AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲಾಕ್‌ಮೇಲ್‌ ತಂತ್ರ ಮಾಡುವುದಿಲ್ಲ, ನೇರವಾಗಿ ಕೇಳುತ್ತೇನೆ: ಸಚಿವ ಆನಂದ್ ಸಿಂಗ್

ನನ್ನ ರಾಜಕೀಯ ಜೀವನ ದೊಡ್ಡದಲ್ಲ, ಸಣ್ಣ ಪ್ರಯಾಣವಷ್ಟೆ. ರಾಜಕೀಯ ಜೀವನ ಕೇವಲ 15 ವರ್ಷ. ಸಮಾಜ ಸೇವೆ ಕೇವಲ 5 ವರ್ಷದ್ದು. ಶ್ರದ್ಧೆಯಿಂದ, ಪ್ರಾಮಾಣಿಕತೆಯಿಂದ, ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ನಾಲ್ಕು ಬಾರಿ ಆಯ್ಕೆಯಾಗಿರುವ ಒಬ್ಬ ಶಾಸಕ ನಾನು.

ಬ್ಲಾಕ್‌ಮೇಲ್‌ ತಂತ್ರ ಮಾಡುವುದಿಲ್ಲ, ನೇರವಾಗಿ ಕೇಳುತ್ತೇನೆ: ಸಚಿವ ಆನಂದ್ ಸಿಂಗ್
ಆನಂದ್ ಸಿಂಗ್
TV9 Web
| Edited By: sandhya thejappa|

Updated on:Aug 11, 2021 | 1:31 PM

Share

ಬಳ್ಳಾರಿ: ಅರಣ್ಯ ಖಾತೆ ನೀಡುವಂತೆ ಪಟ್ಟು ಹಿಡಿದಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಈ ರಾಜ್ಯದ ಅತಿ ದೊಡ್ಡ ರಾಜಕಾರಣಿ ನಾನಲ್ಲ. ಮಾಧ್ಯಮಗಳ ನಿರೀಕ್ಷೆಯಂತೆ ಹೇಳಿಕೆ ನೀಡಲ್ಲ ಎಂದು 7ನೇ ತಾರೀಖಿನಂದೆ ಬಳ್ಳಾರಿಯಲ್ಲಿ ಪ್ರತಿಕ್ರಿಯೆ ನೀಡಿದ್ದೇನೆ. ನಾನು ಬ್ಲಾಕ್‌ಮೇಲ್‌ ತಂತ್ರ ಮಾಡುವುದಿಲ್ಲ. ನೇರವಾಗಿ ಕೇಳುತ್ತೇನೆ, ತಪ್ಪಿದ್ದರೆ ತಿದ್ದಿಕೊಳ್ಳುತ್ತೇನೆ. ಪಕ್ಷಕ್ಕೆ, ನಾಯಕರಿಗೆ ಮುಜುಗರವಾಗುವಂತೆ ನಡೆದುಕೊಂಡಿಲ್ಲ. ಒಂದು ವೇಳೆ ನಡೆದುಕೊಂಡಿದ್ದರೆ ಎಲ್ಲರಲ್ಲೂ ಕ್ಷಮೆಯಾಚಿಸುವೆ. ಪಕ್ಷ, ಕಾರ್ಯಕರ್ತರ ರಕ್ಷಣೆ ನನಗೆ ಮುಖ್ಯವಾಗಿರುತ್ತೆ ಎಂದು ಹೇಳಿಕೆ ನೀಡಿದ್ದಾರೆ.

ನನ್ನ ರಾಜಕೀಯ ಜೀವನ ದೊಡ್ಡದಲ್ಲ, ಸಣ್ಣ ಪ್ರಯಾಣವಷ್ಟೆ. ರಾಜಕೀಯ ಜೀವನ ಕೇವಲ 15 ವರ್ಷ. ಸಮಾಜ ಸೇವೆ ಕೇವಲ 5 ವರ್ಷದ್ದು. ಶ್ರದ್ಧೆಯಿಂದ, ಪ್ರಾಮಾಣಿಕತೆಯಿಂದ, ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ನಾಲ್ಕು ಬಾರಿ ಆಯ್ಕೆಯಾಗಿರುವ ಒಬ್ಬ ಶಾಸಕ ನಾನು. ವಿಶ್ವಪ್ರಸಿದ್ಧ ಕ್ಷೇತ್ರದಲ್ಲಿ ಆರಿಸಿ ಬಂದಿರುವ ಶಾಸಕ ನಾನು. ಕ್ಷೇತ್ರದ ಜನರ ಆಸೆಯಿಂದ ಆಯ್ಕೆಯಾಗಿ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ರಾಜಕೀಯವಾಗಿ ನಾನು ಹೇಳಬೇಕಾದದ್ದನ್ನು ಹೇಳಿದ್ದೀನಿ. ಬೇರೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ. ನನ್ನ ನಿರ್ಧಾರಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಎಂದಿಗೂ ನಾನು ನಿರ್ಧಾರಗಳನ್ನು ಬದಲಿಸಿಕೊಳ್ಳುವುದಿಲ್ಲ. ನಾನು ನನ್ನ ಜಿಲ್ಲೆಯ ಒಬ್ಬ ಮಾಮೂಲಿ ಶಾಸಕನಷ್ಟೆ. ಯಾವುದೇ ರೀತಿಯ ಗೊಂದಲಗಳೂ ನನ್ನಲ್ಲಿ ಇಲ್ಲ. ನನಗೆ ನಾಯಕರು, ಪಕ್ಷದ ಮೇಲೆ ವಿಶ್ವಾಸವಿದೆ. ಆದರೆ ಅವರಿಗೆ ನನ್ನ ಮೇಲೆ ವಿಶ್ವಾಸವಿದೆಯೋ, ಇಲ್ಲವೋ ಎಂಬ ಅನುಮಾನ ಬರ್ತಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಕುಟುಂಬದ ಇತಿಹಾಸದಿಂದಲೂ ಪೂಜೆ-ಪುನಸ್ಕಾರ ಮಾಡುತ್ತೇವೆ. ಯಾವುದೇ ಕೆಲಸ ಮಾಡುವ ಮುನ್ನ ಪೂಜೆ ಸಲ್ಲಿಸುತ್ತೇವೆ. 60 ವರ್ಷದ ಹಿಂದೆ ನಮ್ಮ ಹಿರಿಯರು ಈ ದೇಗುಲ ಕಟ್ಟಿಸಿದರು. ವೇಣುಗೋಪಾಲ ಕೃಷ್ಣನ ದೇವಾಲಯವನ್ನು ಕಟ್ಟಿಸಿದ್ದಾರೆ. ನನ್ನ ಅಜ್ಜಿಯ ನೆನಪಿಗಾಗಿ ನನ್ನ ಅಜ್ಜ ಕಟ್ಟಿಸಿರುವ ದೇವಾಲಯ. ಶಿಥಿಲಗೊಂಡಿದ್ದ ಹಲವು ದೇಗುಲಗಳ ಪುನರ್​ ಜೀವನಗೊಳಿಸಿದ್ದಾರೆ. ನನ್ನ ತಂದೆಯವರೂ ಕೂಡ ದೇಗುಲಗಳ ಜೀರ್ಣೋದ್ಧಾರ ಮಾಡಿದ್ದಾರೆ. ನಾನೂ ಕೂಡ ದೇವಾಲಯಗಳ ಜೀರ್ಣೋದ್ಧಾರದಲ್ಲಿ ತೊಡಗಿಸಿಕೊಂಡಿದ್ದೇನೆ. ನನ್ನ ತಂದೆಯ ಆಶಯದಂತೆ ದೇಗುಲಗಳ ಜೀರ್ಣೋದ್ಧಾರ ಮಾಡುವ ಸಂಕಲ್ಪವಿದೆ ಎಂದು ಹೇಳಿದರು.

ಇದನ್ನೂ ಓದಿ

ರಾಜ್ಯಸಭೆಯಲ್ಲಿ ಗಲಭೆಯೆಬ್ಬಿಸಿದವರ ವಿರುದ್ಧ ಕ್ರಮ, ಸದನದ ಗೌರವ ಹಾಳಾಗಿದ್ದಕ್ಕೆ ರಾತ್ರಿ ನಿದ್ರೆಯೇ ಮಾಡಿಲ್ಲ; ಭಾವುಕರಾದ ವೆಂಕಯ್ಯ ನಾಯ್ಡು

ಸ್ಪೀಕರ್ ಭೇಟಿಗೆ ಸಮಯ ಕೇಳಿದ ಆನಂದ್ ಸಿಂಗ್, ಶ್ರಾವಣ ಶುಕ್ರವಾರ ರಾಜೀನಾಮೆ ಫಿಕ್ಸ್​? ಅದಕ್ಕೂ ಮುನ್ನ ಸಿಎಂ, ಮಾಜಿ ಸಿಎಂ ಭೇಟಿ

Published On - 1:08 pm, Wed, 11 August 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್