AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ: ರೋಡ್ ಶೋ ವೇಳೆ ರಸ್ತೆಯ ಗುಂಡಿಗಳ‌ನ್ನು ಅಮಿತ್ ಶಾ ಲೆಕ್ಕ ಹಾಕಲಿ: ಯು.ಟಿ.ಖಾದರ್

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಈಗಾಗಲೇ ಪ್ರಚಾರ ಆರಂಭಿಸಿದ ಬಿಜೆಪಿ, ಹಿಂದುತ್ವದ ಭದ್ರಕೋಟೆ ದಕ್ಷಿಣ ಕನ್ನಡದಲ್ಲಿ ಮತ್ತೊಮ್ಮೆ ಪ್ರಚಂಡ ಗೆಲುವಿಗೆ ರಣತಂತ್ರ ರೂಪಿಸುತ್ತಿದೆ. ಇದರ ಭಾಗವಾಗಿ ಅಮಿತ್ ಶಾ ಅವರು ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ದಕ್ಷಿಣ ಕನ್ನಡ: ರೋಡ್ ಶೋ ವೇಳೆ ರಸ್ತೆಯ ಗುಂಡಿಗಳ‌ನ್ನು ಅಮಿತ್ ಶಾ ಲೆಕ್ಕ ಹಾಕಲಿ: ಯು.ಟಿ.ಖಾದರ್
ಅಮಿತ್ ಶಾ, ನಳಿನ್ ಕುಮಾರ್ ಕಟೀಲ್ (ಎಡ ಚಿತ್ರ) ಮತ್ತು ಯು.ಟಿ.ಖಾದರ್ (ಬಲ ಚಿತ್ರ)
TV9 Web
| Updated By: Rakesh Nayak Manchi|

Updated on:Feb 06, 2023 | 7:04 PM

Share

ಮಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರನ್ನು ಬೆಂಗಳೂರಿನಿಂದ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಗೆ ರಸ್ತೆ ಮಾರ್ಗವಾಗಿ ಕರೆತಂದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರಿಗೆ ಸೆಲ್ಯೂಟ್ ಹೊಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ (U.T.Khader) ಸವಾಲು ಹಾಕಿದ್ದಾರೆ. ಫೆಬ್ರವರಿ 11ರಂದು ಅಮಿತ್ ಶಾ ಅವರು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ಭರ್ಜರಿ ರೋಡ್ ಶೋ (Amit Shah Road Show) ನಡೆಸಲು ತಯಾರಿ ನಡೆಸಲಾಗುತ್ತಿದೆ. ಈ ಬಗ್ಗೆ ವ್ಯಂಗ್ಯವಾಡಿದ ಖಾದರ್, ರೋಡ್ ಶೋ ಮಾಡುವಾಗ ಅಮಿತ್ ಶಾ ಅವರು ರಸ್ತೆಯಲ್ಲಿರುವ ಗುಂಡಿಗಳ‌ನ್ನು ಲೆಕ್ಕ ಮಾಡಲಿ ಎಂದು ಟಾಂಗ್ ನೀಡಿದರು.

ಇನ್ನು, ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿ ಖಾದರ್, ಕೇಂದ್ರ ಬಜೆಟ್​​ನಲ್ಲಿ ಕರಾವಳಿಗೆ ಒಂದೇ ಒಂದು ಅನುದಾನ ಇಲ್ಲ. ಶಿರಾಡಿಗೆ ಸುರಂಗ ಮಾರ್ಗ ಅಂತಾ ಹಲವು ವರ್ಷಗಳಿಂದ ಹೇಳುತ್ತಿದ್ದಾರೆ. ಆದರೆ ಯಾವುದೇ ಬಜೆಟ್​ನಲ್ಲಿ ಈ ಯೋಜನೆಗೆ ಹಣ ಇಟ್ಟಿಲ್ಲ. ರೈಲ್ವೇ ಪ್ರತ್ಯೇಕ ವಿಭಾಗ ಕೇಳಿದಾಗಲೂ ಸರ್ಕಾರದ ಸ್ಪಂದನೆ ಇಲ್ಲ. ಬಂದರು ಮತ್ತು ರಸ್ತೆಗೆ ಯಾವ ಅನುದಾನವನ್ನೂ ಸರ್ಕಾರ ನೀಡಿಲ್ಲ. ಶಿರಾಡಿ ಘಾಟ್ ಬಗ್ಗೆ ಸರ್ಕಾರ ಸ್ಪಷ್ಟವಾಗಿ ಜನರಿಗೆ ಹೇಳಲಿ. ಟನಲ್ ಬೇಡ, ರಸ್ತೆಗೆ ತೇಪೆ ಆದರೂ ಹಾಕಿ. ಅದೂ ಆಗಲ್ಲ ಅಂದರೆ ನಾವು ನಮ್ಮ ಅನುದಾನ ಬಳಸಿ ತೇಪೆ ಕಾರ್ಯ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಹಿಂದುತ್ವ, ಮನುವಾದದ ವಿರೋಧಿ ಎಂದ ಸಿದ್ದರಾಮಯ್ಯ ಮೇಲೆ ಕೇಸರಿ, ಕುಂಕುಮಾಸ್ತ್ರ ಪ್ರಯೋಗಿಸಿದ ಸಚಿವ ಸಿಸಿ ಪಾಟೀಲ್

ನಾಲ್ಕುವರ್ಷಗಳಾದರೂ ತುಳುವನ್ನು ಎರಡನೇ ರಾಜ್ಯ ಭಾಷೆ ಮಾಡದ ಬಿಜೆಪಿ

ತುಳು ಭಾಷೆಯನ್ನು ರಾಜ್ಯದ ಅಧೀಕೃತ ಭಾಷೆಯನ್ನಾಗಿ ಘೋಷಿಸುವ ವಿಚಾರವಾಗಿ ಮಾತನಾಡಿದ ಖಾದರ್, ಬಿಜೆಪಿ ಶಾಸಕರು ಅಧಿಕಾರಕ್ಕೆ ಬಂದು ನಾಲ್ಕುವರ್ಷಗಳಾದರೂ ಈವರೆಗೆ ಎರಡನೇ ರಾಜ್ಯ ಭಾಷೆಯನ್ನಾಗಿ ಮಾಡಲಿಲ್ಲ. ಈಗ ಚುನಾವಣೆ ಹತ್ತಿರ ಬರುತ್ತಿದ್ದಂತೆ ಜನರ ಆಕ್ರೋಶ ತಪ್ಪಿಸಲು ಮೋಸ ಮಾಡುತ್ತಿದ್ದಾರೆ. ಸರ್ಕಾರ ಅಧ್ಯಯನ ಸಮಿತಿ ಮಾಡಿರುವುದೇ ತುಳು ಭಾಷೆಗೆ ಮಾಡಿರುವ ಅವಮಾನ. ತುಳು ಭಾಷೆಗೆ ಅದರದ್ದೇ ಆದ ಇತಿಹಾಸವಿದೆ. ಈ ಭಾಷೆಯ ಅಧ್ಯಯನ ಮಾಡಿ ವರದಿ ಕೊಡುವ ಅವಶ್ಯಕತೆ ಏನಿತ್ತು? ಇದು ಜನರಿಗೆ ಮೋಸ ಮಾಡುವ ತಂತ್ರ ಆಗಿದೆ ಎಂದರು.

ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:01 pm, Mon, 6 February 23

Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್