AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜೊತೆ ಮೈತ್ರಿ; ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಈ ಫೋಟೋದಲ್ಲಿ ಎಲ್ಲಿದ್ದಾರೆ?: ಕಾಂಗ್ರೆಸ್ ಪ್ರಶ್ನೆ

ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ಒಮ್ಮತಕ್ಕೆ ಬಂದಿದೆ. ಬಿಜೆಪಿ ನಾಯಕರಾದ ಅಮಿತ್ ಶಾ, ಜೆಪಿ ನಡ್ಡಾ ಜೊತೆಗಿನ ಮಾತುಕತೆ ವೇಳೆ ಜೆಡಿಎಸ್​ನ ಹೆಚ್​ಡಿ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಇದ್ದರು. ಆದರೆ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಇರಲಿಲ್ಲ. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ಟ್ವೀಟ್ ಮಾಡಿ ಜೆಡಿಎಸ್​ ಅನ್ನು ಪ್ರಶ್ನಿಸಿದೆ.

ಬಿಜೆಪಿ ಜೊತೆ ಮೈತ್ರಿ; ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಈ ಫೋಟೋದಲ್ಲಿ ಎಲ್ಲಿದ್ದಾರೆ?: ಕಾಂಗ್ರೆಸ್ ಪ್ರಶ್ನೆ
ಜೆಡಿಎಸ್ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾತುಕತೆ ನಡೆಸಿದ ಕುಮಾರಸ್ವಾಮಿ
ಪ್ರಸನ್ನ ಗಾಂವ್ಕರ್​
| Edited By: |

Updated on: Sep 22, 2023 | 9:42 PM

Share

ಬೆಂಗಳೂರು, ಸೆ.22: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ಒಮ್ಮತಕ್ಕೆ ಬಂದಿದೆ. ಬಿಜೆಪಿ ನಾಯಕರಾದ ಅಮಿತ್ ಶಾ, ಜೆಪಿ ನಡ್ಡಾ ಜೊತೆಗಿನ ಮಾತುಕತೆ ವೇಳೆ ಜೆಡಿಎಸ್​ನ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಇದ್ದರು. ಆದರೆ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಇರಲಿಲ್ಲ. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ (Congress) ಟ್ವೀಟ್ ಮೂಲಕ ಜೆಡಿಎಸ್​ ಅನ್ನು ಪ್ರಶ್ನಿಸಿದೆ.

ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಪಕ್ಷದ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳುವುದಕ್ಕೆ ರಾಜ್ಯಾಧ್ಯಕ್ಷರ ಅಭಿಪ್ರಾಯ ಬೇಕಿಲ್ಲವೇ? ಅವರ ಉಪಸ್ಥಿತಿ ಬೇಕಿಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ವೇಳೆ ಏನೇನು ಚರ್ಚೆ ನಡೆಸಿದ್ರು ಹೆಚ್​​ಡಿಕೆ, ಅಮಿತ್ ಶಾ? ಇಲ್ಲಿದೆ ವಿವರ

ಅಲ್ಲದೆ, ರಾಜ್ಯಾಧ್ಯಕ್ಷ ಹುದ್ದೆ ಎನ್ನುವುದು ಕುಮಾರಸ್ವಾಮಿಯವರ ಕುಟುಂಬ ಕೈ ಒರೆಸಲು ಇಟ್ಟುಕೊಂಡಿರುವ ಟಿಶ್ಯೂ ಪೇಪರ್ ಮಾತ್ರವೇ? ವಿಮಾನದ ಟಿಕೆಟ್ ಬುಕ್ ಮಾಡಲೊಬ್ಬರು, ಹೋಟೆಲ್ ರೂಮ್ ಬುಕ್ ಮಾಡಲೊಬ್ಬರು ಹಾಗೂ ತಮ್ಮ ಪುತ್ರ ಜೊತೆಗಿದ್ದರೆ ಸಾಕೇ? ಎಂದು ಪ್ರಶ್ನಿಸಿದೆ.

ಬಿಜೆಪಿಯ ಬಿ ಟೀಮ್ ಜೆಡಿಎಸ್ ಎಂಬುದಕ್ಕೆ ಇಂದು ಅಧಿಕೃತ ಮುದ್ರೆ ಬಿದ್ದಿದೆ, ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕದ್ದುಮುಚ್ಚಿ ಅಫೇರ್ ಇಟ್ಟುಕೊಂಡಿದ್ದ ಜೆಡಿಎಸ್ ಇಂದು ಬಹುರಂಗವಾಗಿ ಜೊತೆಗೂಡಿದೆ. ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಕುಮಾರಸ್ವಾಮಿಯವರು ಇಂದು ದರಿದ್ರ ಬಂದಿದೆ ಎಂದು ಒಪ್ಪಿಕೊಂಡಂತಾಗಿದೆ ಎಂದು ಮತ್ತೊಂದು ಟ್ವೀಟ್ ಮಾಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?