೋಳಿವಾಡ ಹೇಳಿಕೆ! ಸಿಎಂ, ಡಿಸಿಎಂ ಹೇಳಿದ್ದೇನು?

ಕಾಂತರಾಜ ವರದಿ ಕೇವಲ ಆರ್ಥಿಕ ಶೈಕ್ಷಣಿಕ ಸಾಮಾಜಿಕ ಜನಗಣತಿ ಮಾತ್ರವಲ್ಲ. ಅದು ಜಾತಿ ಜನಗಣತಿ ಕೂಡ ಹೌದು. ಅವೈಜ್ಞಾನಿಕ ಅಂದರೆ ಹೇಗೆ ಅಂತ ಅರ್ಥವಾಗುತ್ತಿಲ್ಲ. ಜಾತಿ ಗಣತಿ ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗುತ್ತದೆ ಎಂದು ಅನಿಸುವುದಿಲ್ಲ. ಇದನ್ನು ಜಾರಿಗೆಗೆ ವಿಳಂಬ ಮಾಡುವ ಅವಶ್ಯಕತೆ ಇಲ್ಲ. ಜಾತಿಗಣತಿ ಜಾರಿಗೆ ನನ್ನ ಬೆಂಬಲ ಇದೆ. ಒಂದು ತಿಂಗಳು ಸಮಯ ಕೊಟ್ಟು ಏನಾದರೂ ಬದಲಾವಣೆ ಇದ್ದರೆ ಮಾಡಲಿ. ಜಾತಿ ಜನಗಣತಿ ಮಾಡುವಾಗ ನಾನೇ ವೈಯಕ್ತಿಕವಾಗಿ ಹಲವು ಕಡೆ ಹೋಗಿದ್ದೇನೆ. ಪ್ರತಿಯೊಂದು ಮನೆಗೆ ಭೇಟಿ ನೀಡಿದ್ದಾರೆ. ಉಪಜಾತಿಯನ್ನೂ ಕೂಡ ದಾಖಲು ಮಾಡಿಕೊಂಡಿದ್ದಾರೆ. ಬಹಳ ಉತ್ತಮವಾಗಿ ಜನಗಣತಿ ಮಾಡಿದ್ದಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:11 pm, Tue, 8 October 24

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು