AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪಗಿಂತ ವಿಜಯೇಂದ್ರಗೆ ಮೊದಲ ಪ್ರಾಮುಖ್ಯತೆ ಕೊಟ್ಟ ಅಮಿತ್‌ ಶಾ, ಬಿಎಸ್​ವೈ ನಿವಾಸದಲ್ಲಿ ‘ಕೇಸರಿ ಬಾತ್’

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉಪಹಾರಕ್ಕೆಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದು, ಈ ವೇಳೆ ಶಾ ಬಿಎಸ್​ವೈಗಿಂತ ಅವರ ಪುತ್ರ ವಿಜಯೇಂದ್ರಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಯಡಿಯೂರಪ್ಪಗಿಂತ ವಿಜಯೇಂದ್ರಗೆ ಮೊದಲ ಪ್ರಾಮುಖ್ಯತೆ ಕೊಟ್ಟ ಅಮಿತ್‌ ಶಾ, ಬಿಎಸ್​ವೈ ನಿವಾಸದಲ್ಲಿ 'ಕೇಸರಿ ಬಾತ್'
ಶಾಗೆ ಬಿಎಸ್​ವೈ, ವಿಜಯೇಂದ್ರ ಸ್ವಾಗತಿಸಿದರು
ರಮೇಶ್ ಬಿ. ಜವಳಗೇರಾ
|

Updated on: Mar 24, 2023 | 11:26 AM

Share

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು(ಮಾರ್ಚ್ 24) ಬೆಳಗ್ಗೆ‌ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ(BS Yediyurappa) ಅವರ ಕಾವೇರಿ ನಿವಾಸಕ್ಕೆ ನೀಡಿ ಉಪಹಾರ ಸೇವಿಸಿದರು. ಉಪಹಾರಕ್ಕೂ ಮುನ್ನ ಕಾರಿನ ಬಳಿ ಬಂದು ಅಮಿತ್ ಶಾ ಅವರನ್ನು ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ ಸ್ವಾಗತಿಸಿದರು. ಈ ವೇಳೆ ಯಡಿಯೂರಪ್ಪ ಶಾಗೆ ಹೂವಿನ ಬೊಕ್ಕೆ ಕೊಟ್ಟು ಸ್ವಾಗತಿಸಲು ಮುಂದಾದರು. ಆದ್ರೆ, ಶಾ ವಿಜಯೇಂದ್ರ (BY Vijayendra) ಕೈಗೆ ಹೂಗುಚ್ಛ ಕೊಡುವಂತೆ ಬಿಎಸ್​ವೈಗೆ ಹೇಳಿದರು. ನಂತರ ಯಡಿಯೂರಪ್ಪ ತಮ್ಮ ಕೈಯಲ್ಲಿದ್ದ ಹೂವಿನ ಬೊಕ್ಕೆಯನ್ನು ವಿಜಯೇಂದ್ರ ಕೈಗೆ ನೀಡಿದರು. ಅನಂತರ ಅದೇ ಹೂಗುಚ್ಛವನ್ನು ವಿಜಯೇಂದ್ರ, ಅಮಿತ್ ಶಾಗೆ ನೀಡಿ ಸ್ವಾಗತಿಸಿರುವುದು ವಿಶೇಷವಾಗಿದೆ. ಇದೇ ವೇಳೆ ಅಮಿತ್ ಶಾ ವಿಜಯೇಂದ್ರಗೆ ಬೆನ್ನು ತಟ್ಟಿದರು. ಅಮಿತ್ ಶಾ ಯಡಿಯೂರಪ್ಪಗಿಂತ ವಿಜಯೇಂದ್ರಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿರುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ನೀತಿ ಸಂಹಿತೆ ಸಿದ್ದತೆಗೆ ಜಿಲ್ಲಾಧಿಕಾರಿಗಳಿಗೆ ತುರ್ತು ಸಂದೇಶ, ಚುನಾವಣೆ ದಿನಾಂಕ ಘೋಷಣೆ ಸುಳಿವು ಕೊಟ್ಟ ಆಯೋಗ

ಅಮಿತ್​ ಶಾಗೆ ಇಡ್ಲಿ, ದೋಸೆ, ಪೊಂಗಲ್​, ಉಪ್ಪಿಟ್ಟು, ರಸ್ ಮಲಾಯ್ ಖಾದ್ಯಗಳನ್ನು ಸಿದ್ಧ ಪಡಿಸಲಾಗಿತ್ತು. ಇನ್ನು ಮಾಜಿ ಸಿಎಂ B.S.ಯಡಿಯೂರಪ್ಪ ನಿವಾಸದಲ್ಲಿ ಆಯೋಜಿಸಲಾಗಿದ್ದ ಉಪಾಹಾರ ಕೂಟದಲ್ಲಿ ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​​ ಕಟೀಲ್​, ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ ಪಾಲ್ಗೊಂಡಿದ್ದರು. ಉಪಹಾರ ಸವಿದ ಅಮಿತ್ ಶಾ ಜತೆಗೆ ಯಡಿಯೂರಪ್ಪ ರಾಜ್ಯ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ಮಾಡಿದರು. ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದ್ದು ಮತ್ತೆ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಣತಂತ್ರದ ಮಾತುಕತೆ ಮಾಡಿದರು

ಇನ್ನು ಉಪಹಾರ ಕೂಟದ ಬಳಿಕ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಅಮಿತ್ ಶಾ ನನ್ನನ್ನು ಮಾತನಾಡಿಸಿದ್ದಕ್ಕೆ ಖುಷಿಯಾಗಿದೆ. ಪಕ್ಷದ ಕೆಲಸ ಮಾಡಲು ಇನ್ನಷ್ಟು ಶಕ್ತಿ ಸಿಕ್ಕಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಅಮಿತ್ ಶಾ ನಮ್ಮ ಮನೆಗೆ ಬಂದಿದ್ದಕ್ಕೆ ತುಂಬಾ ಸಂತೋಷವಾಗಿದೆ. ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ನಾಯಕರು ಚರ್ಚೆ ಮಾಡಿದ್ದಾರೆ. ರಾಜ್ಯದ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಸಿಎಂ, ರಾಜ್ಯಾಧ್ಯಕ್ಷರು, ಯಡಿಯೂರಪ್ಪನವರು ಸಮಾಲೋಚನೆ ನಡೆಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅತಂತ್ರ ಸೃಷ್ಟಿಸಲು ಬಿಡಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನ ಮನೆ ಮನೆಗೆ ತಲುಪಿಸುವ ಬಗ್ಗೆ ಚರ್ಚೆ ಮಾಡಲಾಗಿದೆ. ಬಿಎಸ್​ವೈ, ಅಮಿತ್ ಶಾ ನಡುವೆ ರಾಜಕೀಯ ಬಿಟ್ಟು ಬೇರೆ ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಈ ಬಗ್ಗೆ ಕೇಂದ್ರ ನಾಯಕರು ತೀರ್ಮಾನ ಮಾಡಬೇಕು. ಈಗಾಗಲೇ ನಾನು ಶಿಕಾರಿಪುರ ಕ್ಷೇತ್ರದಲ್ಲಿ ಒಂದು ಸುತ್ತು ಪ್ರವಾಸ ಮಾಡಿದ್ದೇನೆ. ಶೀಘ್ರದಲ್ಲೇ ಶಿಕಾರಿಪುರದಲ್ಲಿ ಮತ್ತೊಂದು ಸುತ್ತಿನ ಪ್ರವಾಸ ಆರಂಭಿಸುತ್ತೇನೆ ಎಂದು ತಿಳಿಸಿದರು.

ಒಟ್ಟನಲ್ಲಿ ಉಪಹಾರದಲ್ಲಿ ಅಮಿತ್ ಶಾ,  ವಿಜಯೇಂದ್ರಗೆ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟಿರುವುದು ಅಚ್ಚರಿ ಜೊತೆಗೆ ಚರ್ಚೆಗೆ ಗ್ರಾಸವಾಗಿದೆ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!