AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜೊತೆ ಮೈತ್ರಿ; ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಈ ಫೋಟೋದಲ್ಲಿ ಎಲ್ಲಿದ್ದಾರೆ?: ಕಾಂಗ್ರೆಸ್ ಪ್ರಶ್ನೆ

ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ಒಮ್ಮತಕ್ಕೆ ಬಂದಿದೆ. ಬಿಜೆಪಿ ನಾಯಕರಾದ ಅಮಿತ್ ಶಾ, ಜೆಪಿ ನಡ್ಡಾ ಜೊತೆಗಿನ ಮಾತುಕತೆ ವೇಳೆ ಜೆಡಿಎಸ್​ನ ಹೆಚ್​ಡಿ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಇದ್ದರು. ಆದರೆ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಇರಲಿಲ್ಲ. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ಟ್ವೀಟ್ ಮಾಡಿ ಜೆಡಿಎಸ್​ ಅನ್ನು ಪ್ರಶ್ನಿಸಿದೆ.

ಬಿಜೆಪಿ ಜೊತೆ ಮೈತ್ರಿ; ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಈ ಫೋಟೋದಲ್ಲಿ ಎಲ್ಲಿದ್ದಾರೆ?: ಕಾಂಗ್ರೆಸ್ ಪ್ರಶ್ನೆ
ಜೆಡಿಎಸ್ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾತುಕತೆ ನಡೆಸಿದ ಕುಮಾರಸ್ವಾಮಿ
ಪ್ರಸನ್ನ ಗಾಂವ್ಕರ್​
| Edited By: |

Updated on: Sep 22, 2023 | 9:42 PM

Share

ಬೆಂಗಳೂರು, ಸೆ.22: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ಒಮ್ಮತಕ್ಕೆ ಬಂದಿದೆ. ಬಿಜೆಪಿ ನಾಯಕರಾದ ಅಮಿತ್ ಶಾ, ಜೆಪಿ ನಡ್ಡಾ ಜೊತೆಗಿನ ಮಾತುಕತೆ ವೇಳೆ ಜೆಡಿಎಸ್​ನ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಇದ್ದರು. ಆದರೆ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಇರಲಿಲ್ಲ. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ (Congress) ಟ್ವೀಟ್ ಮೂಲಕ ಜೆಡಿಎಸ್​ ಅನ್ನು ಪ್ರಶ್ನಿಸಿದೆ.

ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಪಕ್ಷದ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳುವುದಕ್ಕೆ ರಾಜ್ಯಾಧ್ಯಕ್ಷರ ಅಭಿಪ್ರಾಯ ಬೇಕಿಲ್ಲವೇ? ಅವರ ಉಪಸ್ಥಿತಿ ಬೇಕಿಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ವೇಳೆ ಏನೇನು ಚರ್ಚೆ ನಡೆಸಿದ್ರು ಹೆಚ್​​ಡಿಕೆ, ಅಮಿತ್ ಶಾ? ಇಲ್ಲಿದೆ ವಿವರ

ಅಲ್ಲದೆ, ರಾಜ್ಯಾಧ್ಯಕ್ಷ ಹುದ್ದೆ ಎನ್ನುವುದು ಕುಮಾರಸ್ವಾಮಿಯವರ ಕುಟುಂಬ ಕೈ ಒರೆಸಲು ಇಟ್ಟುಕೊಂಡಿರುವ ಟಿಶ್ಯೂ ಪೇಪರ್ ಮಾತ್ರವೇ? ವಿಮಾನದ ಟಿಕೆಟ್ ಬುಕ್ ಮಾಡಲೊಬ್ಬರು, ಹೋಟೆಲ್ ರೂಮ್ ಬುಕ್ ಮಾಡಲೊಬ್ಬರು ಹಾಗೂ ತಮ್ಮ ಪುತ್ರ ಜೊತೆಗಿದ್ದರೆ ಸಾಕೇ? ಎಂದು ಪ್ರಶ್ನಿಸಿದೆ.

ಬಿಜೆಪಿಯ ಬಿ ಟೀಮ್ ಜೆಡಿಎಸ್ ಎಂಬುದಕ್ಕೆ ಇಂದು ಅಧಿಕೃತ ಮುದ್ರೆ ಬಿದ್ದಿದೆ, ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕದ್ದುಮುಚ್ಚಿ ಅಫೇರ್ ಇಟ್ಟುಕೊಂಡಿದ್ದ ಜೆಡಿಎಸ್ ಇಂದು ಬಹುರಂಗವಾಗಿ ಜೊತೆಗೂಡಿದೆ. ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಕುಮಾರಸ್ವಾಮಿಯವರು ಇಂದು ದರಿದ್ರ ಬಂದಿದೆ ಎಂದು ಒಪ್ಪಿಕೊಂಡಂತಾಗಿದೆ ಎಂದು ಮತ್ತೊಂದು ಟ್ವೀಟ್ ಮಾಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!