AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ ನ.6ರಂದು ರಾಜ್ಯಮಟ್ಟದ ಬೃಹತ್ ಎಸ್​ಟಿ ಸಮಾವೇಶ ಆಯೋಜಿಸಿದ ಬಿಜೆಪಿ

ರಾಜ್ಯದಲ್ಲಿ ಎಸ್​ಸಿ ಎಸ್​ಟಿ ಮೀಸಲಾತಿ ಪ್ರಮಾಣದಲ್ಲಿ ಹೆಚ್ಚಳವಾದ ಬೆನ್ನಲ್ಲೆ ಇದರ ಲಾಭ ಪಡೆದುಕೊಳ್ಳಲು ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ನ.6ರಂದು ರಾಜ್ಯಮಟ್ಟದ ಎಸ್​ಟಿ ಸಮಾವೇಶವನ್ನು ಆಯೋಜಿಸಿದೆ.

ಬಳ್ಳಾರಿಯಲ್ಲಿ ನ.6ರಂದು ರಾಜ್ಯಮಟ್ಟದ ಬೃಹತ್ ಎಸ್​ಟಿ ಸಮಾವೇಶ ಆಯೋಜಿಸಿದ ಬಿಜೆಪಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 22, 2022 | 2:39 PM

Share

ಬಳ್ಳಾರಿ: ರಾಜ್ಯದಲ್ಲಿ ಎಸ್​ಸಿ ಎಸ್​ಟಿ ಮೀಸಲಾತಿ ಪ್ರಮಾಣದಲ್ಲಿ ಹೆಚ್ಚಳವಾದ ಬೆನ್ನಲ್ಲೆ ಇದರ ಲಾಭ ಪಡೆದುಕೊಳ್ಳಲು ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ನ.6ರಂದು ರಾಜ್ಯಮಟ್ಟದ ಬೃಹತ್ ಎಸ್​ಟಿ ಸಮಾವೇಶವನ್ನು ಆಯೋಜಿಸಿದೆ. ಈ ಕಾರ್ಯಕ್ರಮದ ಮೂಲಕ ಮೀಸಲಾತಿ ಹೆಚ್ಚಳ ಮಾಡಿರುವುದು ಬಿಜೆಪಿ ಎಂಬ ಮಾಹಿತಿಯನ್ನು ಮನೆ ಮನೆಗೆ ‌ಮುಟ್ಟಿಸಲು‌ ಯೋಜನೆ ರೂಪಿಸಿದೆ.

ರಾಜ್ಯ ಬಿಜೆಪಿ ಎಸ್​ಟಿ ಮೋರ್ಚಾ ಸಮಾವೇಶ ಹಿನ್ನೆಲೆ ಬಿಜೆಪಿ ನಾಯಕರು ಪ್ರಮುಖರ ಸಭೆ ಕರೆದಿದ್ದು, ಸಾರಿಗೆ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿದ್ದಾರೆ. ಈ ವೇಳೆ ಸಚಿವ ಆನಂದ ಸಿಂಗ್, ಸಚಿವ ಶ್ರೀರಾಮುಲು, ಶಾಸಕ ಸೋಮಶೇಖರ್ ರೆಡ್ಡಿ, ಸಿರಗುಪ್ಪ ಶಾಸಕ ಎಂ.ಎಸ್ ಸೋಮಲಿಂಗಪ್ಪ, ಎನ್.ವೈ ಗೋಪಾಲಕೃಷ್ಣ, ಹೇಮಲತಾ ನಾಯಕ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ. ಸಂಸದರಾದ ಕರಡಿ ಸಂಗಣ್ಣ, ದೇವೇಂದ್ರಪ್ಪ, ಮಾಜಿ ಸಂಸದೆ ಜೆ ಶಾಂತಾ, ಮಾಜಿ ಶಾಸಕ ಸುರೇಶಬಾಬು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ನಿರ್ಧರಿಸಿದೆ. ಅಕ್ಟೋಬರ್ 20ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಗೆ ಅನುಮೋದನೆ ಪಡೆಯಲಿದೆ. ಅನುಮೋದನೆ ಪಡೆದ ಬಳಿಕ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲಿದೆ. ನಂತರ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕವನ್ನು ಮಂಡನೆ ಮಾಡಲಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Sat, 22 October 22

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್