AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಬಹುದೊಡ್ಡ, ಇತಿಹಾಸ ಕಾಣದ ನಿರ್ಧಾರ ಘೋಷಣೆ ಮಾಡುವುದಾಗಿ ಪಂಜಾಬ್​ ಸಿಎಂ ಭಗವಂತ್ ಮಾನ್ ಟ್ವೀಟ್​

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಭಗವಂತ್​ ಮಾನ್​, ಪಂಜಾಬ್​ ಜನರ ಹಿತದೃಷ್ಟಿಯಿಂದ ಇಂದು ಒಂದು ಬಹುದೊಡ್ಡ, ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿ, ಕುತೂಹಲ ಸೃಷ್ಟಿಸಿದ್ದಾರೆ.

ಶೀಘ್ರದಲ್ಲೇ ಬಹುದೊಡ್ಡ, ಇತಿಹಾಸ ಕಾಣದ ನಿರ್ಧಾರ ಘೋಷಣೆ ಮಾಡುವುದಾಗಿ ಪಂಜಾಬ್​ ಸಿಎಂ ಭಗವಂತ್ ಮಾನ್ ಟ್ವೀಟ್​
ಭಗವಂತ್ ಮಾನ್
TV9 Web
| Edited By: |

Updated on:Mar 17, 2022 | 1:17 PM

Share

ನಿನ್ನೆಯಷ್ಟೇ ಪಂಜಾಬ್​​ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಭಗವಂತ್ ಮಾನ್​ ಈಗೊಂದು ಬಹುದೊಡ್ಡ, ಮಹತ್ವದ ಘೋಷಣೆ ಮಾಡಲು ಸಜ್ಜಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾನ್​, ಶೀಘ್ರದಲ್ಲೇ ಅತ್ಯಂತ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಲಿದ್ದೇನೆ. ಇಂಥ ಘೋಷಣೆಯನ್ನು ಪಂಜಾಬ್​ ಇತಿಹಾಸದಲ್ಲಿಯೇ ಯಾರೂ ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ.  ಪಂಜಾಬ್​​ ವಿಧಾನಸಭೆ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ 92 ಕ್ಷೇತ್ರಗಳನ್ನು ಗೆದ್ದು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿದೆ. ಭಗವಂತ್​ ಮಾನ್​ ಅವರು ನಿನ್ನೆ (ಮಾ.16) ಪಂಜಾಬ್​ನ ಖಟ್ಕರ್ ಕಲಾನ್​​ ಗ್ರಾಮದಲ್ಲಿ ಅದ್ದೂರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ನಾನು ಕ್ಷುಲ್ಲಕ ರಾಜಕಾರಣ ಮಾಡುವುದಿಲ್ಲ, ಯಾರಿಗೂ ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದ್ದರು.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಭಗವಂತ್​ ಮಾನ್​, ಪಂಜಾಬ್​ ಜನರ ಹಿತದೃಷ್ಟಿಯಿಂದ ಇಂದು ಒಂದು ಬಹುದೊಡ್ಡ, ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗುವುದು. ಇಂಥ ನಿರ್ಧಾರವನ್ನು ಪಂಜಾಬ್​ ಇತಿಹಾಸದಲ್ಲಿಯೇ ಯಾರೂ ಮಾಡಿರಲಿಲ್ಲ. ಅದೇನೆಂದು ಶೀಘ್ರದಲ್ಲಿಯೇ ಹೇಳುತ್ತೇನೆ ಎಂದು ತಿಳಿಸಿದ್ದಾರೆ. ಭಗವಂತ್​ ಮಾನ್​ ಒಬ್ಬ ಹಾಸ್ಯನಟನಾಗಿದ್ದವರು ಇಂದು ಮುಖ್ಯಮಂತ್ರಿ ಗದ್ದುಗೆಗೆ ಏರಿದ್ದಾರೆ. ಪಂಜಾಬ್​​ನಲ್ಲಿ ಆಪ್​ ಅಧಿಕಾರಕ್ಕೆ ಏರಿದ್ದೇ ಒಂದು ಇತಿಹಾಸ ಸೃಷ್ಟಿಯಾಗಿರುವಾಗ, ಈಗ ಇನ್ನೊಂದು ಇತಿಹಾಸ ಕಾಣದ ನಿರ್ಧಾರ ಘೋಷಿಸುವುದಾಗಿ ಅವರು ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಪಂಜಾಬ್​, ಉತ್ತರ ಪ್ರದೇಶ, ಉತ್ತರಾಖಂಡ್​, ಮಣಿಪುರ, ಗೋವಾ ವಿಧಾನಸಭೆ ಚುನಾವಣೆಗಳಲ್ಲಿ ಒಂದೂ ರಾಜ್ಯದಲ್ಲಿ ಕಾಂಗ್ರೆಸ್​ ಗೆದ್ದಿಲ್ಲ. ಇದ್ದ ಪಂಜಾಬ್​​ ಕೂಡ ಕೈಬಿಟ್ಟು ಹೋಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಪ್ರಕ್ಷುಬ್ಧತೆ ಉಂಟಾಗಿದ್ದು, ಪಂಜಾಬ್​ ಕಾಂಗ್ರೆಸ್ ಅಧ್ಯಕ್ಷ ನವಜೋತ್​ ಸಿಂಗ್ ಸಿಧು ಸೇರಿ ಐದೂ ರಾಜ್ಯಗಳ ಅಧ್ಯಕ್ಷರು ರಾಜೀನಾಮೆ ಸಲ್ಲಿಸಿದ್ದಾರೆ. ಪಂಜಾಬ್​​ನಲ್ಲಿ ಕಾಂಗ್ರೆಸ್​ ಸೋಲಲು ನವಜೋತ್​ ಸಿಂಗ್ ಸಿಧು ಅವರೇ ಕಾರಣ ಎಂದು ರಾಜಕೀಯ ತಜ್ಞರು ವಿಶ್ಲೇಷಣೆ ಮಾಡುತ್ತಿದ್ದಾರೆ. ಆದರೆ ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದ ಸಿಧು, ತಮ್ಮ ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿಯವರಿಗೆ ಸಲ್ಲಿಸಿ, ಆಪ್​ ಪಕ್ಷವನ್ನು ಹೊಗಳುತ್ತಿದ್ದಾರೆ.

ಇದನ್ನೂ ಓದಿ: Hijab: ಹಿಜಾಬ್ ತೀರ್ಪು ವಿರೋಧಿಸಿ ಕರ್ನಾಟಕ ಬಂದ್​ ಕರೆಗೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ

Published On - 1:16 pm, Thu, 17 March 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್