AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡೇಶ್ವರಿ ಸೋಲಿನ ಮೆಲುಕು ಜೊತೆಗೆ ಬಾದಾಮಿ ಸ್ಪರ್ಧೆ ಹಿಂದಿನ ಸತ್ಯ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

2018ರಲ್ಲಿ ಸ್ಪರ್ಧಿಸಿ ಚಾಮುಂಡೇಶ್ವರಿಯಲ್ಲಿ ಸೋತಿದ್ದನ್ನು ಸಿಎಂ ಇನ್ನು ಮರೆತಿಲ್ಲ. ಹೌದು, ಅಂದು ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಹಾಗೂ ಬಾದಾಮಿಯಲ್ಲಿ ಸ್ಪರ್ಧಿಸಿದ್ದರು. ಆದರೆ, ಬಾದಾಮಿಯಲ್ಲಿ ಮಾತ್ರ ಗೆದ್ದು ಬೀಗಿದ್ದರು. ಪ್ರಬಲ ಪೈಪೋಟಿ ಕೊಟ್ಟಿದ್ದ ಬಿಜೆಪಿಯ ಶ್ರೀರಾಮಲು ವಿರುದ್ದ ಸ್ಪರ್ಧೆ ಮಾಡಿ, ಗೆಲುವು ಸಾಧಿಸಿದ ಸಿದ್ದರಾಮಯ್ಯನವರು ಇಂದು(ಆ.30) ತಾವು ಬಾದಾಮಿಯಲ್ಲಿ ಸ್ಪರ್ಧೆ ಮಾಡಿದ ಹಿಂದಿನ ಸತ್ಯವನ್ನು ಬಿಚ್ಚಿಟ್ಟಿದ್ದಾರೆ.

ಚಾಮುಂಡೇಶ್ವರಿ ಸೋಲಿನ ಮೆಲುಕು ಜೊತೆಗೆ ಬಾದಾಮಿ ಸ್ಪರ್ಧೆ ಹಿಂದಿನ ಸತ್ಯ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
ದಿಲೀಪ್​, ಚೌಡಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 31, 2023 | 6:49 PM

ಮೈಸೂರು, ಆ.30: ರಾಜಕೀಯ ಅಂದರೆ ಹಾಗೇ ಇಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ ಅದರಂತೆ ರಾಜ್ಯದಲ್ಲಿ ಇದೀಗ ಕಾಂಗ್ರೆಸ್​ ಸರ್ಕಾರ ಅಭೂತಪೂರ್ವ ಗೆಲುವು ಸಾಧಿಸಿ ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿ ಕುರ್ಚಿ ಎರಿದ್ದಾರೆ. ಆದರೆ, ಈಗಲೂ ಕೂಡ ಸಿದ್ದರಾಮಯ್ಯನವರು 2018ರಲ್ಲಿ ಸ್ಪರ್ಧಿಸಿ ಚಾಮುಂಡೇಶ್ವರಿಯಲ್ಲಿ ಸೋತಿದ್ದನ್ನು ಇನ್ನು ಮರೆತಿಲ್ಲ. ಹೌದು, ಅಂದು ಸಿದ್ದರಾಮಯ್ಯನವರು ಚಾಮುಂಡೇಶ್ವರಿ(Chamundeshwari)  ಹಾಗೂ ಬಾದಾಮಿಯಲ್ಲಿ(Badami) ಸ್ಪರ್ಧಿಸಿದ್ದರು. ಆದರೆ, ಬಾದಾಮಿಯಲ್ಲಿ ಮಾತ್ರ ಗೆದ್ದು ಬೀಗಿದ್ದರು. ಪ್ರಬಲ ಪೈಪೋಟಿ ಕೊಟ್ಟಿದ್ದ ಬಿಜೆಪಿಯ ಶ್ರೀರಾಮಲು ವಿರುದ್ದ ಸ್ಪರ್ಧೆ ಮಾಡಿ, ಗೆಲುವು ಸಾಧಿಸಿದ ಸಿದ್ದರಾಮಯ್ಯನವರು ಇಂದು(ಆ.30) ತಾವು ಬಾದಾಮಿಯಲ್ಲಿ ಸ್ಪರ್ಧೆ ಮಾಡಿದ ಹಿಂದಿನ ಸತ್ಯವನ್ನು ಬಿಚ್ಚಿಟ್ಟಿದ್ದಾರೆ.

ಹೌದು, ಇಂದು ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಸಿದ್ದಲಿಂಗಪುರದಲ್ಲಿ ಕನಕ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಾದಾಮಿ ಸ್ಪರ್ಧೆಯ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ‘ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಸೋಲ್ತೇನೆ ಎಂಬ ವಾಸನೆ‌ ಇತ್ತು. ಆ ಕಾರಣಕ್ಕೆ ಚಾಮುಂಡೇಶ್ವರಿ, ಬಾದಾಮಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದೆ. ಅಷ್ಟು ದೂರದ ಬಾದಾಮಿ ಕ್ಷೇತ್ರದಲ್ಲಿ‌ ಸ್ಪರ್ಧಿಸಿದರೂ ಜನ ನನ್ನನ್ನು ಗೆಲ್ಲಿಸಿದರು. ಆದರೆ, ಇಲ್ಲಿಯವರೇ ನನ್ನನ್ನು ಸೋಲಿಸಿದರು ಎಂದು ತಮ್ಮ ಸೋಲಿನ ನೆನಪನ್ನು ಸ್ಮರಿಸಿದ್ದಾರೆ.

ಇದನ್ನೂ ಓದಿ:ಗ್ಯಾರಂಟಿಗಳ ಅನುಷ್ಠಾನದ ಭರದಲ್ಲಿ ಸಿದ್ದರಾಮಯ್ಯ ಸರ್ಕಾರ ಅಭಿವೃದ್ಧಿ ಕಾಮಗಾರಿಗಳನ್ನು ಸ್ಥಗಿತಗೊಳಿಸಿದೆ: ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ

‘ಈ ಕ್ಷೇತ್ರದಲ್ಲಿ ನಾನು ಮಾಡಿದಷ್ಟು ಬೇರೆ ಯಾರೂ ಕೆಲಸ ಮಾಡೇ ಇಲ್ಲ. ಆದ್ರೆ‌, ಕೆಲಸಕ್ಕೆ ಬಾರದ ಯಾರನ್ನೋ ಈ ಕ್ಷೇತ್ರದಲ್ಲಿ ಗೆಲ್ಲಿಸುತ್ತಾರೆ. ಕೆಲಸ ಮಾಡುವವರನ್ನು ಸೋಲಿಸಿ ಬಿಡುತ್ತಾರೆ. ನನ್ನನ್ನು ಸೋಲಿಸಿದವರಿಗೂ ಧನ್ಯವಾದ, ಗೆಲ್ಲಿಸಿದವರಿಗೂ ಧನ್ಯವಾದ. ರಾಜಕೀಯದಲ್ಲಿ ಗೆಲುವು ಸೋಲು ಮುಖ್ಯ ಎನ್ನುವ ಮೂಲಕ ಮತ್ತೊಮ್ಮೆ ಸಿಎಂ ಆದರೂ ಕೂಡ ಪುನಃ ಚಾಮುಂಡೇಶ್ವರಿ ಸೋಲಿನ ಬಗ್ಗೆ ಸಿಎಂ ಪ್ರಸ್ತಾಪಿಸುತ್ತಲೆ ಇದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Wed, 30 August 23

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ