AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯನವರಿಗೆ ಧಮ್​ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡಿಲಿ; ಅನಂತ್ ಕುಮಾರ್ ಹೆಗ್ಡೆ

ಸಿದ್ದರಾಮಯ್ಯನವರಿಗೆ ದಮ್ಮ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ. ಸಿದ್ದರಾಮಯ್ಯನವರ ದುರಂಹಕಾರಿ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಕರ್ನಾಟಕದಲ್ಲಿ ಹಿಂದು ವಿರೋಧಿ ಸರ್ಕಾರ ಇರಲು ಸಾಧ್ಯವೇ ಇಲ್ಲ. ಕಾಂಗ್ರೆಸ್​ನವರು ಬದುಕಬೇಕು ಎಂದರೇ ಮುಸ್ಲಿಂರ ಹಿಜಾಬನ್ನು ಹಿಡಿದುಕೊಂಡೇ ಓಟು ತಗೋಬೇಕು ಎಂದು ಸಂಸದ ಅನಂತ್​ ಕುಮಾರ್​ ಹೆಗಡೆ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯನವರಿಗೆ ಧಮ್​ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡಿಲಿ; ಅನಂತ್ ಕುಮಾರ್ ಹೆಗ್ಡೆ
ಅನಂತ್​ ಕುಮಾರ್​ ಹೆಗಡೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Dec 24, 2023 | 7:20 PM

Share

ಉತ್ತರ ಕನ್ನಡ, ಡಿ.24: ಸಿದ್ದರಾಮಯ್ಯ(Siddaramaiah)ನವರಿಗೆ ದಮ್ಮ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ ಎಂದು ಬಿಜೆಪಿ ಸಂಸದ ಅನಂತ್​ ಕುಮಾರ್​ ಹೆಗಡೆ (Anantkumar Hegde) ಕಿಡಿಕಾರಿದ್ದಾರೆ. ಶಿರಸಿ(Sirsi)ಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ ಹಿಜಾಬಿನ ಹಿಂದೆ ತಿರುಗುವ ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ. ಸಿದ್ದರಾಮಯ್ಯನ ಸರ್ಕಾರ ಹುಚ್ಚು ಮಹಮದ್​ನ ಸರ್ಕಾರ. ಅಲ್ಪ ಸಂಖ್ಯಾತರ ಓಟುಗಳು ಇಲ್ಲದೇ ಕಾಂಗ್ರೆಸ್ ಬದುಕಲು ಸಾಧ್ಯವಿಲ್ಲ. ಯಾವತ್ತೂ ಕಾಂಗ್ರೆಸ್ ಬಹುಸಂಖ್ಯಾತರ ರಾಜಕಾರಣ ಮಾಡಿಲ್ಲ,ಅವರ ಮನಸ್ಸಿಗೆ ಬಂದಂತೆ ರಾಜಕಾರಣ ಮಾಡುತಿದ್ದಾರೆ ಎಂದು ಕಾಂಗ್ರೆಸ್​ ವಿರುದ್ದ ಹರಿಹಾಯ್ದಿದ್ದಾರೆ.

ಈ ರಾಜ್ಯವನ್ನು ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ತೊಂದರೆಗೀಡು ಮಾಡಿದ ವ್ಯಕ್ತಿಯ ಹೆಸರನ್ನೇ ತೆಗದುಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತೆ ಎಂದರೇ ಕಾಂಗ್ರೆಸ್​ಗೆ ಮುಂದಿನ ದಿನ ಜನತೆ ಹೇಗೆ ಉತ್ತರ ಕೊಡುತ್ತೆ ಎಂಬುದನ್ನು ಯೋಚನೆ ಮಾಡಬೇಕು. ಸಿದ್ದರಾಮಯ್ಯ ಅವರು ‘ಯಾರು ಬೇಕಾದರೂ, ಏನು ಬೇಕಾದರೂ ಡ್ರೇಸ್​ ಹಾಕಿಕೊಂಡು ಹೋಗಬಹುದು ಎಂಬ ಹೇಳಿಕೆಗೆ ಉತ್ತರಿಸಿದ ಅವರು ‘ ಇವರ ಹೇಳಿಕೆ ಮುಂದಿನ ದಿನ ಆತಂಕಕಾರಿ ಬೆಳವಣಿಗೆಗೆ ಕಾರಣ ಆಗುತ್ತೆ. ನಮ್ಮವರು ಕೇಸರಿ ಶಾಲು ಹಾಕಿಕೊಂಡು ಹೋಗುತ್ತಾರೆ, ಅವರು ಹಿಜಾಬ್ ಹಾಕಿಕೊಂಡು ಹೋಗ್ತಾರೆ ಎಂದರು.

ಇದನ್ನೂ ಓದಿ:ಹಿಜಾಬ್ ವಿವಾದ: ಅದು ಹಾಗಲ್ಲ ಅಂತ ರಾಗ ಎಳೆಯುತ್ತಾ ನಿನ್ನೆ ಹೇಳಿದ್ದನ್ನೇ ಯಾಮಾರಿಸಿಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿದ್ದರಾಮಯ್ಯನ ದುರಂಹಕಾರಿ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ

ಸರ್ಕಾರಕ್ಕೆ ಒಂದು ಚೌಕಟ್ಟಿನ ಕಲ್ಪನೆ ಇಲ್ಲ ಎಂದಾದರೇ ಸರ್ಕಾರ ಇದೆ ಎಂದು ಅನಿಸುವುದಿಲ್ಲ. ಸಿದ್ದರಾಮಯ್ಯನವರಿಗೆ ದಮ್ಮ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ. ಸಿದ್ದರಾಮಯ್ಯನವರ ದುರಂಹಕಾರಿ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಕರ್ನಾಟಕದಲ್ಲಿ ಹಿಂದು ವಿರೋಧಿ ಸರ್ಕಾರ ಇರಲು ಸಾಧ್ಯವೇ ಇಲ್ಲ. ಕಾಂಗ್ರೆಸ್​ನವರು ಬದುಕಬೇಕು ಎಂದರೇ ಮುಸ್ಲಿಂರ ಹಿಜಾಬನ್ನು ಹಿಡಿದುಕೊಂಡೇ ಓಟು ತಗೋಬೇಕು. ಹಿಜಾಬಿನ ಹಿಂದೆ ತಿರುಗುವ ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ. ಕರ್ನಾಟಕದಲ್ಲಿ ಮುಂದಿನ ದಿನದಲ್ಲಿ ಬಿಜೆಪಿ ಬರುತ್ತದೆ ಎಂದು ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Sun, 24 December 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ