AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Bypolls: 6 ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಮತ ಎಣಿಕೆ ಆರಂಭ

ಈ ಏಳು ಕ್ಷೇತ್ರಗಳ ಪೈಕಿ ಬಿಜೆಪಿ ಮೂರು, ಕಾಂಗ್ರೆಸ್ 2, ಶಿವಸೇನೆ ಮತ್ತು ಆರ್​ಜೆಡಿ ತಲಾ ಒಂದು ಕ್ಷೇತ್ರಗಳನ್ನು ಹೊಂದಿತ್ತು

Assembly Bypolls: 6 ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಮತ ಎಣಿಕೆ ಆರಂಭ
ಮತ ಎಣಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Nov 06, 2022 | 10:02 AM

Share

ದೆಹಲಿ: ಬಿಜೆಪಿ ಮತ್ತು ಇತರ ಪ್ರಾದೇಶಿಕ ಪಕ್ಷಗಳ ಜಿದ್ದಾಜಿದ್ದಿ ಪೈಪೋಟಿಗೆ ಸಾಕ್ಷಿಯಾಗಿರುವ 6 ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ (By polls) ಮತಎಣಿಕೆ ಇಂದು (ನ 6) ನಡೆಯಲಿದೆ. ಬಿಹಾರದ ಮೊಕಮಾ ಮತ್ತು ಗೋಪಾಲ್​ಗಂಜ್ ವಿಧಾನಸಭಾ ಕ್ಷೇತ್ರ, ಮಹಾರಾಷ್ಟ್ರದ ಅಂಧೇರಿ (ಪೂರ್ವ), ಹರಿಯಾಣದ ಅದಮ್​ಪುರ್, ತೆಲಂಗಾಣದ ಮುನುಗೋಡ್, ಉತ್ತರ ಪ್ರದೇಶದ ಗೋಲಾ ಗೋಕರ್ಣನಾಥ್ ಮತ್ತು ಒಡಿಶಾದ ಧಾಮ್​ನಗರ್ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಈ ಏಳು ಕ್ಷೇತ್ರಗಳ ಪೈಕಿ ಬಿಜೆಪಿ ಮೂರು, ಕಾಂಗ್ರೆಸ್ 2, ಶಿವಸೇನೆ ಮತ್ತು ಆರ್​ಜೆಡಿ ತಲಾ ಒಂದು ಕ್ಷೇತ್ರಗಳನ್ನು ಹೊಂದಿತ್ತು

ಉಪಚುನಾವಣೆಗಳ ಬಗ್ಗೆ ನೀವು ತಿಳಿಯಬೇಕಾದ ಅತಿಮುಖ್ಯ ಅಂಶಗಳಿವು…

ಅಂಧೇರಿ (ಪೂರ್ವ), ಮಹಾರಾಷ್ಟ್ರ

ಬಿಜೆಪಿಯು ಈ ಕ್ಷೇತ್ರವನ್ನು ಶಿವಸೇನೆಗೆ ಬಿಟ್ಟುಕೊಟ್ಟಿದೆ. ಶಿವಸೇನೆಯ ರುತುಜಾ ಲಾಟ್​ಕೆ ಈ ಕ್ಷೇತ್ರದಿಂದ ಆರಾಮಾಗಿ ಜಯಗಳಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದ ಉದ್ಧವ್ ಠಾಕ್ರೆ ಅವರನ್ನು ಕೆಳಗಿಳಿಸಿ, ಆ ಸ್ಥಾನಕ್ಕೆ ಏಕನಾಥ್ ಶಿಂಧೆ ಬಂದಿದ್ದಾರೆ. ಪ್ರಸ್ತುತ ಎರಡೂ ಬಣಗಳ ನಡುವೆ ಯಾರದು ನಿಜವಾದ ಶಿವಸೇನೆ ಎಂಬ ಹೋರಾಟ ನಡೆಯುತ್ತಿದೆ. ಎನ್​ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಇಲ್ಲಿ ಸ್ಪರ್ಧಿಸಿಲ್ಲ. ಮುಂಬೈ ಮಹಾನಗರ ಪಾಲಿಕೆಯು ದೇಶದ ಅತ್ಯಂತ ಶ್ರೀಮಂತ ಸ್ಥಳೀಯ ಆಡಳಿತ ಸಂಸ್ಥೆಯಾಗಿದ್ದು, ಎಲ್ಲ ಪಕ್ಷಗಳೂ ಇದರ ಮೇಲೆ ನಿಯಂತ್ರಣ ಸಾಧಿಸಲು ಹಾತೊರೆಯುತ್ತಿವೆ.

ಅದಮ್​ಪುರ್, ಹರಿಯಾಣ

ಕಳೆದ ಆಗಸ್ಟ್​ ತಿಂಗಳಲ್ಲಿ ಮಾಜಿ ಮುಖ್ಯಮಂತ್ರಿ ಭಜನ್​ಲಾಲ್​ರ ಕಿರಿಯ ಮಗ ಕುಲ್​ದೀಪ್ ಬಿಷ್ಣೋಯ್ ಕಾಂಗ್ರೆಸ್​ಗೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಅದಮ್​ಪುರ್ ಉಪ ಚುನಾವಣೆ ನಡೆಯುತ್ತಿದೆ. ಬಿಷ್ಣೋಯ್ ಅವರ ಮಗ ಭವ್ಯ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. 1968ರಿಂದಲೂ ಅಮ್​ಪುರ್ ಕ್ಷೇತ್ರವು ಭಜನ್​ಲಾಲ್ ಕುಟುಂಬದ ಸುಪರ್ದಿಯಲ್ಲಿಯೇ ಇದೆ. ದಿವಂಗತ ಮಾಜಿ ಮುಖ್ಯಮಂತ್ರಿಯು ಒಟ್ಟು 9 ಬಾರಿ ಇಲ್ಲಿಂದ ಸ್ಪರ್ಧಿಸಿದ್ದರು. ಅವರ ಪತ್ನಿ ಜಸ್ಮಾ ದೇವಿ ಒಮ್ಮೆ ಮತ್ತು ಕುಲದೀಪ್ ನಾಲ್ಕು ಬಾರಿ ಜಯಗಳಿಸಿದ್ದರು.

ಕಾಂಗ್ರೆಸ್ ಪಕ್ಷವು ಈ ಕ್ಷೇತ್ರದಲ್ಲಿ ಜೈ ಪ್ರಕಾಶ್ ಅವರನ್ನು ಕಣಕ್ಕಿಳಿಸಿದೆ. ಅವರು ಮಾಜಿ ಮುಖ್ಯಮಂತ್ರಿ ಭೂಪಿಂದರ್ ಹೂಡಾ ಅವರಿಗೆ ತೀರಾ ಹತ್ತಿರದವರು. ಹಲವು ದಶಕಗಳಿಂದ ಚಾಲ್ತಿಯಲ್ಲಿದ್ದ ಭಜನ್ ಲಾಲ್ ಮತ್ತು ಹೂಡಾ ಕುಟುಂಬಗಳ ಹೊಯ್ದಾಟಕ್ಕೆ ಈ ಉಪಚುನಾವಣೆಯು ಮತ್ತೊಮ್ಮೆ ವೇದಿಕೆ ಒದಗಿಸಿದೆ.

ಮುನುಗೋಡ್, ತೆಲಂಗಾಣ

ಕಳೆದ ಆಗಸ್ಟ್ ತಿಂಗಳಲ್ಲಿ ಕೊಮಟಿರೆಡ್ಡಿ ರಾಜ್ ಗೋಪಾಲ್ ರೆಡ್ಡಿ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಈ ಉಪಚುನಾವಣೆ ಅನಿವಾರ್ಯವಾಯಿತು. ಈ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಕೆಸಿಆರ್ ಅವರ ಟಿಆರ್​ಎಸ್ ನಡುವೆ ತ್ರಿಕೋನ ಸ್ಪರ್ಧೆ ಇದೆ. ಆದರೆ ಬಿಜೆಪಿ ಮತ್ತು ಟಿಆರ್​ಎಸ್ ನಡುವೆ ನೇರ ಹಣಾಹಣಿ ಇದ್ದಂತೆ ಕಾಣುತ್ತಿದೆ. ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು 2024ರ ಲೋಕಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ತಮ್ಮ ರಾಜಕೀಯ ಮಹತ್ವಾಕಾಂಕ್ಷೆಯ ಭಾಗವಾಗಿ ಟಿಆರ್​ಎಸ್​ ಪಕ್ಷವನ್ನು ಬಿಆರ್​ಎಸ್​ ಎಂದು ಬದಲಿಸಿದ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದು. ಮುಂದಿನ ವರ್ಷ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರ ಸ್ಥಾಪನೆಯ ಕನಸು ಕಾಣುತ್ತಿದೆ. ಕಳೆದ 2018ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿ ಕೇವಲ ಒಂದೇ ಒಂದು ಸ್ಥಾನ ಪಡೆದುಕೊಂಡಿತ್ತು.

ಮೊಕಮಾ ಮತ್ತು ಗೋಪಾಲ್​ಗಂಜ್, ಬಿಹಾರ

ಆಡಳಿತಾರೂಢ ಜೆಡಿಯು ಪಕ್ಷವು ಬಿಜೆಪಿಯೊಂದಿಗೆ ಸಂಬಂಧ ಕಡಿದುಕೊಂಡು, ಆರ್​ಜೆಡಿ ಜೊತೆಗೆ ಕೈಜೋಡಿಸಿದ ನಂತರ ನಡೆಯುತ್ತಿರುವ ಉಪ ಚುನಾವಣೆ ಇದು. ಕಾಂಗ್ರೆಸ್ ಮತ್ತು ಇತರ ಪಕ್ಷಗಳೂ ಇದೀಗ ಮೈತ್ರಿಕೂಟ ರಚಿಸಿಕೊಂಡು ಜೆಡಿಯುಗೆ ಬೆಂಬಲ ನೀಡಿವೆ.

ಅಪರಾಧ ಪ್ರಕರಣದಲ್ಲಿ ಶಿಕ್ಷೆ ಘೋಷಣೆಯಾದ ಹಿನ್ನೆಲೆಯಲ್ಲಿ ಆರ್​ಜೆಡಿಯ ಅನಂತ್ ಸಿಂಗ್ ತಮ್ಮ ಕ್ಷೇತ್ರವನ್ನು ತೆರವು ಮಾಡಬೇಕಾಯಿತು. ಅವರು ಈಗ ಜೈಲಿನಲ್ಲಿದ್ದಾರೆ. ಮಹಾಮೈತ್ರಿಕೂಟವು ಇದೀಗ ಅವರ ಪತ್ನಿಯನ್ನು ಕಣಕ್ಕೆ ಇಳಿಸಿದೆ. ಬಿಜೆಪಿ ಶಾಸಕ ಸುಭಾಷ್ ಸಿಂಗ್ ಸಾವಿನ ಹಿನ್ನೆಲೆಯಲ್ಲಿ ಗೋಪಾಲ್ ಕ್ಷೇತ್ರವು ತೆರವಾಗಿತ್ತು. ಅವರ ಪತ್ನಿ ಇದೀಗ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಗೋಲಾ ಗೋಕರ್ಣನಾಥ್, ಉತ್ತರ ಪ್ರದೇಶ

ಉತ್ತರ ಪ್ರದೇಶದ ಗೋಲಾ ಗೋಕರ್ಣನಾತ್ ಮತ್ತು ಒಡಿಶಾದ ಧಾಮ್​ನಗರ್​ ಕ್ಷೇತ್ರಗಳಲ್ಲಿ ಬಿಜೆಪಿಯು ತನ್ನ ಅಧೀನದಲ್ಲಿದ್ದ ಕ್ಷೇತ್ರವನ್ನು ಮತ್ತೆ ಜಯಿಸುವ ವಿಶ್ವಾಸದಲ್ಲಿದೆ. ಎರಡೂ ಕ್ಷೇತ್ರಗಳಲ್ಲಿ ದಿವಂಗತ ಶಾಸಕರ ಮಕ್ಕಳನ್ನೇ ಬಿಜೆಪಿ ಕಣಕ್ಕಿಳಿಸಿದೆ. ಬಿಜೆಪಿ ಶಾಸಕ ಅರವಿಂದ್ ಗಿರಿ ಅವರು ಕಳೆದ ಸೆ 6ರಂದು ಮೃತಪಟ್ಟ ಹಿನ್ನೆಲೆಯಲ್ಲಿ ಗೋಲಾ ಗೋಕರ್ಣನಾಥ್ ಕ್ಷೇತ್ರದಲ್ಲಿ ಚುನಾವಣೆ ಅನಿವಾರ್ಯ ಅಯಿತು. ಬಿಎಸ್​ಪಿ ಮತ್ತು ಕಾಂಗ್ರೆಸ್​ ಪಕ್ಷಗಳು ಈ ಕ್ಷೇತ್ರದಲ್ಲಿ ಸ್ಪರ್ಧಿಸಿಲ್ಲ. ಬಿಜೆಪಿಯ ಅಮನ್ ಗಿರಿ ಅವರ ಎದುರು ಸಮಾಜವಾದಿ ಪಕ್ಷದ ವಿನಯ್ ತಿವಾರಿ ಸ್ಪರ್ಧಿಸಿದ್ದಾರೆ. ವಿನಯ್ ತಿವಾರಿ ಇದೇ ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ.

ಧಾಮ್​ನಗರ್, ಒಡಿಶಾ

ಒಡಿಶಾದ ಆಡಳಿತಾರೂಢ ಬಿಜೆಡಿ ಪಕ್ಷವು ಅದಂತಿ ದಾಸ್ ಅವರನ್ನು ಕಣಕ್ಕಿಳಿದಿದೆ. ಧಾಮ್​ನಗರ್ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಐವರು ಅಭ್ಯರ್ಥಿಗಳ ಪೈಕಿ ಏಕೈಕ ಮಹಿಳಾ ಅಭ್ಯರ್ಥಿ ಇವರು. ಬಿಜೆಪಿ ಶಾಸಕ ಬಿಷ್ಣು ಚರಣ್ ಸೇಥಿ ಅವರ ಸಾವಿನಿಂದಾಗಿ ಇಲ್ಲಿ ಉಪ-ಚುನಾವಣೆ ನಡೆಯಬೇಕಾದ ಅನಿವಾರ್ಯತೆ ಸೃಷ್ಟಿಯಾಯಿತು. ಕೇಸರಿ ಪಕ್ಷವು ಸೇಥಿ ಅವರ ಮಗ ಸೂರ್ಯಬಂಶಿ ಸೂರಜ್ ಅವರನ್ನು ಕ್ಷೇತ್ರದಲ್ಲಿ ಕಣಕ್ಕಿಳಿಸಿದೆ. ಈ ಕ್ಷೇತ್ರದ ಫಲಿತಾಂಶವು ವಾಸ್ತವಕ್ಕೆ ಕನ್ನಡಿ ಹಿಡಿಯಲಿದೆ.

ಆಡಳಿತಾರೂಢ ಬಿಜೆಪಿ ಪಕ್ಷವು 2019ರ ಒಡಿಶಾ ವಿಧಾನಸಭಾ ಚುನಾವಣೆಗಳಲ್ಲಿ ಮತಗಳಿಕೆ ಕುಗ್ಗಿಸಿಕೊಂಡಿತ್ತು. ಆದರೆ ಪಂಚಾಯಿತಿ ಚುನಾವಣೆಗಳಲ್ಲಿ ಹಳೆಯ ಸಾಧನೆ ಮರುಕಳಿಸಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿ ಒಡಿಶಾದ 21 ಕ್ಷೇತ್ರಗಳ ಪೈಕಿ 8ರಲ್ಲಿ ಬಿಜೆಪಿ ಜಯಗಳಿಸಿತ್ತು. ಕಳೆದ ಮೂರು ವರ್ಷಗಳಲ್ಲಿ ಕಳೆದುಕೊಂಡಿದ್ದ ಪ್ರಭಾವವನ್ನು ಇತ್ತೀಚೆಗೆ ಬಿಜೆಪಿ ಮತ್ತೆ ಪಡೆದುಕೊಂಡಿರುವಂತೆ ಭಾಸವಾಗುತ್ತಿದೆ. ಈ ಚುನಾವಣೆ ಕುತೂಹಲ ಕೆರಳಿಸಿದೆ.

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!