AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವರಿಗೆ ಮಾತನಾಡುವ ಚಟ; ಕೆಎಸ್ ಈಶ್ವರಪ್ಪ ವಿರುದ್ಧ ಶಾಸಕ ಶಿವರಾಮ್ ಹೆಬ್ಬಾರ್​ ಆಕ್ರೋಶ

ಈಶ್ವರಪ್ಪ ಅವರಂಥ ಕೆಲಸ ಮಾಡಿಲ್ಲ, ಮಾಡುವುದೂ ಇಲ್ಲ. ಆರೋಗ್ಯದ ದೃಷ್ಟಿಯಿಂದ ಒಳ್ಳೆ ಶಬ್ದ ಬಳಸಿ ಮಾತನಾಡಲಿ ಎಂದು ಹೆಬ್ಬಾರ್ ಎಚ್ಚರಿಕೆ ನೀಡಿದ್ದಾರೆ.

ಕೆಲವರಿಗೆ ಮಾತನಾಡುವ ಚಟ; ಕೆಎಸ್ ಈಶ್ವರಪ್ಪ ವಿರುದ್ಧ ಶಾಸಕ ಶಿವರಾಮ್ ಹೆಬ್ಬಾರ್​ ಆಕ್ರೋಶ
ಶಿವರಾಮ್ ಹೆಬ್ಬಾರ್
TV9 Web
| Edited By: |

Updated on: Jun 30, 2023 | 7:19 PM

Share

ಕಾರವಾರ: ಕೆಲವರಿಗೆ ಮಾತನಾಡುವ ಚಟ. ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಮತ್ತೊಬ್ಬರ ಮೇಲೆ ಆರೋಪ ಮಾಡುತ್ತಾರೆ ಎಂದು ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ (Arbail Shivaram Hebbar) ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಲಸಿಗರಿಂದ ಬಿಜೆಪಿಗೆ ಹಿನ್ನಡೆಯಾಗಿದೆ ಎಂಬ ಈಶ್ವರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪ ಅವರಿಗೆ ಟಿಕೆಟ್​ ನೀಡದಿರುವುದಕ್ಕೆ ನಾವು ಕಾರಣವಲ್ಲ. ಅವರು ಯಾರಿಂದ ಸಚಿವರಾಗಿದ್ದರು ಎಂಬುದು ಗೊತ್ತಿದೆ. ಯಾರ ಕಾರಣಕ್ಕೆ ಮಂತ್ರಿಗಿರಿ ಕಳೆದುಕೊಂಡರು ಎಂಬುದೂ ಗೊತ್ತಿದೆ ಎಂದು ಹೇಳಿದ್ದಾರೆ.

ಈಶ್ವರಪ್ಪ ಮಾತನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲ್ಲ. ನಾವು ನಡೆದುಬಂದ ದಾರಿ, ಮುಂದೆ ಹೋಗುವ ದಾರಿ ಸ್ಪಷ್ಟವಾಗಿದೆ. ಈಶ್ವರಪ್ಪ ಅವರಂಥ ಕೆಲಸ ಮಾಡಿಲ್ಲ, ಮಾಡುವುದೂ ಇಲ್ಲ. ಆರೋಗ್ಯದ ದೃಷ್ಟಿಯಿಂದ ಒಳ್ಳೆ ಶಬ್ದ ಬಳಸಿ ಮಾತನಾಡಲಿ ಎಂದು ಹೆಬ್ಬಾರ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಆಪರೇಶನ್ ಕಮಲವೇ ಬಿಜೆಪಿ ಸೋಲಿಗೆ ಕಾರಣ ಎಂದ ಈಶ್ವರಪ್ಪ; ಸಿಟಿ ರವಿ, ರವಿ ಕುಮಾರ್ ಹೇಳಿದ್ದೇನು ಗೊತ್ತಾ?

ಬಿಜೆಪಿಯಲ್ಲಿ ಶಿಸ್ತು ಇಲ್ಲವಾಗಿದೆ. ಕಾಂಗ್ರೆಸ್​ನವರ ಗಾಳಿ ಬಿಜೆಪಿ ನಾಯಕರ ಮೇಲೂ ಬಡಿದಿದೆ. ಆಪರೇಷನ್ ಕಮಲವೇ ಬಿಜೆಪಿ ಚುನಾವಣೆಯಲ್ಲಿ ಸೋಲಲು ಕಾರಣವಾಯಿತು. ಬೇರೆ ಪಕ್ಷಗಳಿಂದ ಬಂದವರಿಂದಲೇ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ಈಶ್ವರಪ್ಪ ಹೇಳಿದ್ದರು. ಇದು ಈಗಾಗಲೇ ಆಂತರಿಕ ಬೇಗುದಿಯಲ್ಲಿ ಬಳಲುತ್ತಿರುವ ಬಿಜೆಪಿಯ ಸಂಕಷ್ಟದ ಬೆಂಕಿಗೆ ತುಪ್ಪ ಸುರಿದಿತ್ತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?