AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ದೇವರು ಹೇಳಿಕೆ: ಸತೀಶ್​ ಜಾರಕಿಹೊಳಿ ಊಸರವಳ್ಳಿಯಂತೆ ಎಂದ ಯತ್ನಾಳ್

ಸತೀಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಆಕ್ರೋಶ ವ್ಯಕ್ತಡಿಸಿರುವ ಯತ್ನಾಳ್, ಇಂಥ ಊಸರವಳ್ಳಿಯಂತೆ ಬಣ್ಣ ಬದಲಿಸುವ ರಾಜಕಾರಣಿಗಳಿಂದಲೇ ಉತ್ತರ ಕರ್ನಾಟಕ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ಟೀಕಿಸಿದ್ದಾರೆ.

ಸಿದ್ದರಾಮಯ್ಯ ದೇವರು ಹೇಳಿಕೆ: ಸತೀಶ್​ ಜಾರಕಿಹೊಳಿ ಊಸರವಳ್ಳಿಯಂತೆ ಎಂದ ಯತ್ನಾಳ್
ಸತೀಶ್ ಜಾರಕಿಹೊಳಿ & ಬಸನಗೌಡ ಪಾಟೀಲ್ ಯತ್ನಾಳ್
TV9 Web
| Edited By: |

Updated on: Jan 08, 2024 | 8:46 AM

Share

ಬೆಂಗಳೂರು, ಜನವರಿ 8: ಸಿಎಂ ಸಿದ್ದರಾಮಯ್ಯ ಅವರನ್ನು ದೇವರಂತೆ ನೋಡುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿರುವುದಕ್ಕೆ ಬಿಜೆಪಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ತಿರುಗೇಟು ನೀಡಿದ್ದಾರೆ. ಸತೀಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಆಕ್ರೋಶ ವ್ಯಕ್ತಡಿಸಿರುವ ಯತ್ನಾಳ್, ಇಂಥ ಊಸರವಳ್ಳಿಯಂತೆ ಬಣ್ಣ ಬದಲಿಸುವ ರಾಜಕಾರಣಿಗಳಿಂದಲೇ ಉತ್ತರ ಕರ್ನಾಟಕ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ಟೀಕಿಸಿದ್ದಾರೆ.

‘ವ್ಯಕ್ತಿ ಪೂಜೆ ಮಾಡೋದಿಲ್ಲ, ದೇವರಲ್ಲಿ ನಂಬಿಕೆಯಿಲ್ಲ, ಹಿಂದೂ ಪೂಜೆಗಳಲ್ಲಿ, ಆಚರಣೆಗಳಲ್ಲಿ ನಂಬಿಕೆ ಇಲ್ಲದವರು ರಾಜಕೀಯ ಅಸ್ತಿತ್ವಕ್ಕಾಗಿ ಸಿದ್ದರಾಮಯ್ಯನವರನ್ನು ತಮ್ಮ ‘ಮನೆ ದೇವ’ರಾಗಿ ಮಾಡಿಕೊಂಡಿರುವ ನೀವು (ಸತೀಶ್ ಜಾರಕಿಹೊಳಿ ಉದ್ದೇಶಿಸಿ) ಎಂತಹ ಅವಕಾಶವಾದಿಗಳು ಎಂದು ಜನತೆಗೆ ಗೊತ್ತಾಗುತ್ತಿದೆ. ಸಂದರ್ಭಕ್ಕೆ ತಕ್ಕಂತೆ ಊಸರವಳ್ಳಿಯ ರೀತಿ ಬಣ್ಣ ಬದಲಿಸುವ ರಾಜಕಾರಣಿಗಳಿಂದಲೇ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ಮರೀಚಿಕೆ ಆಗಿರುವುದು’ ಎಂದು ಯತ್ನಾಳ್ ಉಲ್ಲೇಖಿಸಿದ್ದಾರೆ.

ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಹುಕ್ಕೇರಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ನೆರವೇರಿಸಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ, ಎಲ್ಲ ಕಾರ್ಯಕರ್ತರಂತೆ ನಾನೂ ಸಹ ಸಿಎಂ ಸಿದ್ದರಾಮಯ್ಯ ಅವರನ್ನು ದೇವರಂತೆ ನೋಡುತ್ತೇನೆ. ಕಾರ್ಯಕರ್ತರು ಅವರವರ ನಾಯಕರನ್ನು ಭಕ್ತಿಯಿಂದ ದೇವರಂತೆ ಕಾಣುತ್ತಾರೆ. ಅದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ರಿಂದ ಆಮಿಷ: ಹೆಚ್​ಡಿ ಕುಮಾರಸ್ವಾಮಿ ಆರೋಪ

ಇತ್ತೀಚೆಗಷ್ಟೇ ಆಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಆಹ್ವಾನದ ವಿಚಾರವಾಗಿ ಮಾತನಾಡಿದ್ದ ಮಾಜಿ ಸಚಿವ ಹೆಚ್ ಆಂಜನೇಯ, ಸಿಎಂ ಸಿದ್ದರಾಮಯ್ಯ ಅವರನ್ನು ರಾಮನಿಗೆ ಹೋಲಿಸಿದ್ದರು. ಸಿದ್ದರಾಮಯ್ಯ ಅವರೇ ‘ರಾಮ’ ಎಂದು ಹೇಳಿದ್ದರು. ಇದಕ್ಕೆ ಕೂಡ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಇದೀಗ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಅವರನ್ನು ದೇವರು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ