AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆ ಬದಲಾವಣೆಗೆ ಬಿಗಿಪಟ್ಟು; ಧ್ವಜಾರೋಹಣ ಬಳಿಕ ಬೆಂಗಳೂರಿಗೆ ತೆರಳಲಿರುವ ಆನಂದ್ ಸಿಂಗ್

Anand Singh: ಸಿಎಂ ಬಸವರಾಜ ಬೊಮ್ಮಾಯಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಕಾದು ನೋಡೋಣ ಎಂದು ಹೇಳಿರುವ ಆನಂದ್ ಸಿಂಗ್, ಖಾತೆ ಬದಲಾವಣೆ ಮಾಡಲೇಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಬೇಡಿಕೆ ಇಟ್ಟಿದ್ದಾರೆ.

ಖಾತೆ ಬದಲಾವಣೆಗೆ ಬಿಗಿಪಟ್ಟು; ಧ್ವಜಾರೋಹಣ ಬಳಿಕ ಬೆಂಗಳೂರಿಗೆ ತೆರಳಲಿರುವ ಆನಂದ್ ಸಿಂಗ್
ಆನಂದ್ ಸಿಂಗ್
TV9 Web
| Updated By: ganapathi bhat|

Updated on:Aug 14, 2021 | 4:32 PM

Share

ಬಳ್ಳಾರಿ: ಖಾತೆ ಬದಲಾವಣೆಗೆ ಆನಂದ್ ಸಿಂಗ್ ಬಿಗಿಪಟ್ಟು ಹಿಡಿದಿರುವ ವಿಚಾರ ರಾಜಕೀಯ ವಲಯದಲ್ಲಿ ಕಳೆದ ಕೆಲವು ದಿನಗಳಿಂದ ಚರ್ಚೆಯಾಗುತ್ತಿದೆ. ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿರುವ ಆನಂದ್​ ಸಿಂಗ್​ ಇಂದು (ಆಗಸ್ಟ್ 14) ಮನೆಯಿಂದ ಹೊರಗೆ ಬಂದಿಲ್ಲ. ನಾಳೆ, ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ವಿಜಯನಗರ ನೂತನ ಜಿಲ್ಲೆಯಲ್ಲಿ ಧ್ವಜಾರೋಹಣ ನಡೆಯಲಿದೆ. ಅಲ್ಲಿ ಧ್ವಜಾರೋಹಣ ನಡೆಸಿ ಆ ಬಳಿಕ ಆನಂದ್ ಸಿಂಗ್ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಖಾತೆ ಬದಲಾವಣೆಗೆ ಬೇಡಿಕೆ ಇಟ್ಟಿರುವ ಆನಂದ್​ ಸಿಂಗ್ ಬೆಂಗಳೂರಿಗೆ ತೆರಳಲಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಕಾದು ನೋಡೋಣ ಎಂದು ಹೇಳಿರುವ ಆನಂದ್ ಸಿಂಗ್, ಖಾತೆ ಬದಲಾವಣೆ ಮಾಡಲೇಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಬೇಡಿಕೆ ಇಟ್ಟಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಬಳಿಕ ರಾಜಕೀಯ ವಲಯದಲ್ಲಿ ಏನಾಗಲಿದೆ ಎಂದು ಕಾದುನೋಡಬೇಕಿದೆ.

ಖಾತೆ ಬದಲಾವಣೆಗೆ ಮನವಿ ಮಾಡಿದ್ದು ನಿಜ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಆನಂದ್ ಸಿಂಗ್ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದ್ದು, ರಾಜೀನಾಮೆ ನೀಡುವ ಬಗ್ಗೆ ನಾನು ಎಂದೂ ಹೇಳಿಲ್ಲ. ಖಾತೆ ಬದಲಾವಣೆಗಾಗಿ ನಾನು ಮನವಿ ಮಾಡಿದ್ದು ನಿಜ. ಸಿಎಂ ಬಸವರಾಜ್‌ ಬೊಮ್ಮಾಯಿ (Basavaraj Bommai) ವರಿಷ್ಠರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಭರವಸೆ ನೀಡಿದ್ದಾರೆ. ಸಿಎಂ ಭರವಸೆಯನ್ನು ಸ್ವೀಕರಿಸಿದ್ದೇನೆ, ಸಹಕರಿಸುತ್ತೇನೆ. ಸಹಕಾರ ತತ್ವದಡಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಪರಿಸತರ ಮತ್ತು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ (Anand Singh) ಸುದ್ದಿಗೋಷ್ಠಿ ನಡೆಸಿ ಈ ಮೊದಲು ತಿಳಿಸಿದ್ದರು.

ಖಾತೆ ಬದಲಾವಣೆಗೆ ಆನಂದ್​ ಸಿಂಗ್ ಒತ್ತಾಯಿಸಿದ್ದು ನಿಜ. ಆದರೆ ನಾವು ಕ್ಲಿಷ್ಟ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಮಾತುಕತೆ ವೇಳೆ ಅವರಿಗೆ ಮನವರಿಕೆ ಮಾಡಿದ್ದೇನೆ. ವರಿಷ್ಠರ ಗಮನಕ್ಕೆ ತಂದು ಬಗೆಹರಿಸುತ್ತೇವೆ. ಆನಂದ್ ಸಿಂಗ್ ಅಸಮಾಧಾನ ವಿಚಾರ ಸದ್ಯಕ್ಕೆ ಸುಖಾಂತ್ಯವಾಗಿದೆ. ನಾವೆಲ್ಲರೂ ಒಗ್ಗೂಡಿ ಪಕ್ಷ ಬಲವರ್ಧನೆಗೆ ಶ್ರಮಿಸುತ್ತೇವೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ಸಂಧಾನ ಸಭೆಯ ನಂತರ ಸುದ್ದಿಗಾರರಿಗೆ ಸ್ಪಷ್ಟಪಡಿಸಿದ್ದರು. ವಿಜಯನಗರದಲ್ಲಿ ಸಚಿವ ಆನಂದ್ ಸಿಂಗ್ ಅವರೇ ಧ್ವಜಾರೋಹಣ ಮಾಡಲಿದ್ದಾರೆ ಎಂದು ಸಹ ಅವರು ತಿಳಿಸಿದ್ದರು.

ಇದನ್ನೂ ಓದಿ: ನಿಮಗೆ ಪ್ರವಾಸೋದ್ಯಮ ಖಾತೆ ಬೇಡ, ನಮಗೆ ನೀವೇ ಬೇಡ; ಸಾಮಾಜಿಕ ಜಾಲತಾಣಗಳಲ್ಲಿ ಆನಂದ್ ಸಿಂಗ್ ವಿರುದ್ಧ ಅಭಿಯಾನ

ಬ್ಲಾಕ್‌ಮೇಲ್‌ ತಂತ್ರ ಮಾಡುವುದಿಲ್ಲ, ನೇರವಾಗಿ ಕೇಳುತ್ತೇನೆ: ಸಚಿವ ಆನಂದ್ ಸಿಂಗ್

Published On - 4:31 pm, Sat, 14 August 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!