ಶೀಘ್ರದಲ್ಲೇ ಬಹುದೊಡ್ಡ, ಇತಿಹಾಸ ಕಾಣದ ನಿರ್ಧಾರ ಘೋಷಣೆ ಮಾಡುವುದಾಗಿ ಪಂಜಾಬ್​ ಸಿಎಂ ಭಗವಂತ್ ಮಾನ್ ಟ್ವೀಟ್​

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಭಗವಂತ್​ ಮಾನ್​, ಪಂಜಾಬ್​ ಜನರ ಹಿತದೃಷ್ಟಿಯಿಂದ ಇಂದು ಒಂದು ಬಹುದೊಡ್ಡ, ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿ, ಕುತೂಹಲ ಸೃಷ್ಟಿಸಿದ್ದಾರೆ.

ಶೀಘ್ರದಲ್ಲೇ ಬಹುದೊಡ್ಡ, ಇತಿಹಾಸ ಕಾಣದ ನಿರ್ಧಾರ ಘೋಷಣೆ ಮಾಡುವುದಾಗಿ ಪಂಜಾಬ್​ ಸಿಎಂ ಭಗವಂತ್ ಮಾನ್ ಟ್ವೀಟ್​
ಭಗವಂತ್ ಮಾನ್
Follow us
| Updated By: Lakshmi Hegde

Updated on:Mar 17, 2022 | 1:17 PM

ನಿನ್ನೆಯಷ್ಟೇ ಪಂಜಾಬ್​​ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಭಗವಂತ್ ಮಾನ್​ ಈಗೊಂದು ಬಹುದೊಡ್ಡ, ಮಹತ್ವದ ಘೋಷಣೆ ಮಾಡಲು ಸಜ್ಜಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾನ್​, ಶೀಘ್ರದಲ್ಲೇ ಅತ್ಯಂತ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಲಿದ್ದೇನೆ. ಇಂಥ ಘೋಷಣೆಯನ್ನು ಪಂಜಾಬ್​ ಇತಿಹಾಸದಲ್ಲಿಯೇ ಯಾರೂ ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ.  ಪಂಜಾಬ್​​ ವಿಧಾನಸಭೆ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ 92 ಕ್ಷೇತ್ರಗಳನ್ನು ಗೆದ್ದು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿದೆ. ಭಗವಂತ್​ ಮಾನ್​ ಅವರು ನಿನ್ನೆ (ಮಾ.16) ಪಂಜಾಬ್​ನ ಖಟ್ಕರ್ ಕಲಾನ್​​ ಗ್ರಾಮದಲ್ಲಿ ಅದ್ದೂರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ನಾನು ಕ್ಷುಲ್ಲಕ ರಾಜಕಾರಣ ಮಾಡುವುದಿಲ್ಲ, ಯಾರಿಗೂ ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದ್ದರು.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಭಗವಂತ್​ ಮಾನ್​, ಪಂಜಾಬ್​ ಜನರ ಹಿತದೃಷ್ಟಿಯಿಂದ ಇಂದು ಒಂದು ಬಹುದೊಡ್ಡ, ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗುವುದು. ಇಂಥ ನಿರ್ಧಾರವನ್ನು ಪಂಜಾಬ್​ ಇತಿಹಾಸದಲ್ಲಿಯೇ ಯಾರೂ ಮಾಡಿರಲಿಲ್ಲ. ಅದೇನೆಂದು ಶೀಘ್ರದಲ್ಲಿಯೇ ಹೇಳುತ್ತೇನೆ ಎಂದು ತಿಳಿಸಿದ್ದಾರೆ. ಭಗವಂತ್​ ಮಾನ್​ ಒಬ್ಬ ಹಾಸ್ಯನಟನಾಗಿದ್ದವರು ಇಂದು ಮುಖ್ಯಮಂತ್ರಿ ಗದ್ದುಗೆಗೆ ಏರಿದ್ದಾರೆ. ಪಂಜಾಬ್​​ನಲ್ಲಿ ಆಪ್​ ಅಧಿಕಾರಕ್ಕೆ ಏರಿದ್ದೇ ಒಂದು ಇತಿಹಾಸ ಸೃಷ್ಟಿಯಾಗಿರುವಾಗ, ಈಗ ಇನ್ನೊಂದು ಇತಿಹಾಸ ಕಾಣದ ನಿರ್ಧಾರ ಘೋಷಿಸುವುದಾಗಿ ಅವರು ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಪಂಜಾಬ್​, ಉತ್ತರ ಪ್ರದೇಶ, ಉತ್ತರಾಖಂಡ್​, ಮಣಿಪುರ, ಗೋವಾ ವಿಧಾನಸಭೆ ಚುನಾವಣೆಗಳಲ್ಲಿ ಒಂದೂ ರಾಜ್ಯದಲ್ಲಿ ಕಾಂಗ್ರೆಸ್​ ಗೆದ್ದಿಲ್ಲ. ಇದ್ದ ಪಂಜಾಬ್​​ ಕೂಡ ಕೈಬಿಟ್ಟು ಹೋಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಪ್ರಕ್ಷುಬ್ಧತೆ ಉಂಟಾಗಿದ್ದು, ಪಂಜಾಬ್​ ಕಾಂಗ್ರೆಸ್ ಅಧ್ಯಕ್ಷ ನವಜೋತ್​ ಸಿಂಗ್ ಸಿಧು ಸೇರಿ ಐದೂ ರಾಜ್ಯಗಳ ಅಧ್ಯಕ್ಷರು ರಾಜೀನಾಮೆ ಸಲ್ಲಿಸಿದ್ದಾರೆ. ಪಂಜಾಬ್​​ನಲ್ಲಿ ಕಾಂಗ್ರೆಸ್​ ಸೋಲಲು ನವಜೋತ್​ ಸಿಂಗ್ ಸಿಧು ಅವರೇ ಕಾರಣ ಎಂದು ರಾಜಕೀಯ ತಜ್ಞರು ವಿಶ್ಲೇಷಣೆ ಮಾಡುತ್ತಿದ್ದಾರೆ. ಆದರೆ ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದ ಸಿಧು, ತಮ್ಮ ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿಯವರಿಗೆ ಸಲ್ಲಿಸಿ, ಆಪ್​ ಪಕ್ಷವನ್ನು ಹೊಗಳುತ್ತಿದ್ದಾರೆ.

ಇದನ್ನೂ ಓದಿ: Hijab: ಹಿಜಾಬ್ ತೀರ್ಪು ವಿರೋಧಿಸಿ ಕರ್ನಾಟಕ ಬಂದ್​ ಕರೆಗೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ

Published On - 1:16 pm, Thu, 17 March 22

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ