AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ: ರೋಡ್ ಶೋ ವೇಳೆ ರಸ್ತೆಯ ಗುಂಡಿಗಳ‌ನ್ನು ಅಮಿತ್ ಶಾ ಲೆಕ್ಕ ಹಾಕಲಿ: ಯು.ಟಿ.ಖಾದರ್

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಈಗಾಗಲೇ ಪ್ರಚಾರ ಆರಂಭಿಸಿದ ಬಿಜೆಪಿ, ಹಿಂದುತ್ವದ ಭದ್ರಕೋಟೆ ದಕ್ಷಿಣ ಕನ್ನಡದಲ್ಲಿ ಮತ್ತೊಮ್ಮೆ ಪ್ರಚಂಡ ಗೆಲುವಿಗೆ ರಣತಂತ್ರ ರೂಪಿಸುತ್ತಿದೆ. ಇದರ ಭಾಗವಾಗಿ ಅಮಿತ್ ಶಾ ಅವರು ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ದಕ್ಷಿಣ ಕನ್ನಡ: ರೋಡ್ ಶೋ ವೇಳೆ ರಸ್ತೆಯ ಗುಂಡಿಗಳ‌ನ್ನು ಅಮಿತ್ ಶಾ ಲೆಕ್ಕ ಹಾಕಲಿ: ಯು.ಟಿ.ಖಾದರ್
ಅಮಿತ್ ಶಾ, ನಳಿನ್ ಕುಮಾರ್ ಕಟೀಲ್ (ಎಡ ಚಿತ್ರ) ಮತ್ತು ಯು.ಟಿ.ಖಾದರ್ (ಬಲ ಚಿತ್ರ)
TV9 Web
| Edited By: |

Updated on:Feb 06, 2023 | 7:04 PM

Share

ಮಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರನ್ನು ಬೆಂಗಳೂರಿನಿಂದ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಗೆ ರಸ್ತೆ ಮಾರ್ಗವಾಗಿ ಕರೆತಂದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರಿಗೆ ಸೆಲ್ಯೂಟ್ ಹೊಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ (U.T.Khader) ಸವಾಲು ಹಾಕಿದ್ದಾರೆ. ಫೆಬ್ರವರಿ 11ರಂದು ಅಮಿತ್ ಶಾ ಅವರು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ಭರ್ಜರಿ ರೋಡ್ ಶೋ (Amit Shah Road Show) ನಡೆಸಲು ತಯಾರಿ ನಡೆಸಲಾಗುತ್ತಿದೆ. ಈ ಬಗ್ಗೆ ವ್ಯಂಗ್ಯವಾಡಿದ ಖಾದರ್, ರೋಡ್ ಶೋ ಮಾಡುವಾಗ ಅಮಿತ್ ಶಾ ಅವರು ರಸ್ತೆಯಲ್ಲಿರುವ ಗುಂಡಿಗಳ‌ನ್ನು ಲೆಕ್ಕ ಮಾಡಲಿ ಎಂದು ಟಾಂಗ್ ನೀಡಿದರು.

ಇನ್ನು, ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿ ಖಾದರ್, ಕೇಂದ್ರ ಬಜೆಟ್​​ನಲ್ಲಿ ಕರಾವಳಿಗೆ ಒಂದೇ ಒಂದು ಅನುದಾನ ಇಲ್ಲ. ಶಿರಾಡಿಗೆ ಸುರಂಗ ಮಾರ್ಗ ಅಂತಾ ಹಲವು ವರ್ಷಗಳಿಂದ ಹೇಳುತ್ತಿದ್ದಾರೆ. ಆದರೆ ಯಾವುದೇ ಬಜೆಟ್​ನಲ್ಲಿ ಈ ಯೋಜನೆಗೆ ಹಣ ಇಟ್ಟಿಲ್ಲ. ರೈಲ್ವೇ ಪ್ರತ್ಯೇಕ ವಿಭಾಗ ಕೇಳಿದಾಗಲೂ ಸರ್ಕಾರದ ಸ್ಪಂದನೆ ಇಲ್ಲ. ಬಂದರು ಮತ್ತು ರಸ್ತೆಗೆ ಯಾವ ಅನುದಾನವನ್ನೂ ಸರ್ಕಾರ ನೀಡಿಲ್ಲ. ಶಿರಾಡಿ ಘಾಟ್ ಬಗ್ಗೆ ಸರ್ಕಾರ ಸ್ಪಷ್ಟವಾಗಿ ಜನರಿಗೆ ಹೇಳಲಿ. ಟನಲ್ ಬೇಡ, ರಸ್ತೆಗೆ ತೇಪೆ ಆದರೂ ಹಾಕಿ. ಅದೂ ಆಗಲ್ಲ ಅಂದರೆ ನಾವು ನಮ್ಮ ಅನುದಾನ ಬಳಸಿ ತೇಪೆ ಕಾರ್ಯ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಹಿಂದುತ್ವ, ಮನುವಾದದ ವಿರೋಧಿ ಎಂದ ಸಿದ್ದರಾಮಯ್ಯ ಮೇಲೆ ಕೇಸರಿ, ಕುಂಕುಮಾಸ್ತ್ರ ಪ್ರಯೋಗಿಸಿದ ಸಚಿವ ಸಿಸಿ ಪಾಟೀಲ್

ನಾಲ್ಕುವರ್ಷಗಳಾದರೂ ತುಳುವನ್ನು ಎರಡನೇ ರಾಜ್ಯ ಭಾಷೆ ಮಾಡದ ಬಿಜೆಪಿ

ತುಳು ಭಾಷೆಯನ್ನು ರಾಜ್ಯದ ಅಧೀಕೃತ ಭಾಷೆಯನ್ನಾಗಿ ಘೋಷಿಸುವ ವಿಚಾರವಾಗಿ ಮಾತನಾಡಿದ ಖಾದರ್, ಬಿಜೆಪಿ ಶಾಸಕರು ಅಧಿಕಾರಕ್ಕೆ ಬಂದು ನಾಲ್ಕುವರ್ಷಗಳಾದರೂ ಈವರೆಗೆ ಎರಡನೇ ರಾಜ್ಯ ಭಾಷೆಯನ್ನಾಗಿ ಮಾಡಲಿಲ್ಲ. ಈಗ ಚುನಾವಣೆ ಹತ್ತಿರ ಬರುತ್ತಿದ್ದಂತೆ ಜನರ ಆಕ್ರೋಶ ತಪ್ಪಿಸಲು ಮೋಸ ಮಾಡುತ್ತಿದ್ದಾರೆ. ಸರ್ಕಾರ ಅಧ್ಯಯನ ಸಮಿತಿ ಮಾಡಿರುವುದೇ ತುಳು ಭಾಷೆಗೆ ಮಾಡಿರುವ ಅವಮಾನ. ತುಳು ಭಾಷೆಗೆ ಅದರದ್ದೇ ಆದ ಇತಿಹಾಸವಿದೆ. ಈ ಭಾಷೆಯ ಅಧ್ಯಯನ ಮಾಡಿ ವರದಿ ಕೊಡುವ ಅವಶ್ಯಕತೆ ಏನಿತ್ತು? ಇದು ಜನರಿಗೆ ಮೋಸ ಮಾಡುವ ತಂತ್ರ ಆಗಿದೆ ಎಂದರು.

ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:01 pm, Mon, 6 February 23

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ