AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿಗೆ ವರ್ಗಾವಣೆ ಬಗ್ಗೆ ವಿದೇಶದಲ್ಲಿ ಮಾಹಿತಿ ಸಿಕ್ಕಿತೇ: ಎಂಬಿ ಪಾಟೀಲ್ ಪ್ರಶ್ನೆ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿದ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ಎಂಬಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿಗೆ ವರ್ಗಾವಣೆ ಬಗ್ಗೆ ವಿದೇಶದಲ್ಲಿ ಮಾಹಿತಿ ಸಿಕ್ಕಿತೇ ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿಗೆ ವರ್ಗಾವಣೆ ಬಗ್ಗೆ ವಿದೇಶದಲ್ಲಿ ಮಾಹಿತಿ ಸಿಕ್ಕಿತೇ: ಎಂಬಿ ಪಾಟೀಲ್ ಪ್ರಶ್ನೆ
ಎಂಬಿ ಪಾಟೀಲ್ ಮತ್ತು ಹೆಚ್​ಡಿ ಕುಮಾರಸ್ವಾಮಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Aug 05, 2023 | 6:21 PM

Share

ವಿಜಯಪುರ, ಆಗಸ್ಟ್ 5: ಕುಮಾರಸ್ವಾಮಿಗೆ ವರ್ಗಾವಣೆ ಬಗ್ಗೆ ವಿದೇಶದಲ್ಲಿ ಮಾಹಿತಿ ಸಿಕ್ಕಿತೇ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ (M.B.Patil) ಪ್ರಶ್ನಿಸಿದ್ದಾರೆ. ಸಿಂಗಾಪುರದಿಂದ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (H.D. Kumaraswamy) ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ವಿಚಾರವಾಗಿ 1 ಸಾವಿರ ಕೋಟಿ ದಂಧೆ ನಡೆದಿದೆ ಎಂದು ಆರೋಪಿಸಿದ್ದರು.

ಈ ಬಗ್ಗೆ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ವ್ಯಂಗ್ಯವಾಡಿದ ಎಂ.ಬಿ. ಪಾಟೀಲರು, ವರ್ಗಾವಣೆ ಬಗ್ಗೆ ಕುಮಾರಸ್ವಾಮಿಗೆ ವಿದೇಶದಲ್ಲಿ ಮಾಹಿತಿ ಸಿಕ್ಕಿತೇ ಎಂದು ಪ್ರಶ್ನಿಸಿದರು. ಅಲ್ಲದೆ, ಪೆನ್​ಡ್ರೈವ್ ಇದೆ ಅಂತಾ ಹೇಳಿ ಸುಮ್ಮನೇ ನಿಂದನೆ ಮಾಡಬಾರದು. ಪೆನ್​ಡ್ರೈವ್​ ಹೊರ ಬರಲಿಲ್ಲ, ಬರೀ ಮುಚ್ಚಿಕೊಂಡು ಹೇಳಿದ್ದೇ ಆಯ್ತು. ಕುಮಾರಸ್ವಾಮಿ ಬಳಿ ಪೆನ್ನೂ ಇಲ್ಲ ಡ್ರೈವ್​ ಇಲ್ಲ ಎಂದರು.

ಇದನ್ನೂ ಓದಿ: ನೈಸ್ ಹಗರಣದ ಕುರಿತು ದಾಖಲೆ ನೀಡಿದ್ರೆ, ನೀವು ರೈತರಿಗೆ ನ್ಯಾಯ ಕೊಡಿಸುತ್ತೀರಾ – ಪ್ರಧಾನಿ ಮೋದಿಗೆ ಕುಮಾರಸ್ವಾಮಿ ಪ್ರಶ್ನೆ

ಹೆಚ್​.ಡಿ.ಕುಮಾರಸ್ವಾಮಿ ಅವಧಿಯಲ್ಲಿ ವರ್ಗಾವಣೆ ಆಗಿಯೇ ಇಲ್ವಾ ಎಂದು ಪ್ರಶ್ನಿಸಿದ ಪಾಟೀಲರು, ವರ್ಗಾವಣೆ ಆಡಳಿತಾತ್ಮಕ ವಿಷಯ. ಅವರ ನೇತೃತ್ವದ ಸರ್ಕಾರದಲ್ಲಿ ನಾನೇ ಗೃಹಸಚಿವನಾಗಿದ್ದೆ. ಆಗ ಸಾಕಷ್ಟು ವರ್ಗಾವಣೆಗಳಿಗೆ ತಡೆಯಾಜ್ಞೆ ಆಗಿದೆ ಎಂದರು.

ಸರ್ಕಾರ ಪತನಕ್ಕೆ ವಿದೇಶದಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂಬ ವದಂತಿ ವಿಚಾರವಾಗಿ ಮಾತನಾಡಿದ ಎಂಬಿ ಪಾಟೀಲ್, ನಮ್ಮ ಸರ್ಕಾರ ಅಸ್ಥಿರಗೊಳಿಸಲು ಆಗುವುದಿಲ್ಲ. 136 ಶಾಸಕರಿದ್ದೇವೆ ಯಾರಿಗೂ ಸರ್ಕಾರ ಅಲುಗಾಡಿಸೋಕೆ ಆಗಲ್ಲ. ನಮ್ಮ ಸರ್ಕಾರ 5 ವರ್ಷ ಸುಭದ್ರ ಆಡಳಿತ ನೀಡುತ್ತದೆ. ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಮೊದಲು ಕುಮಾರಸ್ವಾಮಿ ತಮ್ಮ ಶಾಸಕರನ್ನು ಸಂಭಾಳಿಸಿಕೊಳ್ಳಲಿ. ಇಲ್ಲೇ ಏನು ಮಾಡಲು ಆಗಲ್ಲ, ವಿದೇಶದಲ್ಲಿ ಏನ್ ಮಾಡುತ್ತಾರೆ ಎಂದು ಪ್ರಶ್ನಿಸಿದರು.

ಎಸ್​ಸಿ ಎಸ್​ಟಿ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಲಾಗುತ್ತಿದೆ ಎಂಬ ಬಿಜೆಪಿ ನಾಯಕ ಮುರುಗೇಶ್ ನಿರಾಣಿ ಆರೋಪಕ್ಕೆ ತಿರುಗೇಟು ನೀಡಿದ ಪಾಟೀಲರು, ಹಣ ಯಾವಾಗ ದುರುಪಯೋಗ ಆಗಿದೆ ಎಂದು ನಿರಾಣಿಯರನ್ನ ಕೇಳಿ, ಮೆಟ್ರೋ ರೈಲಿಗಾಗಿ ಬಿಜೆಪಿ ಎಸ್​ಸಿ ಎಸ್​ಟಿ ಹಣ ಬಳಕೆ‌ ಮಾಡಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್