AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿಗೆ ವರ್ಗಾವಣೆ ಬಗ್ಗೆ ವಿದೇಶದಲ್ಲಿ ಮಾಹಿತಿ ಸಿಕ್ಕಿತೇ: ಎಂಬಿ ಪಾಟೀಲ್ ಪ್ರಶ್ನೆ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿದ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ಎಂಬಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿಗೆ ವರ್ಗಾವಣೆ ಬಗ್ಗೆ ವಿದೇಶದಲ್ಲಿ ಮಾಹಿತಿ ಸಿಕ್ಕಿತೇ ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿಗೆ ವರ್ಗಾವಣೆ ಬಗ್ಗೆ ವಿದೇಶದಲ್ಲಿ ಮಾಹಿತಿ ಸಿಕ್ಕಿತೇ: ಎಂಬಿ ಪಾಟೀಲ್ ಪ್ರಶ್ನೆ
ಎಂಬಿ ಪಾಟೀಲ್ ಮತ್ತು ಹೆಚ್​ಡಿ ಕುಮಾರಸ್ವಾಮಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Aug 05, 2023 | 6:21 PM

Share

ವಿಜಯಪುರ, ಆಗಸ್ಟ್ 5: ಕುಮಾರಸ್ವಾಮಿಗೆ ವರ್ಗಾವಣೆ ಬಗ್ಗೆ ವಿದೇಶದಲ್ಲಿ ಮಾಹಿತಿ ಸಿಕ್ಕಿತೇ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ (M.B.Patil) ಪ್ರಶ್ನಿಸಿದ್ದಾರೆ. ಸಿಂಗಾಪುರದಿಂದ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (H.D. Kumaraswamy) ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ವಿಚಾರವಾಗಿ 1 ಸಾವಿರ ಕೋಟಿ ದಂಧೆ ನಡೆದಿದೆ ಎಂದು ಆರೋಪಿಸಿದ್ದರು.

ಈ ಬಗ್ಗೆ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ವ್ಯಂಗ್ಯವಾಡಿದ ಎಂ.ಬಿ. ಪಾಟೀಲರು, ವರ್ಗಾವಣೆ ಬಗ್ಗೆ ಕುಮಾರಸ್ವಾಮಿಗೆ ವಿದೇಶದಲ್ಲಿ ಮಾಹಿತಿ ಸಿಕ್ಕಿತೇ ಎಂದು ಪ್ರಶ್ನಿಸಿದರು. ಅಲ್ಲದೆ, ಪೆನ್​ಡ್ರೈವ್ ಇದೆ ಅಂತಾ ಹೇಳಿ ಸುಮ್ಮನೇ ನಿಂದನೆ ಮಾಡಬಾರದು. ಪೆನ್​ಡ್ರೈವ್​ ಹೊರ ಬರಲಿಲ್ಲ, ಬರೀ ಮುಚ್ಚಿಕೊಂಡು ಹೇಳಿದ್ದೇ ಆಯ್ತು. ಕುಮಾರಸ್ವಾಮಿ ಬಳಿ ಪೆನ್ನೂ ಇಲ್ಲ ಡ್ರೈವ್​ ಇಲ್ಲ ಎಂದರು.

ಇದನ್ನೂ ಓದಿ: ನೈಸ್ ಹಗರಣದ ಕುರಿತು ದಾಖಲೆ ನೀಡಿದ್ರೆ, ನೀವು ರೈತರಿಗೆ ನ್ಯಾಯ ಕೊಡಿಸುತ್ತೀರಾ – ಪ್ರಧಾನಿ ಮೋದಿಗೆ ಕುಮಾರಸ್ವಾಮಿ ಪ್ರಶ್ನೆ

ಹೆಚ್​.ಡಿ.ಕುಮಾರಸ್ವಾಮಿ ಅವಧಿಯಲ್ಲಿ ವರ್ಗಾವಣೆ ಆಗಿಯೇ ಇಲ್ವಾ ಎಂದು ಪ್ರಶ್ನಿಸಿದ ಪಾಟೀಲರು, ವರ್ಗಾವಣೆ ಆಡಳಿತಾತ್ಮಕ ವಿಷಯ. ಅವರ ನೇತೃತ್ವದ ಸರ್ಕಾರದಲ್ಲಿ ನಾನೇ ಗೃಹಸಚಿವನಾಗಿದ್ದೆ. ಆಗ ಸಾಕಷ್ಟು ವರ್ಗಾವಣೆಗಳಿಗೆ ತಡೆಯಾಜ್ಞೆ ಆಗಿದೆ ಎಂದರು.

ಸರ್ಕಾರ ಪತನಕ್ಕೆ ವಿದೇಶದಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂಬ ವದಂತಿ ವಿಚಾರವಾಗಿ ಮಾತನಾಡಿದ ಎಂಬಿ ಪಾಟೀಲ್, ನಮ್ಮ ಸರ್ಕಾರ ಅಸ್ಥಿರಗೊಳಿಸಲು ಆಗುವುದಿಲ್ಲ. 136 ಶಾಸಕರಿದ್ದೇವೆ ಯಾರಿಗೂ ಸರ್ಕಾರ ಅಲುಗಾಡಿಸೋಕೆ ಆಗಲ್ಲ. ನಮ್ಮ ಸರ್ಕಾರ 5 ವರ್ಷ ಸುಭದ್ರ ಆಡಳಿತ ನೀಡುತ್ತದೆ. ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಮೊದಲು ಕುಮಾರಸ್ವಾಮಿ ತಮ್ಮ ಶಾಸಕರನ್ನು ಸಂಭಾಳಿಸಿಕೊಳ್ಳಲಿ. ಇಲ್ಲೇ ಏನು ಮಾಡಲು ಆಗಲ್ಲ, ವಿದೇಶದಲ್ಲಿ ಏನ್ ಮಾಡುತ್ತಾರೆ ಎಂದು ಪ್ರಶ್ನಿಸಿದರು.

ಎಸ್​ಸಿ ಎಸ್​ಟಿ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಲಾಗುತ್ತಿದೆ ಎಂಬ ಬಿಜೆಪಿ ನಾಯಕ ಮುರುಗೇಶ್ ನಿರಾಣಿ ಆರೋಪಕ್ಕೆ ತಿರುಗೇಟು ನೀಡಿದ ಪಾಟೀಲರು, ಹಣ ಯಾವಾಗ ದುರುಪಯೋಗ ಆಗಿದೆ ಎಂದು ನಿರಾಣಿಯರನ್ನ ಕೇಳಿ, ಮೆಟ್ರೋ ರೈಲಿಗಾಗಿ ಬಿಜೆಪಿ ಎಸ್​ಸಿ ಎಸ್​ಟಿ ಹಣ ಬಳಕೆ‌ ಮಾಡಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ