AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಸವರಾಜ ಬೊಮ್ಮಾಯಿ ಮೇಲೆ ಒಂದು ರೂಪಾಯಿ ಭ್ರಷ್ಟಾಚಾರ ಆರೋಪವಿಲ್ಲ; ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ’

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ, ಅದೆಲ್ಲ ಸುಳ್ಳು ಸುದ್ದಿ. 150ಕ್ಕೂ ಹೆಚ್ಚು ಸ್ಥಾನಗಳನ್ನ ಗೆದ್ದು ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಬಸವರಾಜ ಬೊಮ್ಮಾಯಿ ಮೇಲೆ ಒಂದು ರೂಪಾಯಿ ಭ್ರಷ್ಟಾಚಾರ ಆರೋಪವಿಲ್ಲ; ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ’
ಅರುಣ್ ಸಿಂಗ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 27, 2021 | 9:05 PM

Share

ಹುಬ್ಬಳ್ಳಿ: ಕರ್ನಾಟಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸ್ತೇವೆ. ಬೊಮ್ಮಾಯಿ ಅತ್ಯಂತ ಪ್ರಾಮಾಣಿಕತೆಯಿಂದ ಕೆಲಸ ಮಾಡ್ತಿದ್ದಾರೆ. ಅವರ ಮೇಲೆ ಒಂದೇ ಒಂದು ರೂಪಾಯಿ ಭ್ರಷ್ಟಾಚಾರ ಆರೋಪವಿಲ್ಲ ಎಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ, ಅದೆಲ್ಲ ಸುಳ್ಳು ಸುದ್ದಿ. 150ಕ್ಕೂ ಹೆಚ್ಚು ಸ್ಥಾನಗಳನ್ನ ಗೆದ್ದು ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮಿಸ್ತಿಲ್ಲ. ಹುಬ್ಬಳ್ಳಿಯಲ್ಲಿ ನಾಳೆ, ನಾಡಿದ್ದು ಬಿಜೆಪಿ ಕಾರ್ಯಕಾರಿಣಿ ಸಭೆಯಿದೆ. ಸರ್ಕಾರದಿಂದ ಹೊಸ ಕೊವಿಡ್ ಮಾರ್ಗಸೂಚಿ ಬಿಡುಗಡೆ ಹಿನ್ನೆಲೆ ರಾಜ್ಯ ಸರ್ಕಾರದ ನಿಯಮದಂತೆ 300ಕ್ಕಿಂತ ಹೆಚ್ಚು ಸೇರುವಂತಿಲ್ಲ. ಹಾಗಾಗಿ ನಡ್ಡಾ ಸ್ವಾಗತಕ್ಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ಅರುಣ್ ಸಿಂಗ್ ತಿಳಿಸಿದ್ದಾರೆ.

ಕೊರೊನಾ ತಡೆಗೆ ಎಲ್ಲಾ ಕ್ರಮ ನಾವು ಮಾಡಿಕೊಂಡಿದ್ದೇವೆ: ಸಿಎಂ ಬೊಮ್ಮಾಯಿ ಇದೊಂದು ಹೃದಯಸ್ಪರ್ಶಿ ಕಾರ್ಯಕ್ರಮ. ಒಂದು ಮನೆಯಲ್ಲಿ ಕುಟುಂಬ ಸದಸ್ಯರು ಅಗಲಿದಾಗ ಆ ನೋವು ಬಹಳ ವರ್ಷಗಳವರೆಗೂ ಕಾಡುತ್ತಿರುತ್ತದೆ. ಈ ರೀತಿ ಮಹಾಮಾರಿಯಿಂದ ಆರೋಗ್ಯವಾಗಿದ್ದವರು ಕೆಲವೇ ದಿನಗಳಲ್ಲಿ‌ ನಿಧನರಾದಗ ನೋವು ಭರಿಸಲು ಆಗುವುದಿಲ್ಲ. ಕೊವಿಡ್ ಸಾಕಷ್ಟು ಕುಟುಂಬವನ್ನು ಅನಾಥ, ತಬ್ಬಲಿಯನ್ನಾಗಿ ಮಾಡಿದೆ. ಹಿಂದೆ ಪ್ಲೇಗ್, ಕಾಲರಾ ಬಗ್ಗೆ ಕೇಳಿದ್ವಿ ಆದರೆ ನಮ್ಮ ಕಾಲದಲ್ಲಿ ಬರುತ್ತೆ ಅಂತ ಊಹಿಸಿರಲಿಲ್ಲ. ಬೇರೆ ರಾಜ್ಯ, ದೇಶ ಹೋಲಿಸಿದರೆ ಅತಿ ಹೆಚ್ಚು ಜನಸಂಖ್ಯೆ ಇರುವ ಭಾರತದಲ್ಲಿ ಕೊರೋನಾ ನಿರ್ವಹಿಸಿರುವುದು ವಿಶ್ವದಾಖಲೆ ಆಗಿದೆ ಎಂದು ಕೊರೊನಾದಿಂದ ಮೃತಪಟ್ಟವರಿಗರ ಪರಿಹಾರ ವಿತರಣೆಯ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಧಿಕಾರಿಗಳು, ಸಂಘಟನೆ, ಸಮಾಜ, ಪ್ರಧಾನಿ ಮೋದಿಯವರ ಸಹಕಾರದಿಂದ ಯಶಸ್ವಿಯಾಗಿ ಕೊರೊನಾ ಎದುರಿಸಿದ್ದೇವೆ. ಇಷ್ಟು ದೊಡ್ಡ ಜನಸಂಖ್ಯೆಗೆ ಪ್ರಚಾರ ಅಪಪ್ರಚಾರದ ನಡುವೆ ವ್ಯಾಕ್ಸಿನ್ ಕೊಡಬೇಕಾ ಬೇಡವಾ ಎಂಬ ಚರ್ಚೆ ಇತ್ತು. ಇಂದು ರಾಜ್ಯದಲ್ಲಿ 4 ಕೋಟಿಗಿಂತ ಹೆಚ್ಚು ಮೊದಲ ಡೋಸ್ ಕೊಟ್ಟಿದ್ದೇವೆ. ರಾಜ್ಯದಲ್ಲಿ ಶೇ.97 ರಷ್ಟು ಮೊದಲ ಡೋಸ್ ವ್ಯಾಕ್ಸಿನೇಷನ್ ಆಗಿದೆ. ಶೇ.76 ರಷ್ಟು ಎರಡನೇ ಡೋಸ್ ಆಗಿದೆ. ಹಳ್ಳಿಯಲ್ಲಿ ಜನರಿಗೆ ಹಿಂಜರಿತವಿದೆ ಅವರಿಗೂ ಮನೆಮನೆಗೆ ಹೋಗಿ ಲಸಿಕೆ ಕೊಡುವ ಕೆಲಸವಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತರ ಮಾತನ್ನ ಗೌರವದಿಂದ ಕೇಳುವ ಸರ್ಕಾರ ಇದು: ಮೈಸೂರಿನ ರೈತ ಸಮಾವೇಶದಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ

ಇದನ್ನೂ ಓದಿ: Bengaluru: ಸಮಗ್ರ ಅಭಿವೃದ್ಧಿಗೆ ರೋಡ್ ಮ್ಯಾಪ್ ಮಾಡಿ ಹಣ ಬಿಡುಗಡೆ ಮಾಡಲಾಗುವುದು: ಬಸವರಾಜ ಬೊಮ್ಮಾಯಿ

Published On - 9:03 pm, Mon, 27 December 21

Follow Us
ಎಂ.ಬಿ. ಪಾಟೀಲ್‌ ವಿರುದ್ಧ ಮಾನಹಾನಿ ಮೊಕದ್ದಮೆ ಎಚ್ಚರಿಕೆ ಕೊಟ್ಟ ನಿಖಿಲ್​
ಎಂ.ಬಿ. ಪಾಟೀಲ್‌ ವಿರುದ್ಧ ಮಾನಹಾನಿ ಮೊಕದ್ದಮೆ ಎಚ್ಚರಿಕೆ ಕೊಟ್ಟ ನಿಖಿಲ್​
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ