AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿಲ್ ಆಂಟನಿಯನ್ನು ಟ್ವಿಟರ್​​ನಲ್ಲಿ ಅನ್​​ಫಾಲೋ ಮಾಡುವಂತೆ ಕೇರಳದ ಕಾಂಗ್ರೆಸ್ ನಾಯಕರ ಕರೆ; ಪಕ್ಷದ ಅವನತಿಗೆ ಕಾರಣ ಇದೇ ಎಂದ ಆಂಟನಿ ಪುತ್ರ

ಜನರು ಸಾಮಾನ್ಯವಾಗಿ ಟ್ವಿಟ್ಟರ್‌ನಲ್ಲಿ ನಿಲುವು ನೋಡುತ್ತಾರೆ, ವಿಭಿನ್ನ ಜನರು ಏನನ್ನು ಯೋಚಿಸುತ್ತಾರೆ ಎಂಬುದರ ಕುರಿತು ಕೆಲವು ಕಲ್ಪನೆ ಮತ್ತು ಮಾಹಿತಿಯನ್ನು ಪಡೆಯಲು ನೋಡುತ್ತಾರೆ. ಇದು ತಿಳುವಳಿಕೆಯುಳ್ಳ ಅಭಿಪ್ರಾಯಗಳನ್ನು ಮಾಡಲು ಸಹಾಯ ಮಾಡುತ್ತದೆ. ನೀವು ವಿಭಿನ್ನ ನಿಲುವು ಹೊಂದಿರುವ ವ್ಯಕ್ತಿಗಳನ್ನು ಫಾಲೋ ಮಾಡದಿದ್ದಾಗ ...

ಅನಿಲ್ ಆಂಟನಿಯನ್ನು ಟ್ವಿಟರ್​​ನಲ್ಲಿ ಅನ್​​ಫಾಲೋ ಮಾಡುವಂತೆ ಕೇರಳದ ಕಾಂಗ್ರೆಸ್ ನಾಯಕರ ಕರೆ; ಪಕ್ಷದ ಅವನತಿಗೆ ಕಾರಣ ಇದೇ ಎಂದ ಆಂಟನಿ ಪುತ್ರ
ಅನಿಲ್ ಆಂಟನಿ
ರಶ್ಮಿ ಕಲ್ಲಕಟ್ಟ
|

Updated on: Apr 12, 2023 | 4:46 PM

Share

ದೆಹಲಿ: ಕಳೆದ ವಾರ ಬಿಜೆಪಿಗೆ (BJP) ಸೇರ್ಪಡೆಗೊಂಡ ಕೇರಳದ ಮಾಜಿ ಕಾಂಗ್ರೆಸ್ ನಾಯಕ ಅನಿಲ್ ಆಂಟನಿ (Anil Antony) ಇಂದು ಟ್ವಿಟರ್‌ನಲ್ಲಿ (Twitter) ತನ್ನನ್ನು ಅನ್‌ಫಾಲೋ ಮಾಡುವಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಕೇಳಿದ್ದಕ್ಕಾಗಿ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ನ ಕೇರಳ ಘಟಕದ ಅವನತಿಗೆ ಒಂದು ಕಾರಣವೆಂದರೆ ಅದು ವಾಸ್ತವಗಳಿಂದ ದೂರವಿದೆ ಎಂದಿದ್ದಾರೆ ಅನಿಲ್ ಆಂಟನಿ.ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಜನರು ಯೋಜನೆ ಮತ್ತು ಮಾಹಿತಿಯ ಆಧಾರದ ಮೇಲೆ ತಿಳುವಳಿಕೆಯುಳ್ಳ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಜನರು ಟ್ವಿಟರ್‌ನಲ್ಲಿದ್ದಾರೆ ಎಂದು ಅನಿಲ್ ಆಂಟನಿ ಹೇಳಿದ್ದಾರೆ.

ಜನರು ಸಾಮಾನ್ಯವಾಗಿ ಟ್ವಿಟ್ಟರ್‌ನಲ್ಲಿ ನಿಲುವು ನೋಡುತ್ತಾರೆ, ವಿಭಿನ್ನ ಜನರು ಏನನ್ನು ಯೋಚಿಸುತ್ತಾರೆ ಎಂಬುದರ ಕುರಿತು ಕೆಲವು ಕಲ್ಪನೆ ಮತ್ತು ಮಾಹಿತಿಯನ್ನು ಪಡೆಯಲು ನೋಡುತ್ತಾರೆ. ಇದು ತಿಳುವಳಿಕೆಯುಳ್ಳ ಅಭಿಪ್ರಾಯಗಳನ್ನು ಮಾಡಲು ಸಹಾಯ ಮಾಡುತ್ತದೆ. ನೀವು ವಿಭಿನ್ನ ನಿಲುವು ಹೊಂದಿರುವ ವ್ಯಕ್ತಿಗಳನ್ನು ಫಾಲೋ ಮಾಡದಿದ್ದಾಗ ಮತ್ತು ಒಂದೇ ರೀತಿಯ ನಿಲುವು ಹೊಂದಿರುವವರನ್ನು ಮಾತ್ರ ಫಾಲೋ ಮಾಡುತ್ತಿದ್ದರೆ ವಾಸ್ತವ ಸ್ಥಿತಿಯಿಂದ ದೂರವಾಗಿರುವ ಪ್ರತಿಧ್ವನಿ ತುಂಬಿದ ಚೇಬಂರ್​​ನಂತೆ ಅದಾಗುತ್ತದೆ. ಕೇರಳದ ಕಾಂಗ್ರೆಸ್ ಈಗ ಏನಾಗಿದೆಯೇ ಎಂಬುದಕ್ಕೆ ಇದೂ ಮುಖ್ಯ ಕಾರಣಗಳಲ್ಲಿ ಒಂದು ಎಂದು ಅನಿಲ್ ಆಂಟನಿ ಹೇಳಿದ್ದಾರೆ. ಕೇರಳದ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಟಿ ಸಿದ್ದಿಕ್ ಅವರು ಅನಿಲ್ ಆಂಟನಿ ಅವರನ್ನು ಅನ್ ಫಾಲೋ ಮಾಡಿ ಎಂದು ಪಕ್ಷದ ಕಾರ್ಯಕರ್ತರಲ್ಲಿ ಹೇಳಿರುವ ಟ್ವೀಟ್‌ಗೆ ಪ್ರತಿಕ್ರಿಯಿಸುವಾಗ ಅನಿಲ್ ಈ ರೀತಿ ಉತ್ತರಿಸಿದ್ದಾರೆ.

ಕಾಂಗ್ರೆಸ್‌ನ ವಿವಿಧ ಸಾಮಾಜಿಕ ಉಪಕ್ರಮಗಳು ಮತ್ತು ಡಿಜಿಟಲ್ ಪ್ರಚಾರಗಳೊಂದಿಗೆ ಸಂಬಂಧ ಹೊಂದಿದ್ದ ಅನಿಲ್ ಆಂಟನಿ ಕಳೆದ ವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದು ತಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ನಾಯಕತ್ವದಿಂದ ಪ್ರಭಾವಿತರಾಗಿದ್ದಾರೆ ಎಂದು ಹೇಳಿದರು. 2002 ರ ಗುಜರಾತ್ ಗಲಭೆಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯ ಕುರಿತು ಬಿಬಿಸಿಯ ಸಾಕ್ಷ್ಯಚಿತ್ರದ ವಿವಾದದ ನಂತರ ಅನಿಲ್ ಆಂಟನಿ ಜನವರಿಯಲ್ಲಿ ಕಾಂಗ್ರೆಸ್ ತೊರೆದಿದ್ದರು.

ಇದನ್ನೂ ಓದಿ: ಏಪ್ರಿಲ್ 14ರಂದು ಅಸ್ಸಾಂಗೆ ಪ್ರಧಾನಿ ಮೋದಿ ಭೇಟಿ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ತಾವು ಕುಟುಂಬಕ್ಕಾಗಿ ದುಡಿಯುತ್ತಿದ್ದೇವೆ ಎಂದು ನಂಬುತ್ತಾರೆ. ಆದರೆ ನಾನು ದೇಶಕ್ಕಾಗಿ ಕೆಲಸ ಮಾಡುತ್ತಿದ್ದೇನೆ ಎಂದು ನಾನು ನಂಬುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನಲ್ಲಿ ಭಾರತವನ್ನು ಪ್ರಮುಖ ಸ್ಥಾನದಲ್ಲಿ ಇರಿಸುವ ಸ್ಪಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಎಂದು ಸುದ್ದಿಗಾರರಲ್ಲಿ ಮಾತನಾಡಿದ ಅನಿಲ್ ಹೇಳಿದ್ದಾರೆ. ಅನಿಲ್ ಆಂಟನಿ ಬಿಜೆಪಿ ಸೇರಿದಾಗ ಅವರ ತಂದೆ ಮತ್ತು ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಮಗನ ನಿರ್ಧಾರ ತಪ್ಪು, ಇದರಿಂದ ನನಗೆ ತುಂಬಾ ನೋವಾಗಿದೆ ಎಂದು ಪ್ರತಿಕ್ರಿಯಿಸಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?