AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anna Bhagya Scheme: ಅನ್ನಭಾಗ್ಯ ಯೋಜನೆ ಘೋಷಿಸಿದ ಸಿಎಂ ಸಿದ್ಧರಾಮಯ್ಯ: ಜು.1ರಿಂದ ಜಾರಿ

ಬಿಪಿಎಲ್, ಅಂತ್ಯೋದಯ ಕಾರ್ಡ್​ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ ಪ್ರತಿ ಸದಸ್ಯರಿಗೆ 10 ಕೆಜಿ ಆಹಾರಧಾನ್ಯವನ್ನು ಜುಲೈ 1ರಿಂದ ವಿತರಿಸಲು ನಿರ್ಧಾರ ಮಾಡಲಾಗಿದೆ.

Anna Bhagya Scheme: ಅನ್ನಭಾಗ್ಯ ಯೋಜನೆ ಘೋಷಿಸಿದ ಸಿಎಂ ಸಿದ್ಧರಾಮಯ್ಯ: ಜು.1ರಿಂದ ಜಾರಿ
ಅನ್ನಭಾಗ್ಯ ಯೋಜನೆ
ಗಂಗಾಧರ​ ಬ. ಸಾಬೋಜಿ
|

Updated on:Jun 02, 2023 | 4:18 PM

Share

ಬೆಂಗಳೂರು: ಬಿಪಿಎಲ್, ಅಂತ್ಯೋದಯ ಕಾರ್ಡ್​ದಾರರಿಗೆ ‘ಅನ್ನಭಾಗ್ಯ’ (Anna Bhagya Scheme) ಯೋಜನೆಯಡಿ ಪ್ರತಿ ಸದಸ್ಯರಿಗೆ 10 ಕೆಜಿ ಆಹಾರಧಾನ್ಯ ವಿತರಿಸಲಾಗುವುದು. ಜುಲೈ 1ರಿಂದ 10 ಕೆಜಿ ಆಹಾರಧಾನ್ಯ ನೀಡಲು ನಿರ್ಧರಿಸಿದ್ದೇವೆ ಎಂದು ಸಿಎಂ ಸಿದ್ಧರಾಮಯ್ಯ ಶುಕ್ರವಾರ ಘೋಷಿಸಿದರು. ಸಚಿವ ಸಂಪುಟ ಸಭೆಯ ಬಳಿಕ  ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 3ನೇ ಗ್ಯಾರಂಟಿಯಾದ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದರು. ಸದ್ಯ ಎಲ್ಲರಿಗೂ 10 ಕೆಜಿ ಕೊಡುವಷ್ಟು ಸಂಗ್ರಹ ಇಲ್ಲದ ಕಾರಣ ಜುಲೈ 1 ರಿಂದ ವಿತರಣೆ ಮಾಡಲಾಗುವು ಎಂದು ತಿಳಿಸಿದರು.

ಈ ಹಿಂದೆ ಇದ್ದ ಬಿಜೆಪಿ ಸರ್ಕಾರ 7 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಕೊಡುತ್ತಿತ್ತು. ಚುನಾವಣಾ ಸಂದರ್ಭದಲ್ಲಿ ನಾವು ಅಧಿಕಾರಕ್ಕೆ ಬಂದರೆ ಉಚಿತ 10 ಕೆಜೆ ಅಕ್ಕಿ ನೀಡುವುದಾಗಿ ಭರವಸೆಯನ್ನು ನೀಡಿದ್ದೇವು ಎಂದು ಹೇಳಿದರು. ಅದರಂತೆ ಬಿಪಿಎಲ್​ ಕಾರ್ಡ್​ ಹೊಂದಿರುವ ಪ್ರತಿ ಕುಟುಂಬಗಳಿಗೆ 10 ಕೆಜಿ ಆಹಾರಧಾನ್ಯವನ್ನು ಜುಲೈ 1ರಿಂದ ಒದಗಿಸಲಾಗುತ್ತಿದೆ.

ಇದನ್ನೂ ಓದಿ: Karnataka Guarantee Schemes: 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ: ಕಂಡೀಷನ್​ಗಳೇನು? ಇಲ್ಲಿದೆ ವಿವರ

ಫ್ರೀ ಅಕ್ಕಿ.. 1400 ಕೋಟಿ ರೂ. ಹೊರೆ ಸಾಧ್ಯತೆ

ಪ್ರತಿಯೊಬ್ಬರಿಗೂ ಉಚಿತವಾಗಿ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಅಕ್ಕಿ ಖರೀದಿಗೆ ಅಂದಾಜು 1 ಸಾವಿರದ 400 ಕೋಟಿ ರೂಪಾಯಿ ವ್ಯಯ ಮಾಡಬೇಕಾಗುತ್ತೆ. ಕೇಂದ್ರ ಸರ್ಕಾರ ಕೊಡುತ್ತಿರುವ 5 ಕೆಜಿ ಅಕ್ಕಿಗೆ ಏನಾದ್ರೂ ಕಂಡಿಷನ್ ಹಾಕಿದ್ರೆ, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಮಸ್ಯೆ ಮತ್ತಷ್ಟು ಜಟಿಲವಾಗಬಹುದು. ಅಲ್ಲದೇ, ಕೇಂದ್ರ ಸರ್ಕಾರದ 5 ಕೆಜಿ ಹೊರತಾಗಿ 10 ಕೆಜಿ ನೀಡುವಂತೆ ವಿಪಕ್ಷ ಪಟ್ಟು ಹಿಡಿದಿದ್ದು, ಬಿಪಿಎಲ್ ಕುಟುಂಬಗಳ ಮಾಹಿತಿ ಆಧರಿಸಿ ಅಕ್ಕಿ ನೀಡಲು ಕಾಂಗ್ರೆಸ್ ಲೆಕ್ಕಾಚಾರ ಮಾಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:39 pm, Fri, 2 June 23

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ