AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಸಮಾಧಾನ ಹೊರಹಾಕಿ, ಎಚ್ಚರಿಕೆ ನೀಡಿದ ಅರುಣ್ ಸಿಂಗ್!

ರಾಜಕೀಯವಾಗಿ ವಿಷಯಾಧಾರಿತ ಸಮರ್ಥನೆ ಮಾಡಿಕೊಳ್ಳಬೇಕು. ಮಾಧ್ಯಮದಲ್ಲಿ ವಿಷಯಾಧಾರಿತ ಸಮರ್ಥನೆ ಮಾಡಿಕೊಳ್ಳಬೇಕು. ಯಾವ ಸಚಿವರು ಬರುವುದಿಲ್ಲವೋ ಅವರ ಪಟ್ಟಿ ನನಗೆ ನೀಡಬೇಕು ಎಂದು ಸೂಚನೆ ನೀಡಿದರು.

ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಸಮಾಧಾನ ಹೊರಹಾಕಿ, ಎಚ್ಚರಿಕೆ ನೀಡಿದ ಅರುಣ್ ಸಿಂಗ್!
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
TV9 Web
| Edited By: |

Updated on:May 14, 2022 | 3:45 PM

Share

ಬೆಂಗಳೂರು: ಪರಿಷತ್, ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸೇರಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಇಂದು ಮಧ್ಯಾಹ್ನ ರಾಜ್ಯ ಬಿಜೆಪಿ ಕೋರ್ ಕಮಿಟಿ (BJP Core Committee) ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh) ನೇರವಾಗಿ ಸಮಧಾನ ಹೊರಹಾಕಿದ್ದಾರೆ. ಸಚಿವರು ಪಕ್ಷ, ಸರ್ಕಾರವನ್ನು ರಾಜಕೀಯವಾಗಿ ಯಾವೊಬ್ಬ ಸಚಿವರುಗಳು ಸಮರ್ಥಿಸಿಕೊಂಡಿಲ್ಲ. ಕೇವಲ ತಮ್ಮ ಇಲಾಖೆ ಬಗ್ಗೆ ಮಾತ್ರ ಹೇಳಿಕೊಂಡು ಕುಳಿತಿದ್ದಾರೆ ಎಂದು ಹೇಳಿದರು.

ಇನ್ನು ಮುಂದೆ ಹೀಗೆ ಮುಂದುವರಿಯದಂತೆ ಸಭೆಯಲ್ಲಿ ಎಚ್ಚರಿಕೆ ನೀಡಿದ ಅರುಣ್ ಸಿಂಗ್, ವಾರದಲ್ಲಿ 10 ಸಚಿವರು ಪಕ್ಷದ ಕಚೇರಿಗೆ ಬಂದು ಮಾತಾಡಬೇಕು. ರಾಜಕೀಯವಾಗಿ ವಿಷಯಾಧಾರಿತ ಸಮರ್ಥನೆ ಮಾಡಿಕೊಳ್ಳಬೇಕು. ಮಾಧ್ಯಮದಲ್ಲಿ ವಿಷಯಾಧಾರಿತ ಸಮರ್ಥನೆ ಮಾಡಿಕೊಳ್ಳಬೇಕು. ಯಾವ ಸಚಿವರು ಬರುವುದಿಲ್ಲವೋ ಅವರ ಪಟ್ಟಿ ನನಗೆ ನೀಡಬೇಕು ಎಂದು ಸೂಚನೆ ನೀಡಿದರು.

ಪರಿಷತ್​ ಸ್ಥಾನಕ್ಕೆ ವಿಜಯೇಂದ್ರ ಹೆಸರು- ಬೊಮ್ಮಾಯಿ: ಪರಿಷತ್​ ಸ್ಥಾನಕ್ಕೆ ವಿಜಯೇಂದ್ರ ಹೆಸರು ಶಿಫಾರಸಿಗೆ ನಿರ್ಧಾರ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಭೆ ಬಳಿಕ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿಜಯೇಂದ್ರ ಹೆಸರು ಪ್ರಸ್ತಾಪಿಸಿದ್ದರು.  ನಾವು ಹೆಸರು ಕಳಿಸುತ್ತೇವೆ, ಮೇಲಿನವರು ತೀರ್ಮಾನ ಮಾಡುತ್ತಾರೆ ಎಂದು ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ
Image
ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಸಮಾಧಾನ ಹೊರಹಾಕಿ, ಎಚ್ಚರಿಕೆ ನೀಡಿದ ಅರುಣ್ ಸಿಂಗ್!
Image
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!
Image
Ambati Rayudu: ನಿವೃತ್ತಿ ಘೋಷಿಸಿ, ಮನಸ್ಸು ಬದಲಿಸಿದ ಅಂಬಾಟಿ ರಾಯುಡು..!
Image
ಬಾಲ ಕಲಾವಿದನಾಗಿ ದೊಡ್ಡ ಯಶಸ್ಸು ಸಿಕ್ಕರೂ ಹೀರೋ ಆಗದಿರೋದೇಕೆ?; ಮಾಸ್ಟರ್ ಮಂಜುನಾಥ್ ಕೊಟ್ರು ಉತ್ತರ

ಐವರ ಹೆಸರನ್ನು ಶಿಫಾರಸು ಮಾಡಿದ ರಾಜ್ಯ ಬಿಜೆಪಿ ನಾಯಕರು: ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎಲ್ಲ ಸ್ಥಾನಗಳಿಗೂ ಐವರ ಹೆಸರು ಶಿಫಾರಸು ಮಾಡಲಾಗಿದೆ. ಪರಿಷತ್​ ಅಭ್ಯರ್ಥಿ ಸ್ಥಾನಕ್ಕೆ ಲಕ್ಷ್ಮಣ ಸವದಿ ಹೆಸರಿನ ಬಗ್ಗೆ ಚರ್ಚೆ ನಡೆದಿದೆ. ರಾಜ್ಯಸಭೆ 2 ಸ್ಥಾನಗಳಲ್ಲಿ ಮೊದಲ ಸ್ಥಾನಕ್ಕೆ ಹಾಲಿ ಸದಸ್ಯರಾದ ನಿರ್ಮಲಾ ಸೀತಾರಾಮನ್, ರಾಜ್ಯಸಭಾ 2ನೇ ಸ್ಥಾನಕ್ಕೆ ಹಾಲಿ ಸದಸ್ಯ ಕೆ.ಸಿ.ರಾಮಮೂರ್ತಿ, ನಿರ್ಮಲ್ ಕುಮಾರ್ ಸುರಾನಾ ಸೇರಿದಂತೆ ಐವರ ಹೆಸರು ಶಿಫಾರಸು ಮಾಡಲಾಗಿದೆ.

Published On - 3:01 pm, Sat, 14 May 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು