AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜೊತೆ ಮೈತ್ರಿ; ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಈ ಫೋಟೋದಲ್ಲಿ ಎಲ್ಲಿದ್ದಾರೆ?: ಕಾಂಗ್ರೆಸ್ ಪ್ರಶ್ನೆ

ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ಒಮ್ಮತಕ್ಕೆ ಬಂದಿದೆ. ಬಿಜೆಪಿ ನಾಯಕರಾದ ಅಮಿತ್ ಶಾ, ಜೆಪಿ ನಡ್ಡಾ ಜೊತೆಗಿನ ಮಾತುಕತೆ ವೇಳೆ ಜೆಡಿಎಸ್​ನ ಹೆಚ್​ಡಿ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಇದ್ದರು. ಆದರೆ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಇರಲಿಲ್ಲ. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ಟ್ವೀಟ್ ಮಾಡಿ ಜೆಡಿಎಸ್​ ಅನ್ನು ಪ್ರಶ್ನಿಸಿದೆ.

ಬಿಜೆಪಿ ಜೊತೆ ಮೈತ್ರಿ; ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಈ ಫೋಟೋದಲ್ಲಿ ಎಲ್ಲಿದ್ದಾರೆ?: ಕಾಂಗ್ರೆಸ್ ಪ್ರಶ್ನೆ
ಜೆಡಿಎಸ್ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾತುಕತೆ ನಡೆಸಿದ ಕುಮಾರಸ್ವಾಮಿ
ಪ್ರಸನ್ನ ಗಾಂವ್ಕರ್​
| Edited By: Rakesh Nayak Manchi|

Updated on: Sep 22, 2023 | 9:42 PM

Share

ಬೆಂಗಳೂರು, ಸೆ.22: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ಒಮ್ಮತಕ್ಕೆ ಬಂದಿದೆ. ಬಿಜೆಪಿ ನಾಯಕರಾದ ಅಮಿತ್ ಶಾ, ಜೆಪಿ ನಡ್ಡಾ ಜೊತೆಗಿನ ಮಾತುಕತೆ ವೇಳೆ ಜೆಡಿಎಸ್​ನ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಇದ್ದರು. ಆದರೆ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಇರಲಿಲ್ಲ. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ (Congress) ಟ್ವೀಟ್ ಮೂಲಕ ಜೆಡಿಎಸ್​ ಅನ್ನು ಪ್ರಶ್ನಿಸಿದೆ.

ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಪಕ್ಷದ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳುವುದಕ್ಕೆ ರಾಜ್ಯಾಧ್ಯಕ್ಷರ ಅಭಿಪ್ರಾಯ ಬೇಕಿಲ್ಲವೇ? ಅವರ ಉಪಸ್ಥಿತಿ ಬೇಕಿಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ವೇಳೆ ಏನೇನು ಚರ್ಚೆ ನಡೆಸಿದ್ರು ಹೆಚ್​​ಡಿಕೆ, ಅಮಿತ್ ಶಾ? ಇಲ್ಲಿದೆ ವಿವರ

ಅಲ್ಲದೆ, ರಾಜ್ಯಾಧ್ಯಕ್ಷ ಹುದ್ದೆ ಎನ್ನುವುದು ಕುಮಾರಸ್ವಾಮಿಯವರ ಕುಟುಂಬ ಕೈ ಒರೆಸಲು ಇಟ್ಟುಕೊಂಡಿರುವ ಟಿಶ್ಯೂ ಪೇಪರ್ ಮಾತ್ರವೇ? ವಿಮಾನದ ಟಿಕೆಟ್ ಬುಕ್ ಮಾಡಲೊಬ್ಬರು, ಹೋಟೆಲ್ ರೂಮ್ ಬುಕ್ ಮಾಡಲೊಬ್ಬರು ಹಾಗೂ ತಮ್ಮ ಪುತ್ರ ಜೊತೆಗಿದ್ದರೆ ಸಾಕೇ? ಎಂದು ಪ್ರಶ್ನಿಸಿದೆ.

ಬಿಜೆಪಿಯ ಬಿ ಟೀಮ್ ಜೆಡಿಎಸ್ ಎಂಬುದಕ್ಕೆ ಇಂದು ಅಧಿಕೃತ ಮುದ್ರೆ ಬಿದ್ದಿದೆ, ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕದ್ದುಮುಚ್ಚಿ ಅಫೇರ್ ಇಟ್ಟುಕೊಂಡಿದ್ದ ಜೆಡಿಎಸ್ ಇಂದು ಬಹುರಂಗವಾಗಿ ಜೊತೆಗೂಡಿದೆ. ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಕುಮಾರಸ್ವಾಮಿಯವರು ಇಂದು ದರಿದ್ರ ಬಂದಿದೆ ಎಂದು ಒಪ್ಪಿಕೊಂಡಂತಾಗಿದೆ ಎಂದು ಮತ್ತೊಂದು ಟ್ವೀಟ್ ಮಾಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ