AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಎನ್​ಡಿಎ ಮೈತ್ರಿಕೂಟಕ್ಕೆ ಕುಮಾರಸ್ವಾಮಿ ನೇತೃತ್ವ: ಅಮಿತ್ ಶಾ ಆಹ್ವಾನ

ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ಕ್ಷೇತ್ರ ಹಂಚಿಕೆಯ ಬಗ್ಗೆಯೂ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಜೆಡಿಎಸ್ ಗೆಲ್ಲಲು ಅವಕಾಶ ಇರುವ ಮೂರು ಕ್ಷೇತ್ರಗಳನ್ನು ಕುಮಾರಸ್ವಾಮಿ ಕೇಳಿದ್ದಾರೆ. ಇದರ ಜೊತೆಗೆ ರಾಜ್ಯಸಭಾ ಸ್ಥಾನ ಅಥವಾ ಮಂತ್ರಿಸ್ಥಾನ ನೀಡುವ ಭರವಸೆಯನ್ನೂ ಅವರಿಗೆ ಅಮಿತ್ ಶಾ ನೀಡಿದ್ದಾರೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಎನ್​ಡಿಎ ಮೈತ್ರಿಕೂಟಕ್ಕೆ ಕುಮಾರಸ್ವಾಮಿ ನೇತೃತ್ವ: ಅಮಿತ್ ಶಾ ಆಹ್ವಾನ
ಹೆಚ್​ಡಿ ಕುಮಾರಸ್ವಾಮಿ
ಪ್ರಸನ್ನ ಗಾಂವ್ಕರ್​
| Edited By: |

Updated on:Jan 19, 2024 | 10:31 AM

Share

ಬೆಂಗಳೂರು, ಜನವರಿ 19: ಲೋಕಸಭೆ ಚುನಾವಣೆಗೆ (Lok Sabha Elections 2024) ಕರ್ನಾಟಕದಲ್ಲಿ ಎನ್​ಡಿಎ (NDA) ಮೈತ್ರಿಕೂಟದ ನೇತೃತ್ವ ವಹಿಸುವಂತೆ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿಗೆ (HD Kumaraswamy) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಆಹ್ವಾನ ಕೊಟ್ಟಿದ್ದಾರೆ. ಕುಮಾರಸ್ವಾಮಿ ಮತ್ತು ಅಮಿತ್ ಶಾ ಬುಧವಾರ ರಾತ್ರಿ ದೆಹಲಿಯಲ್ಲಿ ಮಾತುಕತೆ ನಡೆಸಿದ ವೇಳೆ ಈ ವಿಚಾರ ಪ್ರಸ್ತಾಪವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ ನಾಯಕರ ಜತೆ ಸಮನ್ವಯ ಸಾಧಿಸಲು ಹೆಚ್​ಡಿಕೆ ನೇತೃತ್ವ ವಹಿಸಲಿ ಎಂಬ ಅಭಿಪ್ರಾಯವನ್ನು ಅಮಿತ್ ಶಾ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ಕ್ಷೇತ್ರ ಹಂಚಿಕೆಯ ಬಗ್ಗೆಯೂ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಜೆಡಿಎಸ್ ಗೆಲ್ಲಲು ಅವಕಾಶ ಇರುವ ಮೂರು ಕ್ಷೇತ್ರಗಳನ್ನು ಕುಮಾರಸ್ವಾಮಿ ಕೇಳಿದ್ದಾರೆ. ಇದರ ಜೊತೆಗೆ ರಾಜ್ಯಸಭಾ ಸ್ಥಾನ ಅಥವಾ ಮಂತ್ರಿಸ್ಥಾನ ನೀಡುವ ಭರವಸೆಯನ್ನೂ ಅವರಿಗೆ ಅಮಿತ್ ಶಾ ನೀಡಿದ್ದಾರೆ ಎನ್ನಲಾಗಿದೆ.

ಚುನಾವಣೆಗೂ ಮುನ್ನ ಕೇಂದ್ರ ಸಚಿವ ಸ್ಥಾನದ ಆಫರ್

ಲೋಕಸಭಾ ಚುನಾವಣೆಗೂ ಮುನ್ನ ಕೇಂದ್ರ ಸಚಿವರಾಗಲು ಕುಮಾರಸ್ವಾಮಿಗೆ ಅಮಿತ್ ಶಾ ಸಲಹೆ ನೀಡಿದ್ದಾರೆ ಎಂದೂ ಹೇಳಲಾಗಿದೆ. ಆದರೆ, ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್​ ಹೆಚ್ಚು ಸ್ಥಾನ ಗೆಲ್ಲಿಸುವ ಕೆಲಸ ಮಾಡುತ್ತೇವೆ. ಸದ್ಯಕ್ಕೆ ಕೇಂದ್ರ ಮಂತ್ರಿ ಸ್ಥಾನ ಬೇಡ ಎಂದು ಕುಮಾರಸ್ವಾಮಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಬುಧವಾರ ರಾತ್ರಿ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿದ್ದ ಕುಮಾರಸ್ವಾಮಿ, ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದರು. ರಾಮಮಂದಿರ ಉದ್ಘಾಟನೆ ನಂತರ ಸೀಟು ಹಂಚಿಕೆ ಚರ್ಚೆ ನಡೆಯಲಿದೆ ಎಂದು ಸಭೆಯ ನಂತರ ಕುಮಾರಸ್ವಾಮಿ ತಿಳಿಸಿದ್ದರು.

ಇದನ್ನೂ ಓದಿ: ಅಮಿತ್ ಶಾ, ಜೆಪಿ ನಡ್ಡಾ ಭೇಟಿಯಾದ ಕುಮಾರಸ್ವಾಮಿ: ಲೋಕಸಭೆ ಸೀಟು ಹಂಚಿಕೆ ಯಾವಾಗ ಫೈನಲ್?

ಈ ಮಧ್ಯೆ, ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಮಂಡ್ಯದಿಂದ ಕಣಕ್ಕಿಳಿಯುವಂತೆ ಜೆಡಿಎಸ್‌ನ ಹಲವು ಮುಖಂಡರು ಕುಮಾರಸ್ವಾಮಿ ಅವರನ್ನು ಒತ್ತಾಯಿಸುತ್ತಿದ್ದರೂ ಅವರ ಉಮೇದುವಾರಿಕೆ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:42 am, Fri, 19 January 24

Follow Us
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?