AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜೊತೆ ಮೈತ್ರಿ; ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಈ ಫೋಟೋದಲ್ಲಿ ಎಲ್ಲಿದ್ದಾರೆ?: ಕಾಂಗ್ರೆಸ್ ಪ್ರಶ್ನೆ

ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ಒಮ್ಮತಕ್ಕೆ ಬಂದಿದೆ. ಬಿಜೆಪಿ ನಾಯಕರಾದ ಅಮಿತ್ ಶಾ, ಜೆಪಿ ನಡ್ಡಾ ಜೊತೆಗಿನ ಮಾತುಕತೆ ವೇಳೆ ಜೆಡಿಎಸ್​ನ ಹೆಚ್​ಡಿ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಇದ್ದರು. ಆದರೆ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಇರಲಿಲ್ಲ. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ಟ್ವೀಟ್ ಮಾಡಿ ಜೆಡಿಎಸ್​ ಅನ್ನು ಪ್ರಶ್ನಿಸಿದೆ.

ಬಿಜೆಪಿ ಜೊತೆ ಮೈತ್ರಿ; ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಈ ಫೋಟೋದಲ್ಲಿ ಎಲ್ಲಿದ್ದಾರೆ?: ಕಾಂಗ್ರೆಸ್ ಪ್ರಶ್ನೆ
ಜೆಡಿಎಸ್ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾತುಕತೆ ನಡೆಸಿದ ಕುಮಾರಸ್ವಾಮಿ
ಪ್ರಸನ್ನ ಗಾಂವ್ಕರ್​
| Edited By: |

Updated on: Sep 22, 2023 | 9:42 PM

Share

ಬೆಂಗಳೂರು, ಸೆ.22: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ಒಮ್ಮತಕ್ಕೆ ಬಂದಿದೆ. ಬಿಜೆಪಿ ನಾಯಕರಾದ ಅಮಿತ್ ಶಾ, ಜೆಪಿ ನಡ್ಡಾ ಜೊತೆಗಿನ ಮಾತುಕತೆ ವೇಳೆ ಜೆಡಿಎಸ್​ನ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಇದ್ದರು. ಆದರೆ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಇರಲಿಲ್ಲ. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ (Congress) ಟ್ವೀಟ್ ಮೂಲಕ ಜೆಡಿಎಸ್​ ಅನ್ನು ಪ್ರಶ್ನಿಸಿದೆ.

ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಪಕ್ಷದ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳುವುದಕ್ಕೆ ರಾಜ್ಯಾಧ್ಯಕ್ಷರ ಅಭಿಪ್ರಾಯ ಬೇಕಿಲ್ಲವೇ? ಅವರ ಉಪಸ್ಥಿತಿ ಬೇಕಿಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ವೇಳೆ ಏನೇನು ಚರ್ಚೆ ನಡೆಸಿದ್ರು ಹೆಚ್​​ಡಿಕೆ, ಅಮಿತ್ ಶಾ? ಇಲ್ಲಿದೆ ವಿವರ

ಅಲ್ಲದೆ, ರಾಜ್ಯಾಧ್ಯಕ್ಷ ಹುದ್ದೆ ಎನ್ನುವುದು ಕುಮಾರಸ್ವಾಮಿಯವರ ಕುಟುಂಬ ಕೈ ಒರೆಸಲು ಇಟ್ಟುಕೊಂಡಿರುವ ಟಿಶ್ಯೂ ಪೇಪರ್ ಮಾತ್ರವೇ? ವಿಮಾನದ ಟಿಕೆಟ್ ಬುಕ್ ಮಾಡಲೊಬ್ಬರು, ಹೋಟೆಲ್ ರೂಮ್ ಬುಕ್ ಮಾಡಲೊಬ್ಬರು ಹಾಗೂ ತಮ್ಮ ಪುತ್ರ ಜೊತೆಗಿದ್ದರೆ ಸಾಕೇ? ಎಂದು ಪ್ರಶ್ನಿಸಿದೆ.

ಬಿಜೆಪಿಯ ಬಿ ಟೀಮ್ ಜೆಡಿಎಸ್ ಎಂಬುದಕ್ಕೆ ಇಂದು ಅಧಿಕೃತ ಮುದ್ರೆ ಬಿದ್ದಿದೆ, ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕದ್ದುಮುಚ್ಚಿ ಅಫೇರ್ ಇಟ್ಟುಕೊಂಡಿದ್ದ ಜೆಡಿಎಸ್ ಇಂದು ಬಹುರಂಗವಾಗಿ ಜೊತೆಗೂಡಿದೆ. ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಕುಮಾರಸ್ವಾಮಿಯವರು ಇಂದು ದರಿದ್ರ ಬಂದಿದೆ ಎಂದು ಒಪ್ಪಿಕೊಂಡಂತಾಗಿದೆ ಎಂದು ಮತ್ತೊಂದು ಟ್ವೀಟ್ ಮಾಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ