AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್​ ಸಭಾನಾಯಕರನ್ನಾಗಿ ಎನ್​ಎಸ್​​ ಬೋಸರಾಜು ನೇಮಕ: ಸರ್ಕಾರ ಆದೇಶ

ವಿಧಾನ ಪರಿಷತ್ತಿನ ಸಭಾನಾಯಕರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್​ಎಸ್​ ಬೋಸರಾಜು ಅವರನ್ನು ಸರ್ಕಾರ ಸೋಮವಾರ ನಾಮನಿರ್ದೇಶನ ಮಾಡಿದೆ.

ವಿಧಾನ ಪರಿಷತ್​ ಸಭಾನಾಯಕರನ್ನಾಗಿ ಎನ್​ಎಸ್​​ ಬೋಸರಾಜು ನೇಮಕ: ಸರ್ಕಾರ ಆದೇಶ
ಎನ್​ಎಸ್​​ ಬೋಸರಾಜು
TV9 Web
| Edited By: |

Updated on:Jul 03, 2023 | 8:09 PM

Share

ಬೆಂಗಳೂರು: ವಿಧಾನ ಪರಿಷತ್ತಿನ ಸಭಾನಾಯಕರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್​ಎಸ್​ ಬೋಸರಾಜು (NS boseraju) ಅವರನ್ನು ಸರ್ಕಾರ ಸೋಮವಾರ ನಾಮನಿರ್ದೇಶನ ಮಾಡಿದೆ. ಈ ಕುರಿತು ಸೂಕ್ತ ವಿಧಿ ವಿಧಾನಗಳನ್ನು ಅನುಸರಿಸುವಂತೆ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಇತ್ತೀತ್ತಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸಿದ ಬಳಿಕ ವಿಧಾನಸಭೆ ಹಾಗೂ ಪರಿಷತ್‌ ಸದಸ್ಯರಲ್ಲದ ಎನ್​ಎಸ್​ ಬೋಸರಾಜು ಅವರಿಗೆ ಸಚಿವ ಸ್ಥಾನ ಲಭಿಸಿತ್ತು.

ರಾಹುಲ್ ಗಾಂಧೀ ಅವರೇ ಬೋಸರಾಜ್ ಜೊತೆ ಮಾತುಕತೆ ನಡೆಸಿ, ಸರ್ಕಾರ ಬಂದರೆ ಎಂಎಲ್​ಸಿ ಮಾಡಿ ಪ್ರಮುಖ ಹುದ್ದೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆಯೇ ಬೋಸರಾಜ್​ಗೆ ಮಂತ್ರಿ ಸ್ಥಾನ ಒಲಿದುಬಂದಿತ್ತು.

ಇದನ್ನೂ ಓದಿ: ವೈಎಸ್​ಟಿ ಜೊತೆಗೆ ಪೇಸಿಎಂ, ಪೇ ಸೋನಿಯಾ, ಪೇ ವೇಣುಗೋಪಾಲ್ ಇದೆ: ಬಿಜೆಪಿ ಶಾಸಕ ಯತ್ನಾಳ್

ಎನ್​ಎಸ್​ ಬೋಸರಾಜು ಅವರು ಕಾಂಗ್ರೆಸ್​ ಪಕ್ಷಕ್ಕಾಗಿ ಮೊದಲಿನಿಂದಲ್ಲೂ ಸಾಕಷ್ಟು ದುಡಿದಿದ್ದಾರೆ. ಜೊತೆಗೆ ಹೈಕಮಾಂಡ್​ ಜೊತೆ ಒಳ್ಳೆಯ ಸಂಪರ್ಕವನ್ನು ಹೊಂದಿದ್ದೇ ಅವರಿಗೆ ಸಚಿವ ಸ್ಥಾನ ಸಿಗಲು ಕಾರಣ ಎಂಬ ಮಾತುಗಳು ಸಹ ಕೇಳಿಬಂದಿದ್ದವು.

ಇದನ್ನೂ ಓದಿ: ರಾಜ್ಯದ ಇತಿಹಾಸದಲ್ಲಿ ವಿಪಕ್ಷ ನಾಯಕನಿಲ್ಲದೆ ಮೊದಲ ಅಧಿವೇಶನ: ಇದು ದುರ್ದೈವ ಎಂದ ಸಚಿವ ಹೆಚ್​ಕೆ ಪಾಟೀಲ್

ಸಚಿವ ಸಂಭವನೀಯರ ಪಟ್ಟಿಯಲ್ಲಿ ಬೋಸರಾಜ್ ಅವರ ಹೆಸರು ಬಂದಾಗ ರಾಯಚೂರಿನ ಕಾಂಗ್ರೆಸ್​ನಲ್ಲಿ ಅಮಾಧಾನ ಸ್ಫೋಟಗೊಂಡಿತ್ತು. ಯಾವುದೇ ಕಾರಣಕ್ಕೂ ಬೋಸರಾಜ್ ಅವರಿಗೆ ಸಚಿವ ಸ್ಥಾನ ನೀಡಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:17 pm, Mon, 3 July 23

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ