Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Bypoll Results 6 ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮೇಲುಗೈ

ತೆಲಂಗಾಣದಲ್ಲಿ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (TRS) ಮತ್ತು ಪ್ರತಿಸ್ಪರ್ಧಿ ಬಿಜೆಪಿ(BJP) ನಡುವೆ ನಿಕಟ ಸ್ಪರ್ಧೆ ಏರ್ಪಟ್ಟಿತು, ಆದರೆ ಅಂತಿಮವಾಗಿ ಕೆಸಿಆರ್ ಅವರ ಪಕ್ಷವು ಗೆಲುವು ಸಾಧಿಸಿತು.

Assembly Bypoll Results 6 ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮೇಲುಗೈ
ಬಿಜೆಪಿ ಸಂಭ್ರಮಾಚರಣೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Nov 06, 2022 | 10:07 PM

ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಇತ್ತೀಚೆಗೆ ಆರು ರಾಜ್ಯಗಳಲ್ಲಿ ನಡೆದ ಉಪಚುನಾವಣೆಯ(Assembly ByPolls) ಮತಗಳನ್ನು ಭಾನುವಾರ ಎಣಿಕೆ ಮಾಡಲಾಗಿದ್ದು, ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ. ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ, ಆರಂಭಿಕ ಟ್ರೆಂಡ್‌ಗಳು ಬಂದ ತಕ್ಷಣ ಆಡಳಿತಾರೂಢ ಬಿಜೆಪಿಯ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ತೆಲಂಗಾಣದಲ್ಲಿ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (TRS) ಮತ್ತು ಪ್ರತಿಸ್ಪರ್ಧಿ ಬಿಜೆಪಿ(BJP) ನಡುವೆ ನಿಕಟ ಸ್ಪರ್ಧೆ ಏರ್ಪಟ್ಟಿತು, ಆದರೆ ಅಂತಿಮವಾಗಿ ಕೆಸಿಆರ್ ಅವರ ಪಕ್ಷವು ಗೆಲುವು ಸಾಧಿಸಿತು. ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಬಿಜೆಪಿಯ ಕುಸುಮ್ ದೇವಿ ಜಯಗಳಿಸಿದ್ದರಿಂದ ಆರ್‌ಜೆಡಿ ಮೊಕಾಮಾ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಈ ವರ್ಷದ ಆರಂಭದಲ್ಲಿ ಸರ್ಕಾರ ಪತನದ ನಂತರ ನಡೆದ ಮೊದಲ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ತಂಡ ಮಹಾರಾಷ್ಟ್ರದಲ್ಲಿ ಗೆಲುವು ಕಂಡಿತು.

ಹರ್ಯಾಣ

ಹರ್ಯಾಣದ ಆದಂಪುರದಲ್ಲಿ ಬಿಜೆಪಿ ಅಭ್ಯರ್ಥಿ ಭವ್ಯಾ ಬಿಷ್ಣೋಯ್ – ಹರಿಯಾಣದ ಮಾಜಿ ಮುಖ್ಯಮಂತ್ರಿ ಭಜನ್ ಲಾಲ್ ಅವರ ಮೊಮ್ಮಗ ಮತ ಎಣಿಕೆ ಪ್ರಾರಂಭವಾದ ತಕ್ಷಣ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಷೇತ್ರವು ಸುಮಾರು ಐದು ದಶಕಗಳಿಂದ ಭಜನ್ ಲಾಲ್ ಮನೆತನದ ಭದ್ರಕೋಟೆಯಾಗಿದೆ. ಕಾಂಗ್ರೆಸ್‌ನ ಜಯ ಪ್ರಕಾಶ್ ಕಠಿಣ ಹೋರಾಟವನ್ನು ನೀಡಿದರೆ, ಅರವಿಂದ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು ಯಾವುದೇ ಪರಿಣಾಮ ಬೀರಲು ವಿಫಲವಾಗಿದೆ. ಭವ್ಯ ಬಿಷ್ಣೋಯ್ 16,000 ಮತಗಳ ಅಂತರದಿಂದ ಗೆದ್ದರು.

ತೆಲಂಗಾಣ

ಮುನುಗೋಡು ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಟಿಆರ್‌ಎಸ್‌ನ ಕುಸುಕುಂಟ್ಲ ಪ್ರಭಾಕರ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಟಿಆರ್‌ಎಸ್ ಅಭ್ಯರ್ಥಿ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಕೋಮಟಿರೆಡ್ಡಿ ರಾಜ್ ಗೋಪಾಲ್ ರೆಡ್ಡಿ ಅವರನ್ನು ಸೋಲಿಸಿದ್ದಾರೆ. ಇಲ್ಲಿ ಬಿಜೆಪಿ ಮತ್ತು ಟಿಆರ್‌ಎಸ್ ನಡುವೆ ಭಾರೀ ಪೈಪೋಟಿ ನಡೆದಿದೆ. ಉಪಚುನಾವಣೆ ಫಲಿತಾಂಶಕ್ಕೂ ಮುನ್ನ ರಾಜ್ಯವು ಎರಡು ಪಕ್ಷಗಳ ನಡುವೆ ತೀವ್ರ ಘರ್ಷಣೆಯನ್ನು ಕಂಡಿತು ಮತ್ತು ಶಾಸಕರ ಬೇಟೆ ವಿವಾದಕ್ಕೂ ಕಾರಣವಾಯಿತು. ಕಾಂಗ್ರೆಸ್‌ನ ಹಾಲಿ ಶಾಸಕ ಕೋಮಟಿರೆಡ್ಡಿ ರಾಜ್‌ಗೋಪಾಲ್‌ ರೆಡ್ಡಿ ಅವರು ಆಗಸ್ಟ್‌ನಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ಅನಿವಾರ್ಯವಾಗಿತ್ತು.

ಉತ್ತರ ಪ್ರದೇಶ

ಉತ್ತರ ಪ್ರದೇಶದ ಗೋಲ ಗೋಕರನಾಥ ಕ್ಷೇತ್ರದಲ್ಲಿ ಮತದಾನಕ್ಕೂ ಮುನ್ನ ಅಖಿಲೇಶ್ ಯಾದವ್ ಅವರು ಆಡಳಿತಾರೂಢ ಬಿಜೆಪಿ, ಕ್ಷೇತ್ರದ ಮತದಾರರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದರು. ಸಮಾಜವಾದಿ ಪಕ್ಷವು ಪಕ್ಷದ ಮಾಜಿ ಗೋಲಾ ಶಾಸಕ ವಿನಯ್ ತಿವಾರಿ ಅವರನ್ನು ಸೆಪ್ಟೆಂಬರ್ 6 ರಂದು ಹಾಲಿ ಬಿಜೆಪಿ ಶಾಸಕ ಅರವಿಂದ್ ಗಿರಿ ನಿಧನದ ನಂತರ ತೆರವಾದ ಸ್ಥಾನದಿಂದ ಕಣಕ್ಕಿಳಿಸಿದೆ. ಬಿಜೆಪಿ ಅಮನ್ ಗಿರಿ (ಅರವಿಂದ್ ಗಿರಿ ಅವರ ಪುತ್ರ) ಕಣಕ್ಕಿಳಿಸಿತ್ತು. ಅಮನ್ ಗಿರಿ ಇಲ್ಲಿ ಗೆಲುವು ಸಾಧಿಸಿದ್ದು ತಮ್ಮ ತಂದೆ ಅರವಿಂದ್ ಗಿರಿ ಅವರ ಗೆಲುವಿನ ಅಂತರವನ್ನು ಮೀರಿಸಿದ್ದಾರೆ.

ಬಿಹಾರ

ನಿತೀಶ್ ಕುಮಾರ್ ಬಿಜೆಪಿ ಜತೆ ಮೈತ್ರಿ ಮುರಿದುಕೊಂಡ ನಂತರ ಆಡಳಿತಾರೂಢ ಮಹಾಮೈತ್ರಿಕೂಟ ಮತ್ತು ಬಿಜೆಪಿ ನಡುವಿನ ಮೊದಲ ಚುನಾವಣಾ ಸ್ಪರ್ಧೆಯಲ್ಲಿ ಮೊಕಾಮಾ ಕ್ಷೇತ್ರದಲ್ಲಿ ಆರ್‌ಜೆಡಿಯ ನೀಲಮ್ ದೇವಿ ಗೆಲುವು ಸಾಧಿಸಿದರು. ಬಿಜೆಪಿಯ ಸೋನಂ ದೇವಿ ಅವರ ಹತ್ತಿರದ ಪ್ರತಿಸ್ಪರ್ಧಿಯಾಗಿದ್ದರು. “ನನ್ನ ಗೆಲುವು ನಿಶ್ಚಿತ. ನನ್ನ ಸ್ಪರ್ಧೆಯಲ್ಲಿ ಬೇರೆ ಯಾರೂ ಇಲ್ಲ ಎಂದು ನಾನು ಮೊದಲೇ ಹೇಳಿದ್ದೆ. ಇದು ಕೇವಲ ಔಪಚಾರಿಕತೆ. ಮೊಕಾಮಾ ಪರಶುರಾಮನ ಭೂಮಿ, ಜನರು ಆಮಿಷಕ್ಕೆ ಒಳಗಾಗುವುದಿಲ್ಲ. ವಿಧಾಯಕ್ ಜಿ (ಅನಂತ್ ಸಿಂಗ್) ಜನರ ಸೇವೆ ಮಾಡಿದರು. ಅವರು ಈಗ ಫಲಿತಾಂಶವನ್ನು ನೀಡುತ್ತಿದೆ, ”ಎಂದು ಗೆಲುವಿನನಂತರ ಮಾತನಾಡಿದ ನೀಲಮ್ ದೇವಿ ಹೇಳಿದ್ದಾರೆ. ಉಪಚುನಾವಣೆ ನಡೆದ ರಾಜ್ಯದ ಇನ್ನೊಂದು ಸ್ಥಾನ ಗೋಪಾಲಗಂಜ್. ಇಲ್ಲಿ ಬಿಜೆಪಿ ಅಭ್ಯರ್ಥಿ ಕುಸುಮ್ ದೇವಿ ಅವರು ಆರ್‌ಜೆಡಿಯ ಮೋಹನ್ ಪ್ರಸಾದ್ ಅವರನ್ನು ಸೋಲಿಸಿದ್ದಾರೆ.

ಮಹಾರಾಷ್ಟ್ರ

ಮುಂಬೈನ ಅಂಧೇರಿ-ಪೂರ್ವ ಉಪಚುನಾವಣೆ ಕೇವಲ ಔಪಚಾರಿಕವಾಗಿ ಕಂಡುಬಂದಿದೆ. ಉದ್ಧವ್ ಠಾಕ್ರೆ ಸರ್ಕಾರ ಪತನದ ನಂತರ ಮಹಾರಾಷ್ಟ್ರದಲ್ಲಿ ನಡೆದ ಮೊದಲ ಚುನಾವಣೆ ಇದಾಗಿದೆ. ಠಾಕ್ರೆ ಪಕ್ಷದ ಅಭ್ಯರ್ಥಿ ರುತುಜಾ ಲಟ್ಕೆ ಇಲ್ಲಿ ಗೆಲುವು ಸಾಧಿಸಿದ್ದಾರೆ. ಅವರ ಪತಿ ರಮೇಶ್ ಲಟ್ಕೆ ಅವರ ನಿಧನದ ನಂತರ ತೆರವಾದ ಸ್ಥಾನವಾಗಿತ್ತು ಇತ್ತು. ಪಕ್ಷದ ಸಂಪ್ರದಾಯಕ್ಕೆ ಅನುಗುಣವಾಗಿ ಆಕೆಯ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದು ಬಿಜೆಪಿ ಈ ಹಿಂದೆಯೇ ಹೇಳಿತ್ತು.

ಒಡಿಶಾ

ಧಾಮ್‌ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ 9,881 ಮತಗಳಿಂದ ಬಿಜೆಡಿಯನ್ನು ಸೋಲಿಸಿತು. ಬಿಜೆಪಿಯ ಸೂರ್ಯಬಂಶಿ ಸೂರಜ್ 80,351 ಮತಗಳನ್ನು ಪಡೆದರೆ, ಬಿಜೆಡಿಯ ಅಬಂತಿ ದಾಸ್ 70,470 ಮತಗಳನ್ನು ಪಡೆದರು.

ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ