AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿ, ಟೀ ಕುಡಿಯೋಕೆ ಇಲ್ಲಿಗೆ ಬರಬೇಕಾ: ಮಾತನಾಡಲು ಅವಕಾಶ ಕೋರಿದ ಶಿವಲಿಂಗೇಗೌಡ

ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸ್ಪೀಕರ್​ ಸ್ಥಾನದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಖಾರವಾಗಿ ಪ್ರಶ್ನಿಸಿದರು.

ಕಾಫಿ, ಟೀ ಕುಡಿಯೋಕೆ ಇಲ್ಲಿಗೆ ಬರಬೇಕಾ: ಮಾತನಾಡಲು ಅವಕಾಶ ಕೋರಿದ ಶಿವಲಿಂಗೇಗೌಡ
ಅರಸೀಕೆರೆ ಶಾಸಕ ಶಿವಲಿಂಗೇಗೌಡ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 20, 2021 | 3:58 PM

Share

ಬೆಂಗಳೂರು: ‘ನೀವು ಕೂತ್ಕೊ ಅಂದ್ರೆ ಕೈಮುಗಿದು ಕೂತು ಬಿಡ್ತೀನಿ. ನಮಗೂ ಮಾತಾಡೋಕೆ ಅವಕಾಶ ಕೊಡಿ. ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸ್ಪೀಕರ್​ ಸ್ಥಾನದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಖಾರವಾಗಿ ಪ್ರಶ್ನಿಸಿದರು.

ವಿಧಾನಸಭೆಯಲ್ಲಿ ಬೆಲೆ ಏರಿಕೆ ಬಗ್ಗೆ ನಡೆಯುತ್ತಿದದ ಚರ್ಚೆಗೆ ಉತ್ತರ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದ್ದು ನಿಂತರು. ಈ ವೇಳೆ ಮಾತನಾಡಲು ನಿಂತ ಶಿವಲಿಂಗೇಗೌಡರಿಗೆ ಕುಳಿತುಕೊಳ್ಳುವಂತೆ ಕುಮಾರ್ ಬಂಗಾರಪ್ಪ ಸೂಚಿಸಿದರು. ಸ್ಪೀಕರ್ ಸ್ಥಾನದಲ್ಲಿದ್ದವರ ಸೂಚನೆಯಿಂದ ಬೇಸರಗೊಂಡ ಶಿವಲಿಂಗೇಗೌಡ ಮೇಲಿನಂತೆ ಪ್ರತಿಕ್ರಿಯಿಸಿದರು. ನಂತರ ಮಾತು ಮುಂದುವರಿಸಲು ಶಿವಲಿಂಗೇಗೌಡರಿಗೆ ಕುಮಾರ್ ಬಂಗಾರಪ್ಪ ಅವಕಾಶ ನೀಡಿದರು.

ನಾವು ಪೆಟ್ರೋಲಿಯಂ ಉತ್ಪನ್ನಗಳಿಗಾಗಿ ವಿದೇಶವನ್ನು ಅವಲಂಬಿಸಿದ್ದೇವೆ. ನಮ್ಮ ದೇಶದಲ್ಲಿ ಕೇವಲ ಶೇ 10ರಷ್ಟು ಮಾತ್ರ ಉತ್ಪಾದನೆಯಾಗುತ್ತಿದೆ. ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ಇಂಧನದ ಮೇಲಿನ ಸೆಸ್​ ಹೆಚ್ಚಾಗಿವೆ. ಮೊದಮೊದಲು ಸಬ್ಸಿಡಿ ಹಣವನ್ನು ನೇರವಾಗಿ ಗ್ರಾಹಕರಿಗೆ ಕೊಡುತ್ತಿದ್ದರು. ಆದರೆ ನಂತರದ ದಿನಗಳಲ್ಲಿ ಆ ಪದ್ಧತಿಯನ್ನೂ ಕೈಬಿಟ್ಟರು ಎಂದು ಟೀಕಿಸಿದರು.

ಜೆಡಿಎಸ್ ಧರಣಿ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಜೆಡಿಎಸ್ ಸದಸ್ಯರು ಧರಣಿ ಆರಂಭಿಸಿದರು. ಮೂರು ವಿಚಾರಗಳ ಮೇಲೆ ಚರ್ಚೆಗೆ ನೊಟೀಸ್ ಕೊಟ್ಟಿದ್ದೇವೆ. ಮಾತಿಗೆ ಅವಕಾಶ ಕೊಟ್ಟಿಲ್ಲ ಎಂದು ಪ್ರತಿಭಟನೆ ನಡೆಸಿದರು. ಮಾತನಾಡಲು ಅವಕಾಶ ನೀಡುವುದಾಗಿ ಸ್ಪೀಕರ್ ಭರವಸೆ ನೀಡಿದ ನಂತರ ಜೆಡಿಎಸ್ ಶಾಸಕರು ಪ್ರತಿಭಟನೆ ಹಿಂಪಡೆದರು.

(Assembly Session JDS MLA Shivalingegowda Expresses Anger Over Speaker Decision Demands time to speak)

ಇದನ್ನೂ ಓದಿ: ರೈತ ಚಳವಳಿ ಸ್ಪಾನ್ಸರ್ಡ್​: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ರೈತರ ಹೋರಾಟ

ಇದನ್ನೂ ಓದಿ: ತೋರಿಕೆಗೆ ಗಾಂಧಿ ಆದರ್ಶವನ್ನಿಟ್ಟುಕೊಂಡಿರುವ ಕಾಂಗ್ರೆಸ್​ನಿಂದ ದೇಶಕ್ಕೆ ದೊಡ್ಡ ಹಾನಿಯಾಗಿದೆ; ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಟೀಕೆ

Published On - 3:57 pm, Mon, 20 September 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ