AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್​ ಸಭಾನಾಯಕರನ್ನಾಗಿ ಎನ್​ಎಸ್​​ ಬೋಸರಾಜು ನೇಮಕ: ಸರ್ಕಾರ ಆದೇಶ

ವಿಧಾನ ಪರಿಷತ್ತಿನ ಸಭಾನಾಯಕರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್​ಎಸ್​ ಬೋಸರಾಜು ಅವರನ್ನು ಸರ್ಕಾರ ಸೋಮವಾರ ನಾಮನಿರ್ದೇಶನ ಮಾಡಿದೆ.

ವಿಧಾನ ಪರಿಷತ್​ ಸಭಾನಾಯಕರನ್ನಾಗಿ ಎನ್​ಎಸ್​​ ಬೋಸರಾಜು ನೇಮಕ: ಸರ್ಕಾರ ಆದೇಶ
ಎನ್​ಎಸ್​​ ಬೋಸರಾಜು
TV9 Web
| Edited By: |

Updated on:Jul 03, 2023 | 8:09 PM

Share

ಬೆಂಗಳೂರು: ವಿಧಾನ ಪರಿಷತ್ತಿನ ಸಭಾನಾಯಕರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್​ಎಸ್​ ಬೋಸರಾಜು (NS boseraju) ಅವರನ್ನು ಸರ್ಕಾರ ಸೋಮವಾರ ನಾಮನಿರ್ದೇಶನ ಮಾಡಿದೆ. ಈ ಕುರಿತು ಸೂಕ್ತ ವಿಧಿ ವಿಧಾನಗಳನ್ನು ಅನುಸರಿಸುವಂತೆ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಇತ್ತೀತ್ತಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸಿದ ಬಳಿಕ ವಿಧಾನಸಭೆ ಹಾಗೂ ಪರಿಷತ್‌ ಸದಸ್ಯರಲ್ಲದ ಎನ್​ಎಸ್​ ಬೋಸರಾಜು ಅವರಿಗೆ ಸಚಿವ ಸ್ಥಾನ ಲಭಿಸಿತ್ತು.

ರಾಹುಲ್ ಗಾಂಧೀ ಅವರೇ ಬೋಸರಾಜ್ ಜೊತೆ ಮಾತುಕತೆ ನಡೆಸಿ, ಸರ್ಕಾರ ಬಂದರೆ ಎಂಎಲ್​ಸಿ ಮಾಡಿ ಪ್ರಮುಖ ಹುದ್ದೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆಯೇ ಬೋಸರಾಜ್​ಗೆ ಮಂತ್ರಿ ಸ್ಥಾನ ಒಲಿದುಬಂದಿತ್ತು.

ಇದನ್ನೂ ಓದಿ: ವೈಎಸ್​ಟಿ ಜೊತೆಗೆ ಪೇಸಿಎಂ, ಪೇ ಸೋನಿಯಾ, ಪೇ ವೇಣುಗೋಪಾಲ್ ಇದೆ: ಬಿಜೆಪಿ ಶಾಸಕ ಯತ್ನಾಳ್

ಎನ್​ಎಸ್​ ಬೋಸರಾಜು ಅವರು ಕಾಂಗ್ರೆಸ್​ ಪಕ್ಷಕ್ಕಾಗಿ ಮೊದಲಿನಿಂದಲ್ಲೂ ಸಾಕಷ್ಟು ದುಡಿದಿದ್ದಾರೆ. ಜೊತೆಗೆ ಹೈಕಮಾಂಡ್​ ಜೊತೆ ಒಳ್ಳೆಯ ಸಂಪರ್ಕವನ್ನು ಹೊಂದಿದ್ದೇ ಅವರಿಗೆ ಸಚಿವ ಸ್ಥಾನ ಸಿಗಲು ಕಾರಣ ಎಂಬ ಮಾತುಗಳು ಸಹ ಕೇಳಿಬಂದಿದ್ದವು.

ಇದನ್ನೂ ಓದಿ: ರಾಜ್ಯದ ಇತಿಹಾಸದಲ್ಲಿ ವಿಪಕ್ಷ ನಾಯಕನಿಲ್ಲದೆ ಮೊದಲ ಅಧಿವೇಶನ: ಇದು ದುರ್ದೈವ ಎಂದ ಸಚಿವ ಹೆಚ್​ಕೆ ಪಾಟೀಲ್

ಸಚಿವ ಸಂಭವನೀಯರ ಪಟ್ಟಿಯಲ್ಲಿ ಬೋಸರಾಜ್ ಅವರ ಹೆಸರು ಬಂದಾಗ ರಾಯಚೂರಿನ ಕಾಂಗ್ರೆಸ್​ನಲ್ಲಿ ಅಮಾಧಾನ ಸ್ಫೋಟಗೊಂಡಿತ್ತು. ಯಾವುದೇ ಕಾರಣಕ್ಕೂ ಬೋಸರಾಜ್ ಅವರಿಗೆ ಸಚಿವ ಸ್ಥಾನ ನೀಡಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:17 pm, Mon, 3 July 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?