AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಬಹುದೊಡ್ಡ, ಇತಿಹಾಸ ಕಾಣದ ನಿರ್ಧಾರ ಘೋಷಣೆ ಮಾಡುವುದಾಗಿ ಪಂಜಾಬ್​ ಸಿಎಂ ಭಗವಂತ್ ಮಾನ್ ಟ್ವೀಟ್​

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಭಗವಂತ್​ ಮಾನ್​, ಪಂಜಾಬ್​ ಜನರ ಹಿತದೃಷ್ಟಿಯಿಂದ ಇಂದು ಒಂದು ಬಹುದೊಡ್ಡ, ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿ, ಕುತೂಹಲ ಸೃಷ್ಟಿಸಿದ್ದಾರೆ.

ಶೀಘ್ರದಲ್ಲೇ ಬಹುದೊಡ್ಡ, ಇತಿಹಾಸ ಕಾಣದ ನಿರ್ಧಾರ ಘೋಷಣೆ ಮಾಡುವುದಾಗಿ ಪಂಜಾಬ್​ ಸಿಎಂ ಭಗವಂತ್ ಮಾನ್ ಟ್ವೀಟ್​
ಭಗವಂತ್ ಮಾನ್
TV9 Web
| Edited By: |

Updated on:Mar 17, 2022 | 1:17 PM

Share

ನಿನ್ನೆಯಷ್ಟೇ ಪಂಜಾಬ್​​ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಭಗವಂತ್ ಮಾನ್​ ಈಗೊಂದು ಬಹುದೊಡ್ಡ, ಮಹತ್ವದ ಘೋಷಣೆ ಮಾಡಲು ಸಜ್ಜಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾನ್​, ಶೀಘ್ರದಲ್ಲೇ ಅತ್ಯಂತ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಲಿದ್ದೇನೆ. ಇಂಥ ಘೋಷಣೆಯನ್ನು ಪಂಜಾಬ್​ ಇತಿಹಾಸದಲ್ಲಿಯೇ ಯಾರೂ ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ.  ಪಂಜಾಬ್​​ ವಿಧಾನಸಭೆ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ 92 ಕ್ಷೇತ್ರಗಳನ್ನು ಗೆದ್ದು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿದೆ. ಭಗವಂತ್​ ಮಾನ್​ ಅವರು ನಿನ್ನೆ (ಮಾ.16) ಪಂಜಾಬ್​ನ ಖಟ್ಕರ್ ಕಲಾನ್​​ ಗ್ರಾಮದಲ್ಲಿ ಅದ್ದೂರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ನಾನು ಕ್ಷುಲ್ಲಕ ರಾಜಕಾರಣ ಮಾಡುವುದಿಲ್ಲ, ಯಾರಿಗೂ ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದ್ದರು.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಭಗವಂತ್​ ಮಾನ್​, ಪಂಜಾಬ್​ ಜನರ ಹಿತದೃಷ್ಟಿಯಿಂದ ಇಂದು ಒಂದು ಬಹುದೊಡ್ಡ, ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗುವುದು. ಇಂಥ ನಿರ್ಧಾರವನ್ನು ಪಂಜಾಬ್​ ಇತಿಹಾಸದಲ್ಲಿಯೇ ಯಾರೂ ಮಾಡಿರಲಿಲ್ಲ. ಅದೇನೆಂದು ಶೀಘ್ರದಲ್ಲಿಯೇ ಹೇಳುತ್ತೇನೆ ಎಂದು ತಿಳಿಸಿದ್ದಾರೆ. ಭಗವಂತ್​ ಮಾನ್​ ಒಬ್ಬ ಹಾಸ್ಯನಟನಾಗಿದ್ದವರು ಇಂದು ಮುಖ್ಯಮಂತ್ರಿ ಗದ್ದುಗೆಗೆ ಏರಿದ್ದಾರೆ. ಪಂಜಾಬ್​​ನಲ್ಲಿ ಆಪ್​ ಅಧಿಕಾರಕ್ಕೆ ಏರಿದ್ದೇ ಒಂದು ಇತಿಹಾಸ ಸೃಷ್ಟಿಯಾಗಿರುವಾಗ, ಈಗ ಇನ್ನೊಂದು ಇತಿಹಾಸ ಕಾಣದ ನಿರ್ಧಾರ ಘೋಷಿಸುವುದಾಗಿ ಅವರು ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಪಂಜಾಬ್​, ಉತ್ತರ ಪ್ರದೇಶ, ಉತ್ತರಾಖಂಡ್​, ಮಣಿಪುರ, ಗೋವಾ ವಿಧಾನಸಭೆ ಚುನಾವಣೆಗಳಲ್ಲಿ ಒಂದೂ ರಾಜ್ಯದಲ್ಲಿ ಕಾಂಗ್ರೆಸ್​ ಗೆದ್ದಿಲ್ಲ. ಇದ್ದ ಪಂಜಾಬ್​​ ಕೂಡ ಕೈಬಿಟ್ಟು ಹೋಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಪ್ರಕ್ಷುಬ್ಧತೆ ಉಂಟಾಗಿದ್ದು, ಪಂಜಾಬ್​ ಕಾಂಗ್ರೆಸ್ ಅಧ್ಯಕ್ಷ ನವಜೋತ್​ ಸಿಂಗ್ ಸಿಧು ಸೇರಿ ಐದೂ ರಾಜ್ಯಗಳ ಅಧ್ಯಕ್ಷರು ರಾಜೀನಾಮೆ ಸಲ್ಲಿಸಿದ್ದಾರೆ. ಪಂಜಾಬ್​​ನಲ್ಲಿ ಕಾಂಗ್ರೆಸ್​ ಸೋಲಲು ನವಜೋತ್​ ಸಿಂಗ್ ಸಿಧು ಅವರೇ ಕಾರಣ ಎಂದು ರಾಜಕೀಯ ತಜ್ಞರು ವಿಶ್ಲೇಷಣೆ ಮಾಡುತ್ತಿದ್ದಾರೆ. ಆದರೆ ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದ ಸಿಧು, ತಮ್ಮ ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿಯವರಿಗೆ ಸಲ್ಲಿಸಿ, ಆಪ್​ ಪಕ್ಷವನ್ನು ಹೊಗಳುತ್ತಿದ್ದಾರೆ.

ಇದನ್ನೂ ಓದಿ: Hijab: ಹಿಜಾಬ್ ತೀರ್ಪು ವಿರೋಧಿಸಿ ಕರ್ನಾಟಕ ಬಂದ್​ ಕರೆಗೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ

Published On - 1:16 pm, Thu, 17 March 22

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ