AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SC ST ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟ: ಯಾರ್ಯಾರು ಏನಂದ್ರು?

ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿ ಸರ್ಕಾರ ಎಸ್ಸಿ ಸಮುದಾಯಕ್ಕೆ ಶುಕ್ರವಾರ ಭರ್ಜರಿ ಗಿಫ್ಟ್​​ ನೀಡಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟಿಸಿದೆ.

SC ST ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟ: ಯಾರ್ಯಾರು ಏನಂದ್ರು?
ಮೀಸಲಾತಿ ಹೆಚ್ಚಳ ಕೇವಲ ಬಿಜೆಪಿಯ ಕಣ್ಣೊರೆಸುವ ತಂತ್ರ ಎಂಬ ಪ್ರಚಾರ ಮೀಸಲಾತಿ ಹೆಚ್ಚಳ ಕೇವಲ ಬಿಜೆಪಿಯ ಕಣ್ಣೊರೆಸುವ ತಂತ್ರ ಎಂಬ ಪ್ರಚಾರ(ಮುಸಲ್ಮಾನ್ ಮೀಸಲಾತಿಯನ್ನು ಪುನರ್ ಸ್ಥಾಪಿಸುವ ಚಿಂತನೆ)Image Credit source: theleaflet.in
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 24, 2023 | 9:15 PM

ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿ ಸರ್ಕಾರ ಎಸ್ಸಿ ಸಮುದಾಯಕ್ಕೆ ಶುಕ್ರವಾರ ಭರ್ಜರಿ ಗಿಫ್ಟ್​​ ನೀಡಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ (reservation) ಪ್ರಕಟಿಸಿದೆ. ಇಂದು ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು, ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಇದಕ್ಕಾಗಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಆದರೆ ಅವರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಲಾಗಿದೆ. ಈ ಮೂಲಕ ಚುನಾವಣೆ ಸಂದರ್ಭದಲ್ಲಿ ಎರಡು ಬೃಹತ್ ಸಮುದಾಯಗಳನ್ನು ಸೆಳೆಯುವ ತಂತ್ರಗಾರಿಕೆಯನ್ನು ಸರ್ಕಾರ ಮಾಡಿದೆ. ಮೀಸಲಾತಿ ಕುರಿತಾಗಿ ರಾಜಕೀಯ ನಾಯಕರುಗಳು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು ಹೀಗೆ.

ಎಲ್ಲರಿಗೂ ನ್ಯಾಯ ನೀಡುವ ಕೆಲಸ ಮಾಡಿದ್ದು ಕ್ರಾಂತಿಕಾರಿ‌ ನಿರ್ಧಾರ: ಸಿ.ಟಿ.ರವಿ 

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ಸಂಪುಟ ಸಭೆ ಇಂದು ಕ್ರಾಂತಿಕಾರಿ ನಿಲುವು ತೆಗೆದುಕೊಂಡಿದೆ. ಎಲ್ಲಾ ವರ್ಗಗಳಿಗೂ ನ್ಯಾಯ ಕಲ್ಪಿಸುವ ಕೆಲಸ ಮಾಡಿದ್ದಾರೆ. ಸರ್ಕಾರ ಇಂದು ಒಳ ಮೀಸಲಾತಿ ಜಾರಿಗೆ ತಂದಿದೆ. ಒಳ ಮೀಸಲಾತಿ ಬಗ್ಗೆ ಕಾಂಗ್ರೆಸ್, ಜೆಡಿಎಸ್​ನಿಂದ​ ಮೂಗಿಗೆ ತುಪ್ಪ ಹಚ್ಚುತ್ತಿದ್ದವು. ಮತೀಯ ಆಧಾರದಲ್ಲಿ ನೀಡುತ್ತಿದ್ದ ಮೀಸಲಾತಿಯನ್ನು ಆಂಧ್ರಪ್ರದೇಶದಲ್ಲಿ ಕೋರ್ಟ್​​ ರದ್ದುಗೊಳಿಸಿತ್ತು.

ಇದನ್ನೂ ಓದಿ: Cabinet Decision: ಮುಸ್ಲಿಮರ 2ಬಿ ಮೀಸಲಾತಿ ರದ್ದು, ಒಕ್ಕಲಿಗ, ಲಿಂಗಾಯತರಿಗೆ ಹೆಚ್ಚಳ; ಸಿಎಂ ಬೊಮ್ಮಾಯಿ ಘೋಷಣೆ

ಇಲ್ಲಿ ಯಾರೂ ಕೋರ್ಟ್​​ಗೆ ಹೋಗದಿದ್ದಕ್ಕೆ ಮೀಸಲಾತಿ ಹಾಗೇ ಇತ್ತು. ಡಾ. ಅಂಬೇಡ್ಕರ್ ಮತೀಯ ಆಧಾರದ ಮೀಸಲಾತಿ ಬೇಡ ಅಂದಿದ್ದರು. ಮತೀಯ ಆಧಾರದಲ್ಲಿ ಮೀಸಲಾತಿ ನೀಡುವುದಕ್ಕೆ ವಿರೋಧಿಸಿದ್ದರು. ಆದರೂ 1994ರಲ್ಲಿ ಮತೀಯ ಮೀಸಲಾತಿ ನೀಡಲಾಗಿತ್ತು. ಈಗ EWS​ನಲ್ಲಿ ಮುಸ್ಲಿಮರನ್ನು ಸೇರಿಸಿರುವುದನ್ನು ಸ್ವಾಗತಿಸುತ್ತೇನೆ. ಎಲ್ಲರಿಗೂ ನ್ಯಾಯ ನೀಡುವ ಕೆಲಸ ಮಾಡಿದ್ದು ಕ್ರಾಂತಿಕಾರಿ‌ ನಿರ್ಧಾರ ಎಂದು ಹೇಳಿದರು.

ಆದಷ್ಟು ಬೇಗ ಮೀಸಲಾತಿ ಬಳಕೆಗೆ ಅವಕಾಶ ಮಾಡಿಕೊಡಬೇಕು: ನಿರ್ಮಲಾನಂದನಾಥಶ್ರೀ 

ಟಿವಿ9ಗೆ ಆದಿಚುಂಚನಗಿರಿ ಪೀಠಾಧಿಪತಿ ನಿರ್ಮಲಾನಂದನಾಥಶ್ರೀ ಹೇಳಿಕೆ ನೀಡಿದ್ದು, 2ಸಿ ಅಡಿ ಒಕ್ಕಲಿಗರಿಗೆ ಶೇ.6ರಷ್ಟು ಮೀಸಲಾತಿ ನೀಡಿದ್ದನ್ನು ಸ್ವಾಗತಿಸುವೆ. ಜನಸಂಖ್ಯೆಗೆ ಅನುಗುಣವಾಗಿ ಶೇಕಡಾ 12ರಷ್ಟು ಮೀಸಲಾತಿ ಬೇಕಿತ್ತು. ಆದರೆ ಸರ್ಕಾರ 2ಸಿ ಅಡಿ ಶೇಕಡಾ 6ರಷ್ಟು ಮೀಸಲಾತಿ ನೀಡಿದೆ. ಶೇಕಡಾ 2ರಷ್ಟು ಮೀಸಲಾತಿ ಪ್ರಮಾಣ ಹೆಚ್ಚಿಸಿದ್ದನ್ನು ಸ್ವಾಗತಿಸುತ್ತೇವೆ. ಕಾನೂನು, ಸಂವಿಧಾನದ ಚೌಕಟ್ಟಿನಲ್ಲಿ ಸರ್ಕಾರ ಕ್ರಮಕೈಗೊಂಡಿದೆ. ಆದಷ್ಟು ಬೇಗ ಮೀಸಲಾತಿ ಬಳಕೆಗೆ ಅವಕಾಶ ಮಾಡಿಕೊಡಬೇಕು ಎಂದರು.

ಇದನ್ನೂ ಓದಿ: ಸಾಗರದಲ್ಲಿ ಭದ್ರತೆಯನ್ನು ಬಲಪಡಿಸುವ ಅಗತ್ಯವಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಿಸಿದ ಶಾಸಕ ಅರವಿಂದ ಬೆಲ್ಲದ್

ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿದ್ದು, ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿರುವುದು ಸಂತಸದ ವಿಚಾರ. ಎಲ್ಲರಿಗೂ ನ್ಯಾಯ ಕೊಡುವ ರೀತಿಯಲ್ಲಿ ಬೊಮ್ಮಾಯಿ ಸರ್ಕಾರ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಪಂಚಮಸಾಲಿ ಹೋರಾಟಕ್ಕೆ ಶ್ರಮಿಸಿದ ಸ್ವಾಮೀಜಿಗೆ ಅಭಿನಂದನೆ. ಸರ್ಕಾರದ ಮೀಸಲಾತಿ ನಿರ್ಧಾರ ಪಂಚಮಸಾಲಿ ಒಪ್ಪಿಕೊಳ್ಳುತ್ತದೆ. ಸಮುದಾಯಕ್ಕೆ ಆಗಿದ್ದ ಅನ್ಯಾಯ ಸರಿಪಡಿಸಲು ಅವಕಾಶವಾಗುತ್ತೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:15 pm, Fri, 24 March 23

ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ‘10000 ಗವಾಸ್ಕರ್’ ಬೋರ್ಡ್ ರೂಂ ಉದ್ಘಾಟನೆ
ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ‘10000 ಗವಾಸ್ಕರ್’ ಬೋರ್ಡ್ ರೂಂ ಉದ್ಘಾಟನೆ
ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಇಂಡಿಯಾ ಮೈತ್ರಿಕೂಟ ದುರ್ಬಲವಾಗಿದೆ: ಪಿ ಚಿದಂಬರಂ ಕಳವಳ
ಇಂಡಿಯಾ ಮೈತ್ರಿಕೂಟ ದುರ್ಬಲವಾಗಿದೆ: ಪಿ ಚಿದಂಬರಂ ಕಳವಳ
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ