AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುದಾನ ತಾರತಮ್ಯ ವಿರೋಧಿಸಿ ಸದನದಲ್ಲಿ ಜೆಡಿಎಸ್ ಸದಸ್ಯರ ಪ್ರತಿಭಟನೆ; ರೇವಣ್ಣ ವಿರುದ್ಧ ಸ್ಪೀಕರ್ ಕಾಗೇರಿ ಕೆಂಡಾಮಂಡಲ

ಈ ಸಂದರ್ಭ ಕ್ಷಮೆ ಕೇಳುವಂತೆ ಹೆಚ್.ಡಿ. ರೇವಣ್ಣಗೆ ಬಿಜೆಪಿ ಆಗ್ರಹ ವ್ಯಕ್ತಪಡಿಸಿದೆ. ಸ್ಪೀಕರ್ ಪೀಠಕ್ಕೆ ಅಗೌರವ ತರುವ ರೀತಿ ಮಾತನಾಡಿಲ್ಲ. ನಾನು ಅಗೌರವ ತರುವ ರೀತಿ ಮಾತನಾಡಿಲ್ಲ ಎಂದು ರೇವಣ್ಣ ತಿಳಿಸಿದ್ದಾರೆ.

ಅನುದಾನ ತಾರತಮ್ಯ ವಿರೋಧಿಸಿ ಸದನದಲ್ಲಿ ಜೆಡಿಎಸ್ ಸದಸ್ಯರ ಪ್ರತಿಭಟನೆ; ರೇವಣ್ಣ ವಿರುದ್ಧ ಸ್ಪೀಕರ್ ಕಾಗೇರಿ ಕೆಂಡಾಮಂಡಲ
(ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Sep 21, 2021 | 11:00 PM

Share

ಬೆಂಗಳೂರು: ಅನುದಾನ ತಾರತಮ್ಯ ವಿರೋಧಿಸಿ ಸದನದಲ್ಲಿ ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ವಿಧಾನಸಭೆಯಲ್ಲಿ ಬಾವಿಗಿಳಿದು ಜೆಡಿಎಸ್ ಸದಸ್ಯರು ಧರಣಿ ನಡೆಸಿದ್ದಾರೆ. ಈ ವೇಳೆ, ಜೆಡಿಎಸ್ ನಾಯಕ ಹೆಚ್.ಡಿ. ರೇವಣ್ಣ ವಿರುದ್ಧ ಸ್ಪೀಕರ್ ಕಾಗೇರಿ ಕೆಂಡಾಮಂಡಲವಾಗಿದ್ದಾರೆ. ದೇಶಕ್ಕೆ ಪ್ರಧಾನಿ ಕೊಟ್ಟ ಪಕ್ಷದವರು ನಾವು ಎಂದು ಏನುಬೇಕಾದ್ರೂ ಮಾತಾಡಬಹುದು ಅಂದುಕೊಂಡಿದ್ದೀರಾ? ಸಭಾಧ್ಯಕ್ಷರ ಸ್ಥಾನದ ಬಗ್ಗೆ ಮಾತಾಡುವುದನ್ನು ಸಹಿಸಲ್ಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಿಟ್ಟಾಗಿದ್ದಾರೆ.

ಈ ಸಂದರ್ಭ ಕ್ಷಮೆ ಕೇಳುವಂತೆ ಹೆಚ್.ಡಿ. ರೇವಣ್ಣಗೆ ಬಿಜೆಪಿ ಆಗ್ರಹ ವ್ಯಕ್ತಪಡಿಸಿದೆ. ಸ್ಪೀಕರ್ ಪೀಠಕ್ಕೆ ಅಗೌರವ ತರುವ ರೀತಿ ಮಾತನಾಡಿಲ್ಲ. ನಾನು ಅಗೌರವ ತರುವ ರೀತಿ ಮಾತನಾಡಿಲ್ಲ ಎಂದು ರೇವಣ್ಣ ತಿಳಿಸಿದ್ದಾರೆ.

ಆನ್​ಲೈನ್ ಜೂಜಿಗೆ ಕಡಿವಾಣ ಹಾಕುವ ಉದ್ದೇಶದಿಂದ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ ವಿಧಾನಸಭೆಯಲ್ಲಿ ಪೊಲೀಸ್ ತಿದ್ದುಪಡಿ ವಿಧೇಯಕ ಮಂಡಿಸಿದ್ದಾರೆ. ಬದಲಾಗುತ್ತಿರುವ ಸವಾಲುಗಳನ್ನು ನಿರ್ವಹಿಸಲು ಇಂಥ ಕಾನೂನು ಅಗತ್ಯವಿತ್ತು ಎಂದು ಸಚಿವರು ವಿವರಸಿದ್ದಾರೆ.

ವಿಧೇಯಕದ ಮೇಲೆ ನಡೆದ ಚರ್ಚೆಯಲ್ಲಿ ಮಾತನಾಡಿದ ಶಿವಾಜಿನಗರದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್, ವಿದೇಶಗಳಲ್ಲಿ ಸರ್ವರ್ ಇರಿಸಿಕೊಂಡು ಬೆಂಗಳೂರಿನಲ್ಲಿ ವ್ಯವಹಾರ ನಡೆಸುವ ದುಷ್ಟಕೂಟಗಳನ್ನು ಹೇಗೆ ಮಟ್ಟ ಹಾಕುತ್ತೀರಿ? ತಾಂತ್ರಿಕ ಸುಧಾರಣೆಗಳು ಅಗತ್ಯವಿದೆ ಎಂದು ಸಲಹೆ ನೀಡಿದ್ದಾರೆ.ರಾಯಚೂರು ಮತ್ತು ಬೆಂಗಳೂರು ನಗರ ಜಿಲ್ಲೆಗಳ ಹಲವೆಡೆ ಜೂಜುಕೇಂದ್ರಗಳನ್ನು ಮುಚ್ಚಿಸಿದ್ದೇವೆ. ಯಾವುದೇ ಪ್ರಭಾವ ಅಥವಾ ಒತ್ತಡಕ್ಕೆ ತಲೆಬಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ಚಾಣಕ್ಯ ವಿವಿ ವಿಧೇಯಕಕ್ಕೆ ಅಂಗೀಕಾರ: ಇಂಥ ಇನ್ನೂ 10 ವಿವಿಗಳು ಬಂದ್ರೂ ಸೌಲಭ್ಯ ಕೊಡ್ತೇವೆ ಎಂದ ಸಿಎಂ

ಇದನ್ನೂ ಓದಿ: ರೋಡ್ ಹಂಪ್‌ಗಳ ಬಗ್ಗೆ ಸದನದಲ್ಲಿ ವ್ಯಗ್ರರಾದ ಶಾಸಕ ರಮೇಶ್ ಕುಮಾರ್; ಬೇಜವಾಬ್ದಾರಿ ಅಧಿಕಾರಿಗಳ ಸಸ್ಪೆಂಡ್‌ ಮಾಡಿ ಅಂದರು

Published On - 10:57 pm, Tue, 21 September 21

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?