AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿ, ಟೀ ಕುಡಿಯೋಕೆ ಇಲ್ಲಿಗೆ ಬರಬೇಕಾ: ಮಾತನಾಡಲು ಅವಕಾಶ ಕೋರಿದ ಶಿವಲಿಂಗೇಗೌಡ

ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸ್ಪೀಕರ್​ ಸ್ಥಾನದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಖಾರವಾಗಿ ಪ್ರಶ್ನಿಸಿದರು.

ಕಾಫಿ, ಟೀ ಕುಡಿಯೋಕೆ ಇಲ್ಲಿಗೆ ಬರಬೇಕಾ: ಮಾತನಾಡಲು ಅವಕಾಶ ಕೋರಿದ ಶಿವಲಿಂಗೇಗೌಡ
ಅರಸೀಕೆರೆ ಶಾಸಕ ಶಿವಲಿಂಗೇಗೌಡ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 20, 2021 | 3:58 PM

Share

ಬೆಂಗಳೂರು: ‘ನೀವು ಕೂತ್ಕೊ ಅಂದ್ರೆ ಕೈಮುಗಿದು ಕೂತು ಬಿಡ್ತೀನಿ. ನಮಗೂ ಮಾತಾಡೋಕೆ ಅವಕಾಶ ಕೊಡಿ. ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸ್ಪೀಕರ್​ ಸ್ಥಾನದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಖಾರವಾಗಿ ಪ್ರಶ್ನಿಸಿದರು.

ವಿಧಾನಸಭೆಯಲ್ಲಿ ಬೆಲೆ ಏರಿಕೆ ಬಗ್ಗೆ ನಡೆಯುತ್ತಿದದ ಚರ್ಚೆಗೆ ಉತ್ತರ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದ್ದು ನಿಂತರು. ಈ ವೇಳೆ ಮಾತನಾಡಲು ನಿಂತ ಶಿವಲಿಂಗೇಗೌಡರಿಗೆ ಕುಳಿತುಕೊಳ್ಳುವಂತೆ ಕುಮಾರ್ ಬಂಗಾರಪ್ಪ ಸೂಚಿಸಿದರು. ಸ್ಪೀಕರ್ ಸ್ಥಾನದಲ್ಲಿದ್ದವರ ಸೂಚನೆಯಿಂದ ಬೇಸರಗೊಂಡ ಶಿವಲಿಂಗೇಗೌಡ ಮೇಲಿನಂತೆ ಪ್ರತಿಕ್ರಿಯಿಸಿದರು. ನಂತರ ಮಾತು ಮುಂದುವರಿಸಲು ಶಿವಲಿಂಗೇಗೌಡರಿಗೆ ಕುಮಾರ್ ಬಂಗಾರಪ್ಪ ಅವಕಾಶ ನೀಡಿದರು.

ನಾವು ಪೆಟ್ರೋಲಿಯಂ ಉತ್ಪನ್ನಗಳಿಗಾಗಿ ವಿದೇಶವನ್ನು ಅವಲಂಬಿಸಿದ್ದೇವೆ. ನಮ್ಮ ದೇಶದಲ್ಲಿ ಕೇವಲ ಶೇ 10ರಷ್ಟು ಮಾತ್ರ ಉತ್ಪಾದನೆಯಾಗುತ್ತಿದೆ. ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ಇಂಧನದ ಮೇಲಿನ ಸೆಸ್​ ಹೆಚ್ಚಾಗಿವೆ. ಮೊದಮೊದಲು ಸಬ್ಸಿಡಿ ಹಣವನ್ನು ನೇರವಾಗಿ ಗ್ರಾಹಕರಿಗೆ ಕೊಡುತ್ತಿದ್ದರು. ಆದರೆ ನಂತರದ ದಿನಗಳಲ್ಲಿ ಆ ಪದ್ಧತಿಯನ್ನೂ ಕೈಬಿಟ್ಟರು ಎಂದು ಟೀಕಿಸಿದರು.

ಜೆಡಿಎಸ್ ಧರಣಿ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಜೆಡಿಎಸ್ ಸದಸ್ಯರು ಧರಣಿ ಆರಂಭಿಸಿದರು. ಮೂರು ವಿಚಾರಗಳ ಮೇಲೆ ಚರ್ಚೆಗೆ ನೊಟೀಸ್ ಕೊಟ್ಟಿದ್ದೇವೆ. ಮಾತಿಗೆ ಅವಕಾಶ ಕೊಟ್ಟಿಲ್ಲ ಎಂದು ಪ್ರತಿಭಟನೆ ನಡೆಸಿದರು. ಮಾತನಾಡಲು ಅವಕಾಶ ನೀಡುವುದಾಗಿ ಸ್ಪೀಕರ್ ಭರವಸೆ ನೀಡಿದ ನಂತರ ಜೆಡಿಎಸ್ ಶಾಸಕರು ಪ್ರತಿಭಟನೆ ಹಿಂಪಡೆದರು.

(Assembly Session JDS MLA Shivalingegowda Expresses Anger Over Speaker Decision Demands time to speak)

ಇದನ್ನೂ ಓದಿ: ರೈತ ಚಳವಳಿ ಸ್ಪಾನ್ಸರ್ಡ್​: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ರೈತರ ಹೋರಾಟ

ಇದನ್ನೂ ಓದಿ: ತೋರಿಕೆಗೆ ಗಾಂಧಿ ಆದರ್ಶವನ್ನಿಟ್ಟುಕೊಂಡಿರುವ ಕಾಂಗ್ರೆಸ್​ನಿಂದ ದೇಶಕ್ಕೆ ದೊಡ್ಡ ಹಾನಿಯಾಗಿದೆ; ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಟೀಕೆ

Published On - 3:57 pm, Mon, 20 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ