AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ರೌಪದಿ ಮುರ್ಮು ಒಳ್ಳೆಯವರು, ನನ್ನ ಮಾತನ್ನು ಬೇರೇ ರೀತಿಯಲ್ಲಿ ಅರ್ಥೈಸಲಾಗಿದೆ: ಕಾಂಗ್ರೆಸ್ ನಾಯಕ

ದ್ರೌಪದಿ ಮುರ್ಮು ಬಗ್ಗೆ ತಾನು ನೀಡಿರುವ ಹೇಳಿಕೆಯ ತಿರುಚಿದ ವಿಡಿಯೊವನ್ನು ಅಮಿತ್ ಮಾಳವೀಯ ಹಂಚಿಕೊಂಡಿದ್ದಾರೆ ಎಂದು ಕುಮಾರ್ ಆರೋಪಿಸಿದ್ದಾರೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ತಿರುಚಿದ ವಿಡಿಯೊ ಶೇರ್ ಮಾಡಿದ್ದಾರೆ.

ದ್ರೌಪದಿ ಮುರ್ಮು ಒಳ್ಳೆಯವರು, ನನ್ನ ಮಾತನ್ನು ಬೇರೇ ರೀತಿಯಲ್ಲಿ ಅರ್ಥೈಸಲಾಗಿದೆ:  ಕಾಂಗ್ರೆಸ್ ನಾಯಕ
ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
TV9 Web
| Edited By: |

Updated on: Jul 13, 2022 | 8:26 PM

Share

ರಾಷ್ಟ್ರಪತಿ ಹುದ್ದೆಗಾಗಿ ಕಣದಲ್ಲಿರುವ ಎನ್​​ಡಿಎ (NDA) ಅಭ್ಯರ್ಥಿ ದ್ರೌಪದಿ ಮುರ್ಮು (Droupadi Murmu) ಅವರು ದೇಶದ ಕೆಟ್ಟ ತತ್ವಶಾಸ್ತ್ರವನ್ನು ಪ್ರತಿನಿಧಿಕರಿಸುತ್ತಾರೆ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ಅಜೋಯ್ ಕುಮಾರ್(Ajoy Kumar), ಮುರ್ಮು ಅವರು  ಒಳ್ಳೆಯ ಮಹಿಳೆ ಎಂದು ಬುಧವಾರ ಹೇಳಿದ್ದಾರೆ. ಎನ್​​ಡಿಎ ನಿಲುವಿನಲ್ಲಿ ಸಮಸ್ಯೆ ಇದೆ. ನಾನು ಅದರ ಬಗ್ಗೆ ಹೇಳಿದ್ದೇವೆ ಎಂದು ಜಾರ್ಖಂಡ್​​ನ ಮಾಜಿ ಲೋಕಸಭಾ ಸಂಸದ ಅಜೋಯ್ ಕುಮಾರ್ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ. ದ್ರೌಪದಿ ಮುರ್ಮು ಬಗ್ಗೆ ತಾನು ನೀಡಿರುವ ಹೇಳಿಕೆಯ ತಿರುಚಿದ ವಿಡಿಯೊವನ್ನು ಅಮಿತ್ ಮಾಳವೀಯ ಹಂಚಿಕೊಂಡಿದ್ದಾರೆ ಎಂದು ಕುಮಾರ್ ಆರೋಪಿಸಿದ್ದಾರೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ತಿರುಚಿದ ವಿಡಿಯೊ ಶೇರ್ ಮಾಡಿದ್ದಾರೆ. ಒಂದು ನಿಮಿಷದ ವಿಡಿಯೊವನ್ನು 17 ಸೆಕೆಂಡ್ ಗೆ ಇಳಿಸಿ ತಿರುಚಲಾಗಿದೆ. ಇದನ್ನು ನಾವು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಮುರ್ಮು ಅವರು ಭಾರತದ ದುಷ್ಟ ತತ್ವಶಾಸ್ತ್ರವನ್ನು ಪ್ರತಿನಿಧಿಕರಿಸುತ್ತಿದ್ದಾರೆ ಎಂದು ಕುಮಾರ್ ಹೇಳಿದ್ದರು. ಅವರು ಹೀಗೆ ಹೇಳಿರುವ 57 ಸೆಕಂಡ್ ಅವಧಿಯ ವಿಡಿಯೊವನ್ನು ಎಎನ್ಐ ಶೇರ್ ಮಾಡಿತ್ತು.

ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುತ್ತಿರುವ ಮುರ್ಮು ಮತ್ತು ಯಶವಂತ ಸಿನ್ಹಾ ಇಬ್ಬರೂ ಒಳ್ಳೆಯವರೇ. ಆದರೆ ಮುರ್ಮು ಪ್ರತಿನಿಧೀಕರಿಸುತ್ತಿರುವುದರ ಬಗ್ಗೆ ಎಚ್ಚರಿಕೆ ಬೇಕು. ದ್ರೌಪದಿ ಮುರ್ಮು ಅವರನ್ನು ನಾವು ಆದಿವಾಸಿಗಳ ಗುರುತಾಗಿ ಮಾಡಬಾರದು. ನಮ್ಮಲ್ಲಿ ರಾಮನಾಥ ಕೋವಿಂದ್ (ಹಾಲಿ ರಾಷ್ಟ್ರಪತಿ) ಇದಾರೆ. ಕೋವಿಂದ್ ರಾಷ್ಟ್ರಪತಿ ಆಗಿರುವಾಗಲೇ ದಲಿತ ಮಹಿಳೆಯ ಮೇಲೆ ಹಾಥರಸ್ ನಲ್ಲಿ ಅತ್ಯಾಚಾರ ನಡೆಯಿತು. ಅವರೇನಾದರೂ ಪ್ರತಿಕ್ರಿಯಿಸಿದ್ದಾರೆಯೇ?

ಇದನ್ನೂ ಓದಿ
Image
ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ದ್ರೌಪದಿ ಮುರ್ಮು ಜೆಡಿ(ಎಸ್) ಪಕ್ಷದ ಬೆಂಬಲ ಯಾಚಿಸಿ ಆಶೀರ್ವಾದ ಪಡೆದರು
Image
Draupadi Murmu: ಎಚ್​ಡಿ ದೇವೇಗೌಡರನ್ನು ಭೇಟಿ ಮಾಡಿದ ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
Image
Draupadi Murmu Karnataka Visit: ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಭೇಟಿ: ಬಿಗಿ ಬಂದೋಬಸ್ತ್​

ಗುರುತೊಂದನ್ನು ರಚಿಸಿ ಭಾರತದ ಜನರನ್ನು ಮೋಸ ಮಾಡುವುದು ಮೋದಿ ಸರ್ಕಾರ ಮಾಡುತ್ತಾ ಬಂದಿರುವ ಕೆಲಸ. ಇದು ದೇಶದ ಆತ್ಮಕ್ಕಾಗಿರುವ ಹೋರಾಟ. ಹಾಗಾಗಿ ಸಮಾನ ಮನಸ್ಕ ಪಕ್ಷಗಳು ಯಶವಂತ್ ಸಿನ್ಹಾ ಅವರಿಗೆ ಮತ ನೀಡಬೇಕು ಎಂದಿದ್ದಾರೆ ಕುಮಾರ್. ಕುಮಾರ್ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ  ಖಂಡಿಸಿದೆ.

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ